ಅಣ್ಣಾಮಲೈ 
ದೇಶ

ThinkEdu Conclave 2025: ತಮಿಳುನಾಡು ಎರಡು ದಶಕ ಹಿಂದೆಕ್ಕೆ ಹೋಗಿದೆ, 2026ರಲ್ಲಿ ಬಿಜೆಪಿ ಅಧಿಕಾರಕ್ಕೆ- ಅಣ್ಣಾಮಲೈ

2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಅಣ್ಣಾಮಲೈ ವಿಶ್ವಾಸ ವ್ಯಕ್ತಪಡಿಸಿದರು.

ಚೆನ್ನೈ: ತಮಿಳುನಾಡು ಎರಡು ದಶಕಗಳ ಹಿಂದೆಕ್ಕೆ ಹೋಗಿದೆ. ರಾಜ್ಯವು ಈಗ ಸೂಸ್ಥಿತಿಯಲ್ಲಿಲ್ಲ ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ಹೇಳಿದ್ದಾರೆ.

ಚೆನ್ನೈನಲ್ಲಿ ನಡೆಯುತ್ತಿರುವ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ನ ಥಿಂಕ್ ಎಡು ಕಾನ್ಕ್ಲೇವ್ 2025 ರಲ್ಲಿ ಮಾತನಾಡಿದ ಅಣ್ಣಾಮಲೈ, ತಳಮಟ್ಟದಲ್ಲಿ ಸೇರಿದಂತೆ ರಾಜ್ಯದಲ್ಲಿ ಬಿಜೆಪಿ ನೆಲೆ ಕಂಡುಕೊಳ್ಳುತ್ತಿದ್ದು, 2026 ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದ್ರಾವಿಡ ಪಕ್ಷಗಳಂತಹ ಪ್ರಮುಖ ಸಾಂಸ್ಕೃತಿಕ ಐಕಾನ್ ಗಳಿಲ್ಲದೆ ರಾಜ್ಯದಲ್ಲಿ ಬಿಜೆಪಿ ತಡವಾಗಿ ಆರಂಭವಾಗಿದೆ ಎಂದು ಒಪ್ಪಿಕೊಂಡ ಅವರು, ದ್ರಾವಿಡ ರಾಜಕೀಯ ಪಕ್ಷಗಳ ಸಾಂಸ್ಕೃತಿಕ ಐಕಾನ್ ಗಳು ಸಹ ಈಗ ಹಳೆಯದಾಗಿವೆ ಎಂದು ವಾದಿಸಿದರು.

ರಾಜಕೀಯದಲ್ಲಿ ಜನರು ಪರ್ಯಾಯ ಚರ್ಚೆಗಾಗಿ ಕಾಯುತ್ತಿದ್ದಾರೆ ಮತ್ತು ತಮಿಳುನಾಡಿನ ವೈಭವವನ್ನು ಮತ್ತು ಅದರ ಆರ್ಥಿಕತೆಯನ್ನು ಪುನಃಸ್ಥಾಪಿಸಲು ಬದಲಾವಣೆಯ ಅವಶ್ಯಕತೆಯಿದೆ ಎಂದು ಅವರು ಹೇಳಿದರು.

ಥಿಂಕ್‌ಎಡು ಸಮಾವೇಶದ ಎರಡನೇ ದಿನದವಾದ ಇಂದು ಅಣ್ಣಾಮಲೈ ಅವರು ವೇದಿಕೆಯ ಮೇಲೆ ಬರಿಗಾಲಿನಲ್ಲಿ ಕಾಣಿಸಿಕೊಂಡರು. ಒಂದು ತಿಂಗಳ ಹಿಂದೆ ನಡೆದ ಅಣ್ಣಾ ವಿಶ್ವವಿದ್ಯಾಲಯದ ಅತ್ಯಾಚಾರ ಪ್ರಕರಣದ ನಂತರ ಡಿಎಂಕೆ ಸರ್ಕಾರವನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೆ ಚಪ್ಪಲಿ ಧರಿಸುವುದಿಲ್ಲ ಎಂದು ಅಣ್ಣಾಮಲೈ ಪ್ರತಿಜ್ಞೆ ಮಾಡಿದ್ದಾರೆ.

ಟಿಎನ್‌ಐಇ ಸಂಪಾದಕೀಯ ನಿರ್ದೇಶಕ ಪ್ರಭು ಚಾವ್ಲಾ ಅವರು ಚಪ್ಪಲಿ ಧರಿಸದಿರುವ ನಿರ್ಧಾರದ ಬಗ್ಗೆ ಅಣ್ಣಾಮಲೈ ಅವರನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಅಣ್ಣಾಮಲೈ, ತಮ್ಮನ್ನು ತಾವೇ ಶಿಕ್ಷಿಸಿಕೊಳ್ಳುವುದು ತಮಿಳುನಾಡಿನ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದೆ ಮತ್ತು ಜನರೊಂದಿಗೆ ನಿಲ್ಲಲು ಮತ್ತು ಅವರ ಹೋರಾಟಗಳೊಂದಿಗೆ ಸಂಪರ್ಕ ಸಾಧಿಸಲು ಇದು ಒಂದು ಸಾಧನವಾಗಿ ಕಾರ್ಯನಿರ್ವಹಿಸುತ್ತದೆ ಎಂದು ವಿವರಿಸಿದರು.

"ನಾನು ನನ್ನ ಹಳ್ಳಿಗೆ ಭೇಟಿ ನೀಡಿದಾಗಲೂ, ನಮ್ಮ ಸಾಂಸ್ಕೃತಿಕ ಸಂಪ್ರದಾಯಗಳ ಭಾಗವಾಗಿ ಜನರು ಚಾಟಿಯೇಟು ಹೊಡೆಯುವ ಮೂಲಕ ತಮ್ಮನ್ನು ತಾವೇ ಶಿಕ್ಷಿಸಿಕೊಳ್ಳುವುದನ್ನು ನಾನು ನೋಡುತ್ತೇನೆ" ಎಂದು ಅಣ್ಣಾಮಲೈ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT