ಯಮುನಾ ನೀರು ಕುಡಿದ ಹರ್ಯಾಣ ಸಿಎಂ ನಯಾಬ್ ಸಿಂಗ್ ಸೈನಿ 
ದೇಶ

'ನದಿಯಲ್ಲಿ ಅಲ್ಲ.. ನಿಮ್ಮ ಮನಸ್ಸಿನಲ್ಲೇ ವಿಷ ತುಂಬಿದೆ': ಯಮುನಾ ನೀರು ಕುಡಿದು ಕೇಜ್ರಿವಾಲ್ ಗೆ ಹರ್ಯಾಣ ಸಿಎಂ ತಿರುಗೇಟು!

ಅರವಿಂದ್ ಕೇಜ್ರಿವಾಲ್ ಅವರ ದುರದೃಷ್ಟಕರ ಹೇಳಿಕೆಯು ಅವರ ರಾಜಕೀಯ ಲಾಭಕ್ಕಾಗಿ ಜನರ ಮನಸ್ಸಿನಲ್ಲಿ ಭಯವನ್ನು ಹುಟ್ಟುಹಾಕಲು ನೀಡಲಾಗಿದೆ.

ಚಂಡೀಘಡ: ಯಮುನಾ ನದಿಗೆ ಹರ್ಯಾಣ ಸರ್ಕಾರ ವಿಷ ಬೆರೆಸುತ್ತಿದೆ ಎಂಬ ಅರವಿಂದ್ ಕೇಜ್ರಿವಾಲ್ ಆರೋಪಕ್ಕೆ ಹರ್ಯಾಣ ಸಿಎಂ ನಯಾಬ್ ಸಿಂಗ್ ಸೈನಿ ಸ್ನತಃ ತಾವೇ ನದಿಗಿಳಿದು ನೀರು ಕುಡಿಯುವ ಮೂಲಕ ತಿರುಗೇಟು ನೀಡಿದ್ದಾರೆ.

ಹರ್ಯಾಣ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಬುಧವಾರ ದೆಹಲಿಯ ಪಲ್ಲಾ ಗ್ರಾಮದ ಪಲ್ಲಾಘಾಟ್ ಗೆ ಆಗಮಿಸಿ ಸ್ವತಃ ತಾವೇ ನದಿಗಿಳಿದು ಯಮುನಾ ನದಿಯಿಂದ ನೀರು ತೆಗೆದುಕೊಂಡು ಸೇವಿಸಿದರು. ಈ ವೇಳೆ ಮಾತನಾಡಿದ ಅವರು, 'ಹರಿಯಾಣದ ನೀರು ವಿಷಕಾರಿಯಲ್ಲ, ಆದರೆ ನಿಮ್ಮ ಮನಸ್ಸು ಖಂಡಿತವಾಗಿಯೂ ವಿಷದಿಂದ ತುಂಬಿದೆ" ಎಂದು ಕೇಜ್ರಿವಾಲ್ ಗೆ ಖಡಕ್ ತಿರುಗೇಟು ನೀಡಿದರು.

'ಅರವಿಂದ್ ಕೇಜ್ರಿವಾಲ್ ಅವರ ದುರದೃಷ್ಟಕರ ಹೇಳಿಕೆಯು ಅವರ ರಾಜಕೀಯ ಲಾಭಕ್ಕಾಗಿ ಜನರ ಮನಸ್ಸಿನಲ್ಲಿ ಭಯವನ್ನು ಹುಟ್ಟುಹಾಕಲು ನೀಡಲಾಗಿದೆ. ಇಂದು, ನಾನು ಇಲ್ಲಿ ಯಮುನಾ ನದಿಯ ದಡಕ್ಕೆ ಬಂದು ಯಮುನಾದಿಂದ ನೀರು ಕುಡಿದಿದ್ದೇನೆ. ಹರಿಯಾಣದ ಬಿಜೆಪಿ ಸರ್ಕಾರ ಯಮುನಾ ನದಿಗೆ ವಿಷ ಹಾಕಿದೆ ಎಂದು ಅವರು ಹೇಳಿದ್ದರು. ಸಾಮೂಹಿಕ ನರಮೇಧದ ಬಗ್ಗೆ ಅವರು ಮಾತನಾಡಿದರು. ಜಲಸಂಪನ್ಮೂಲ ಪ್ರಾಧಿಕಾರವು ಇಲ್ಲಿಂದ ಮಾದರಿಗಳನ್ನು ತೆಗೆದುಕೊಂಡಿತು ಮತ್ತು ನೀರಿನಲ್ಲಿ ಯಾವುದೇ ವಿಷ ಕಂಡುಬಂದಿಲ್ಲ. ಅರವಿಂದ್ ಕೇಜ್ರಿವಾಲ್ ತಮ್ಮ ಜೀವನದುದ್ದಕ್ಕೂ ಸುಳ್ಳುಗಳನ್ನೇ ಹೇಳಿಕೊಂಡು ಬಂದಿದ್ದಾರೆ ಎಂದು ಕಿಡಿಕಾರಿದರು.

ಇದೇ ವೇಳೆ ದೆಹಲಿ ಸಿಎಂ ಆತಿಶಿ ಅವರ ಆರೋಪಗಳಿಗೂ ತಿರುಗೇಟು ನೀಡಿರುವ ಸೈನಿ, 'ದೆಹಲಿ ಸಿಎಂ ಆತಿಶಿ ಅವರೇ, ವಿಪತ್ತಿನ ಚಪ್ಪಲಿಗಳನ್ನು ಧರಿಸಿ ಪಲ್ಲಾ ಗ್ರಾಮಕ್ಕೆ ಆಗಮಿಸುವ ನಿಮಗೆ ಯಮುನಾ ದಂಡೆಗೆ ಸ್ವಾಗತ. ಹರಿಯಾಣದಿಂದ ದೆಹಲಿಗೆ ಬರುವ ನೀರು ವಿಷಕಾರಿಯಲ್ಲ, ಆದರೆ ನಿಮ್ಮ ಮನಸ್ಸು ಖಂಡಿತವಾಗಿಯೂ ವಿಷದಿಂದ ತುಂಬಿದೆ. ನೀವು ಯಾವಾಗಲೂ ನಿಮ್ಮ ಸಮಸ್ಯೆಗಳಿಗೆ ಹರಿಯಾಣದ ಜನರನ್ನು ದೂಷಿಸುತ್ತಲೇ ಇರುತ್ತೀರಿ. ಕೆಲವೊಮ್ಮೆ ನೀರಿನ ಕೊರತೆಗೆ, ಕೆಲವೊಮ್ಮೆ ಹೊಗೆಯ ಸಮಸ್ಯೆ, ಮತ್ತು ಕೆಲವೊಮ್ಮೆ ನಿಮ್ಮ ಎಲ್ಲಾ ವೈಫಲ್ಯಗಳಿಗೆ ನಮ್ಮ ಹರ್ಯಾಣದ ಜನತೆಯನ್ನು ದೂಷಿಸುತ್ತಿರುತ್ತೀರಿ. ಎಂದು ವಾಗ್ದಾಳಿ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ