ಮಹಾಕುಂಭ ಮೇಳ 2025 online desk
ದೇಶ

Maha Kumbh 2025: 16 ದಿನಗಳಲ್ಲಿ 14 ಕೋಟಿ ಮಂದಿ ಅಮೃತ ಸ್ನಾನ; ಜನವರಿ 29 ರಂದು ಒಂದೇ ದಿನ 10 ಕೋಟಿ ತಲುಪುವ ಸಾಧ್ಯತೆ!

ಜ.13 ರಂದು ಕುಂಭಮೇಳ ಪ್ರಾರಂಭವಾದಾಗಿನಿಂದಲೂ ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಒಟ್ಟು 14 ಕೋಟಿಗೂ ಹೆಚ್ಚು ಮಂದಿ (147.6) ಮಿಂದೆದ್ದಿದ್ದಾರೆ.

ಪ್ರಯಾಗ್ ರಾಜ್: ಮಹಾಕುಂಭ ಮೇಳ 2025 (Maha kumbh 2025) ನಡೆಯುತ್ತಿರುವ ಪ್ರಯಾಗ್ ರಾಜ್ ನಲ್ಲಿ ಪುಣ್ಯ ಸ್ನಾನ ಮಾಡಲು ಜನಸಾಗರ ಹರಿದುಬರುತ್ತಿದೆ.

ಉತ್ತರ ಪ್ರದೇಶ ಸರ್ಕಾರದ ಮಾಹಿತಿಯ ಪ್ರಕಾರ ಮಂಗಳವಾರ ಮಧ್ಯಾಹ್ನದವರೆಗೂ ತ್ರಿವೇಣಿ ಸಂಗಮದಲ್ಲಿ ಒಟ್ಟು 2.39 ಕೋಟಿ ಮಂದಿ ಅಮೃತ ಸ್ನಾನ ಮಾಡಿದ್ದಾರೆ. ಈ ಪೈಕಿ 1 ಕೋಟಿ ಕಲ್ಪವಾಸಿಗಳೂ ಸೇರಿದ್ದಾರೆ.

ಇನ್ನು ಜ.13 ರಂದು ಕುಂಭಮೇಳ ಪ್ರಾರಂಭವಾದಾಗಿನಿಂದಲೂ ಗಂಗಾ, ಯಮುನಾ, ಸರಸ್ವತಿ ನದಿಗಳ ಸಂಗಮದಲ್ಲಿ ಒಟ್ಟು 14 ಕೋಟಿಗೂ ಹೆಚ್ಚು ಮಂದಿ (147.6) ಮಿಂದೆದ್ದಿದ್ದಾರೆ. ಜ.29 ರಂದು ಎರಡನೇ ಅಮೃತ ಸ್ನಾನ ನಡೆಯುತ್ತಿದ್ದು, 10 ಕೋಟಿ ಮಂದಿ ಇದರಲ್ಲಿ ಭಾಗಿಯಾಗಲಿದ್ದಾರೆ ಎಂಬ ನಿರೀಕ್ಷೆ ಇದೆ ಈ ಸಂಖ್ಯೆ ದಾಟಿದರೆ, ಕುಂಭಮೇಳದ ಮೊದಲ 15 ದಿನಗಳಲ್ಲಿ ಅಮೃತ ಸ್ನಾನ ಮಾಡಿದ ಭಕ್ತಾದಿಗಳ ಸಂಖ್ಯೆ 15 ಕೋಟಿಯನ್ನು ಮೀರಲಿದೆ.

ಫೆ.3, ಫೆ.12, ಫೆ.26 ರಂದು ಪವಿತ್ರ ಸ್ನಾನಗಳು ನಡೆಯಲಿವೆ.

ಜ.29 ರಂದು ಅಮೃತ ಸ್ನಾನದ ಹಿನ್ನೆಲೆಯಲ್ಲಿ ಮಹಾಕುಂಭ ಮೇಳದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ಸಂಗಮದಲ್ಲೇ ಸ್ನಾನ ಮಾಡಬೇಕೆಂಬ ಮನೋಭಾವ ಬೇಡ. ಸ್ಥಳದಲ್ಲಿ ಭಾರೀ ಜನಸಂದಣಿ ಇದ್ದು, ಸುರಕ್ಷತಾ ದೃಷ್ಟಿಯಿಂದ ನಿಮ್ಮ ಶಿಬಿರಗಳಿಂದ ಹೊರ ಬರದಿರಿ ಎಂದು ಜಗದ್ಗುರು ಸ್ವಾಮಿ ರಾಮಭದ್ರಾಚಾರ್ಯ ಸ್ವಾಮೀಜಿಗಳು ಮನವಿ ಮಾಡಿದ್ದಾರೆ.

ವಿಶ್ವದ ಅತಿದೊಡ್ಡ ಧಾರ್ಮಿಕ ಉತ್ಸವ “ಮಹಾ ಕುಂಭಮೇಳ” ಉತ್ತರ ಪ್ರದೇಶದ ಪ್ರಯಾಗ್​ರಾಜ್​ ನಗರದಲ್ಲಿ ನಡೆಯುತ್ತಿದ್ದು, ಈ ಕುಂಭಮೇಳವು ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮೇಳವಾಗಿದೆ. ಕುಂಭಮೇಳಕ್ಕೆ ಪ್ರಪಂಚದಾದ್ಯಂತದ ಸಾಧು-ಸಂತರು ಮತ್ತು ಭಕ್ತ ಸಾಗರವೇ ಹರಿದುಬರುತ್ತಿದೆ.

10 ಸಾವಿರ ಎಕರೆಗಳಲ್ಲಿ ಕುಂಭಮೇಳಕ್ಕಾಗಿ ವಿಶೇಷ ವ್ಯವಸ್ಥೆಯನ್ನು ಮಾಡಿರುವ ಉತ್ತರ ಪ್ರದೇಶ ಸರ್ಕಾರ, ಧಾರ್ಮಿಕ ಆಚರಣೆಗೆ ಆಗಮಿಸುವ ಕೋಟ್ಯಂತರ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲೂ ತೊಂದರೆ ಆಗದಂತೆ ಹಲವು ಕ್ರಮಗಳು ಹಾಗೂ ವಿಶೇಷ ಸೌಲಭ್ಯಗಳನ್ನು ಒದಗಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!

ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!

ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?

SCROLL FOR NEXT