ಕುಂಭ ಮೇಳದಲ್ಲಿ ಕಾಲ್ತುಳಿತ 
ದೇಶ

ಕುಂಭ ಮೇಳದಲ್ಲಿ ಕಾಲ್ತುಳಿತ: ಮೃತರ ಕುಟುಂಬಕ್ಕೆ ತಲಾ 25 ಲಕ್ಷ ರೂ ಪರಿಹಾರ; ನ್ಯಾಯಾಂಗ ತನಿಖೆಗೆ ಆದೇಶ

ಪ್ರಯಾಗ್‌ರಾಜ್‌ನಲ್ಲಿ 36 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಖಾರ ಮಾರ್ಗದ ಬ್ಯಾರಿಕೇಡ್‌ಗಳನ್ನು ಜನಸಮೂಹ ಮುರಿದಾಗ ಕಾಲ್ತುಳಿತ ಸಂಭವಿಸಿದೆ.

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಕಳೆದ ಎರಡು ವಾರಗಳಿಂದ ಮಹಾಕುಂಭ ಮೇಳ ನಡೆಯುತ್ತಿದ್ದು, ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಬುಧವಾರ ಭಕ್ತರ ಸಂಖ್ಯೆ ದಿಢೀರ್ ಹೆಚ್ಚಾದ ಪರಿಣಾಮ ಕಾಲ್ತುಳಿತ ಸಂಭವಿಸಿದೆ.

ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ತಲಾ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಘೋಷಿಸಿದ್ದಾರೆ.

"ಈ ಘಟನೆ ನಮಗೂ ಒಂದು ಪಾಠ" ಎಂದ ಯೋಗಿ ಆದಿತ್ಯನಾಥ್, ಘಟನೆ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ನ್ಯಾಯಮೂರ್ತಿ ಹರ್ಷ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ಘಟನೆಯ ತನಿಖೆಯನ್ನು ಮೂವರು ಸದಸ್ಯರ ಸಮಿತಿ ನಡೆಸಲಿದೆ ಎಂದು ಹೇಳಿದ್ದಾರೆ.

"ನಿನ್ನೆ ಸಂಜೆ 7 ಗಂಟೆಯಿಂದ ಮೌನಿ ಅಮವಾಸ್ಯೆಯಂದು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ನಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದ್ದರು. ಅಖಾರ ಮಾರ್ಗದಲ್ಲಿ ಈ ದುರದೃಷ್ಟಕರ ಘಟನೆ ನಡೆದಿದ್ದು, ಇದರಲ್ಲಿ 90 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಮತ್ತು 30 ಜನ ಸಾವನ್ನಪ್ಪಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿ 36 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಖಾರ ಮಾರ್ಗದ ಬ್ಯಾರಿಕೇಡ್‌ಗಳನ್ನು ಜನಸಮೂಹ ಮುರಿದಾಗ ಕಾಲ್ತುಳಿತ ಸಂಭವಿಸಿದೆ" ಎಂದು ಸಿಎಂ ತಿಳಿಸಿದರು.

ಮಹಾಕುಂಭ ಮೇಳದಲ್ಲಿ ಇಂದು ಬೆಳಗಿನ ಜಾವ ಸಂಭವಿಸಿದ ಕಾಲ್ತುಳಿತದಲ್ಲಿ ಒಟ್ಟು 30 ಭಕ್ತರು ಮೃತಪಟ್ಟಿದ್ದಾರೆ ಮತ್ತು 90 ಭಕ್ತರು ಗಾಯಗೊಂಡಿದ್ದಾರೆ ಎಂದು ಉತ್ತರ ಪ್ರದೇಶ ಪೊಲೀಸ್ ಮಹಾ ನಿರ್ದೇಶಕ ವೈಭವ್ ಕೃಷ್ಣ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT