ಸ್ವಾತಿ ಮಲಿವಾಲ್ 
ದೇಶ

ಕೇಜ್ರಿವಾಲ್ ಮನೆ ಮುಂದೆ ಕಸ ಸುರಿದ AAP ಸಂಸದೆ ಸ್ವಾತಿ ಮಲಿವಾಲ್ ಬಂಧನ, ವಿಡಿಯೋ!

ಎಎಪಿಯ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಪಕ್ಷದ ಮುಖ್ಯಸ್ಥರ ಮೇಲೆ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ದೆಹಲಿಯ ವಿವಿಧ ಸಮಸ್ಯೆಗಳನ್ನು ಎತ್ತುವ ಮೂಲಕ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಮೂಲೆಗುಂಪು ಮಾಡುತ್ತಿದ್ದಾರೆ.

ನವದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಕಸ ಎಸೆದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ ಬಂಡಾಯ ಸಂಸದೆ ಸ್ವಾತಿ ಮಲಿವಾಲ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಯ ಹಿನ್ನೆಲೆಯಲ್ಲಿ ಕೇಜ್ರಿವಾಲ್ ನಿವಾಸದ ಹೊರಗೆ ಭದ್ರತೆಯನ್ನು ಹೆಚ್ಚಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಬ್ಯಾರಿಕೇಡ್‌ಗಳನ್ನು ಹಾಕಲಾಗಿದ್ದು, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಯಾರಿಗೂ ಕಾನೂನು ಉಲ್ಲಂಘಿಸಲು ಅವಕಾಶ ನೀಡಲಾಗುವುದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಎಪಿಯ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಪಕ್ಷದ ಮುಖ್ಯಸ್ಥರ ಮೇಲೆ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ. ದೆಹಲಿಯ ವಿವಿಧ ಸಮಸ್ಯೆಗಳನ್ನು ಎತ್ತುವ ಮೂಲಕ ಆಮ್ ಆದ್ಮಿ ಪಕ್ಷದ ಸರ್ಕಾರವನ್ನು ಮೂಲೆಗುಂಪು ಮಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ, ಅವರು ಎಎಪಿ ಮುಖ್ಯಸ್ಥರ ವಿರುದ್ಧದ ದಾಳಿಯನ್ನು ತೀವ್ರಗೊಳಿಸಿದ್ದಾರೆ. ಸ್ವಾತಿ ಮಲಿವಾಲ್ ರಸ್ತೆಗಳು, ಒಳಚರಂಡಿ, ಸ್ವಚ್ಛತೆ, ನೀರು ಇತ್ಯಾದಿಗಳ ಸಮಸ್ಯೆಗಳನ್ನು ನಿರಂತರವಾಗಿ ಎತ್ತುತ್ತಿದ್ದಾರೆ. ಇಂದು ಸಂಸದೆ ರಸ್ತೆಯ ಕಸವನ್ನು ವಾಹನಗಳಿಗೆ ತುಂಬಿಸಿ ಅರವಿಂದ್ ಕೇಜ್ರಿವಾಲ್ ಮನೆಯ ಹೊರಗೆ ನಿಲ್ಲಿಸಿ ಸಲಿಕೆ ತೆಗೆದುಕೊಂಡು ಕಸ ತೆಗೆದು ಸುರಿದಿದ್ದರು.

ಇದಕ್ಕೂ ಮುನ್ನ, ಮಲಿವಾಲ್ ತನ್ನ ಬೆಂಬಲಿಗರೊಂದಿಗೆ ವಿಕಾಸಪುರಿಯನ್ನು ತಲುಪಿ ರಸ್ತೆಯಿಂದ ಕಸವನ್ನು ಸಂಗ್ರಹಿಸಿ ವಾಹನಗಳಿಗೆ ತುಂಬಿಸುತ್ತಿದ್ದರು. ಈ ಸಮಯದಲ್ಲಿ ಅವರೇ ಕಸವನ್ನು ಎತ್ತಿಕೊಂಡರು. ವಾಹನಗಳ ಮೇಲೆ "ಕೇಜ್ರಿವಾಲ್ ಅವರ ಕಸ" ಎಂದು ಬರೆದ ಬ್ಯಾನರ್‌ಗಳು ಸಹ ಇದ್ದವು. ವಿಕಾಸಪುರಿಯ ರಸ್ತೆಗಳಲ್ಲಿ ಕಸದ ರಾಶಿಗಳಿವೆ ಎಂದು ಮಲಿವಾಲ್ ಇನ್‌ಸ್ಟಾಗ್ರಾಮ್‌ನಲ್ಲಿ ಬರೆದಿದ್ದಾರೆ. ನಾನು ಈ ಎಲ್ಲಾ ಕಸವನ್ನು ಎತ್ತಿ ಕೇಜ್ರಿವಾಲ್ ಜಿ ಅವರ ಮನೆಗೆ ಎಸೆಯುತ್ತೇನೆ. ದೆಹಲಿಯವರು ಪ್ರತಿದಿನ ಎದುರಿಸುವ ಕೊಳಕು ಮತ್ತು ದುರ್ವಾಸನೆಯನ್ನು ಇಂದು ಕೇಜ್ರಿವಾಲ್ ಅನುಭವಿಸಲಿ ಎಂದು ಹೇಳಿದ್ದರು.

ಕಳೆದ ವರ್ಷ ಮಲಿವಾಲ್ ಅವರು ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವರ ಮನೆಗೆ ಬಂದಿದ್ದರು. ಅಂದು ಕೇಜ್ರಿವಾಲ್ ನಿವಾಸದಲ್ಲೇ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಸ್ವಾತಿ ಮಲಿವಾಲ್ ರನ್ನು ತೀವ್ರವಾಗಿ ಥಳಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಅಂದಿನಿಂದ ಮಲಿವಾಲ್ ಪಕ್ಷ ಮತ್ತು ಅದರ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಜೊತೆ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT