ಭಗವಾನ್ ಮಾನ್-ಆತಿಶಿ TNIE
ದೇಶ

ದೆಹಲಿ ಚುನಾವಣೆಗೂ ಮುನ್ನ AAP ಗೆ ಶಾಕ್: ಪಂಜಾಬ್ ಸಿಎಂ ಭಗವಂತ್ ಮಾನ್ ದೆಹಲಿಯ ಮನೆಯಲ್ಲಿ EC ಶೋಧ

ಪಂಜಾಬ್ ನಂಬರ್ ಪ್ಲೇಟ್ ಹೊಂದಿದ್ದ ವಾಹನವನ್ನು ನವದೆಹಲಿಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ವಶಪಡಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ನವದೆಹಲಿ: ಚುನಾವಣಾ ಆಯೋಗದ ತಂಡವೊಂದು ಪಂಜಾಬ್ ಮುಖ್ಯಮಂತ್ರಿ ಭಗವಾನ್ ಮಾನ್ ಅವರ ದೆಹಲಿಯಲ್ಲಿರುವ ಕಪುರ್ತಲಾ ಹೌಸ್ ನಿವಾಸದಲ್ಲಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ. ಬುಧವಾರದಂದು ದೆಹಲಿ ಪೊಲೀಸರು 'ಪಂಜಾಬ್ ಸರ್ಕಾರ' ಸ್ಟಿಕ್ಕರ್ ಇರುವ ವಾಹನವನ್ನು ವಶಪಡಿಸಿಕೊಂಡಿದ್ದರು. ಕಾರಿನಲ್ಲಿ ನಗದು, ಮದ್ಯ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಕರಪತ್ರಗಳು ಸಹ ಪತ್ತೆಯಾಗಿವೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಪಂಜಾಬ್ ನಂಬರ್ ಪ್ಲೇಟ್ ಹೊಂದಿದ್ದ ವಾಹನವನ್ನು ನವದೆಹಲಿಯಲ್ಲಿ ಫ್ಲೈಯಿಂಗ್ ಸ್ಕ್ವಾಡ್ ವಶಪಡಿಸಿಕೊಂಡಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ದೆಹಲಿಯಲ್ಲಿ ವಶಪಡಿಸಿಕೊಂಡ ಕಾರು ತನಗೆ ಸೇರಿದ್ದು ಎಂಬ ಹೇಳಿಕೆಯನ್ನು ಪಂಜಾಬ್ ಸರ್ಕಾರ ತಿರಸ್ಕರಿಸಿತು. ಕಾರನ್ನು ವಶಪಡಿಸಿಕೊಳ್ಳುವುದು ಪೂರ್ವ ಪ್ರಾಯೋಜಿತ ಎಂದು ಎಎಪಿ ಹೇಳಿಕೆ ನೀಡಿದೆ. ಈ ವಿಷಯದಲ್ಲಿ ಅಧಿಕಾರಿಗಳು ಕಾನೂನು ಕ್ರಮ ಕೈಗೊಂಡಿದ್ದು, ತಿಲಕ್ ಮಾರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದರು.

ಪರಿಶೋಧನೆ ವೇಳೆ ಕಾರಿನೊಳಗೆ ನಗದು, ಹಲವಾರು ಮದ್ಯದ ಬಾಟಲಿಗಳು ಮತ್ತು ಆಮ್ ಆದ್ಮಿ ಪಕ್ಷದ ಕರಪತ್ರಗಳು ಪತ್ತೆಯಾಗಿವೆ ಎಂದು ದೆಹಲಿ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆಮ್ ಆದ್ಮಿ ಪಕ್ಷವು ಈ ಪ್ರಕರಣವು 'ಸಂಪೂರ್ಣವಾಗಿ ನಕಲಿ ಮತ್ತು ಹಾಸ್ಯಾಸ್ಪದ' ಎಂದು ಹೇಳಿದೆ.

ಈ ವಿಷಯದಲ್ಲಿ ದೆಹಲಿ ಮುಖ್ಯಮಂತ್ರಿ ದೆಹಲಿ ಪೊಲೀಸರ ದಾಳಿಯ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅತಿಶಿ ಸಾಮಾಜಿಕ ಮಾಧ್ಯಮ ವೇದಿಕೆ X ನಲ್ಲಿ ಟ್ವೀಟ್ ಮಾಡಿದ್ದು, ದೆಹಲಿ ಪೊಲೀಸರು ಭಗವಂತ್ ಮಾನ್ ಅವರ ದೆಹಲಿಯಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬಿಜೆಪಿಯವರು ಹಗಲು ಹೊತ್ತಿನಲ್ಲಿ ಹಣ, ಶೂ ಮತ್ತು ಕರಪತ್ರಗಳನ್ನು ವಿತರಿಸುತ್ತಿದ್ದಾರೆ. ಅದು ಕಾಣುತ್ತಿಲ್ಲ. ಬದಲಾಗಿ, ಅವರು ಚುನಾಯಿತ ಮುಖ್ಯಮಂತ್ರಿಯ ನಿವಾಸದ ಮೇಲೆ ದಾಳಿ ಮಾಡಲು ತಲುಪುತ್ತಾರೆ. ಅಬ್ಬಾ ಬಿಜೆಪಿ! ದೆಹಲಿಯ ಜನರು 5ರಂದು ತಮ್ಮ ಉತ್ತರವನ್ನು ನೀಡುತ್ತಾರೆ ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT