ಅರವಿಂದ್ ಕೇಜ್ರಿವಾಲ್  
ದೇಶ

ಯಮುನಾ ನದಿಗೆ ಹರ್ಯಾಣ ಸರ್ಕಾರ ವಿಷ ಬೆರೆಸುತ್ತಿದೆ ಹೇಳಿಕೆ: ಉತ್ತರದಿಂದ ತೃಪ್ತವಾಗದ ಚುನಾವಣಾ ಆಯೋಗದಿಂದ ಕೇಜ್ರಿವಾಲ್ ಗೆ ಪತ್ರ

ನಾಳೆ ಬೆಳಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಇಸಿಐ ಹಲವಾರು ನಿರ್ದಿಷ್ಟ ಅಂಶಗಳ ಕುರಿತು ಹೆಚ್ಚಿನ ಸ್ಪಷ್ಟೀಕರಣವನ್ನು ಕೋರಿದೆ, ವಿಫಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಿದೆ.

ನವದೆಹಲಿ: ಹರಿಯಾಣ ಸರ್ಕಾರ ಯಮುನಾ ನದಿಯಲ್ಲಿ "ವಿಷ ಬೆರೆಸುತ್ತಿದೆ" ಎಂಬ ಹೇಳಿಕೆಗೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗೆ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನೀಡಿರುವ ಪ್ರತಿಕ್ರಿಯೆಗೆ ಭಾರತೀಯ ಚುನಾವಣಾ ಆಯೋಗ (ECI) ಅತೃಪ್ತಿ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ನರಮೇಧವನ್ನು ಉಂಟುಮಾಡುವ ಉದ್ದೇಶದಿಂದ ಹರಿಯಾಣ ಸರ್ಕಾರವು ಯಮುನಾ ನದಿಗೆ ವಿಷ ಬೆರೆಸಿದೆ ಎಂದು ದೆಹಲಿ ಚುನಾವಣೆ ಪ್ರಚಾರ ಸಂದರ್ಭದಲ್ಲಿ ನೀಡಿರುವ ಸಾರ್ವಜನಿಕ ಹೇಳಿಕೆಗೆ ಸಂಬಂಧಪಟ್ಟಂತೆ ನೀಡಿರುವ ನೊಟೀಸ್ ಗೆ ಕೇಜ್ರಿವಾಲ್ ಅವರ ಉತ್ತರವು ಸಂಪೂರ್ಣವಾಗಿ ಮೌನವಾಗಿದೆ ಎಂದು ಇಸಿಐ ಹೇಳಿದೆ.

ನಾಳೆ ಬೆಳಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಇಸಿಐ ಹಲವಾರು ನಿರ್ದಿಷ್ಟ ಅಂಶಗಳ ಕುರಿತು ಹೆಚ್ಚಿನ ಸ್ಪಷ್ಟೀಕರಣವನ್ನು ಕೋರಿದೆ, ವಿಫಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಿದೆ.

ಕೇಜ್ರಿವಾಲ್ ಅವರು ನೊಟೀಸ್ ಗೆ ಉತ್ತರ ನೀಡಿದ್ದರೂ, ಯಮುನಾ ನದಿಗೆ ವಿಷ ಬೆರೆಸಿದ ಆರೋಪದ ಕುರಿತು ಅವರ ಹೇಳಿಕೆಯ ನಿರ್ಣಾಯಕ ವಿಷಯವನ್ನು ಪರಿಹರಿಸಲು ವಿಫಲವಾಗಿದೆ ಎಂದು ಚುನಾವಣಾ ಆಯೋಗದ ಪತ್ರದಲ್ಲಿ ತಿಳಿಸಿದೆ.

ಈ ಹೇಳಿಕೆಯನ್ನು ದೃಢೀಕರಿಸಲು ಯಾವುದೇ ವಾಸ್ತವಿಕ ಅಥವಾ ಕಾನೂನು ಪುರಾವೆಗಳನ್ನು ಒದಗಿಸಲಾಗಿಲ್ಲ ಎಂದ ಚುನಾವಣಾ ಆಯೋಗ ಹೆಚ್ಚು ವಿವರವಾದ ಉತ್ತರವನ್ನು ಸಲ್ಲಿಸಲು ಕೇಜ್ರಿವಾಲ್‌ಗೆ ಸೂಚಿಸಿದೆ.

ಹರಿಯಾಣ ಸರ್ಕಾರವು ಯಮುನಾ ನದಿಯಲ್ಲಿ ಬೆರೆಸಿದೆ ಎಂದು ಹೇಳಲಾದ ವಿಷದ ಪ್ರಮಾಣ ಮತ್ತು ಸ್ವರೂಪ, ಅದನ್ನು ಪತ್ತೆಹಚ್ಚುವ ವಿಧಾನ, ಸ್ಥಳ ಮತ್ತು ದೆಹಲಿ ಪ್ರದೇಶಕ್ಕೆ ವಿಷಕಾರಿ ನೀರು ಪ್ರವೇಶಿಸುವುದನ್ನು ತಡೆಯುವಲ್ಲಿ ದೆಹಲಿ ಜಲ ಮಂಡಳಿಯ ಎಂಜಿನಿಯರ್‌ಗಳ ಪಾತ್ರದ ಬಗ್ಗೆ ಸ್ಪಷ್ಟನೆ ನೀಡುವಂತೆ ಆಯೋಗವು ಕೇಜ್ರಿವಾಲ್ ಅವರನ್ನು ಕೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?