ಅರವಿಂದ್ ಕೇಜ್ರಿವಾಲ್  
ದೇಶ

ಯಮುನಾ ನದಿಗೆ ಹರ್ಯಾಣ ಸರ್ಕಾರ ವಿಷ ಬೆರೆಸುತ್ತಿದೆ ಹೇಳಿಕೆ: ಉತ್ತರದಿಂದ ತೃಪ್ತವಾಗದ ಚುನಾವಣಾ ಆಯೋಗದಿಂದ ಕೇಜ್ರಿವಾಲ್ ಗೆ ಪತ್ರ

ನಾಳೆ ಬೆಳಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಇಸಿಐ ಹಲವಾರು ನಿರ್ದಿಷ್ಟ ಅಂಶಗಳ ಕುರಿತು ಹೆಚ್ಚಿನ ಸ್ಪಷ್ಟೀಕರಣವನ್ನು ಕೋರಿದೆ, ವಿಫಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಿದೆ.

ನವದೆಹಲಿ: ಹರಿಯಾಣ ಸರ್ಕಾರ ಯಮುನಾ ನದಿಯಲ್ಲಿ "ವಿಷ ಬೆರೆಸುತ್ತಿದೆ" ಎಂಬ ಹೇಳಿಕೆಗೆ ಸಂಬಂಧಿಸಿದಂತೆ ನೀಡಿದ್ದ ಹೇಳಿಕೆಗೆ ಆಮ್ ಆದ್ಮಿ ಪಾರ್ಟಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ನೀಡಿರುವ ಪ್ರತಿಕ್ರಿಯೆಗೆ ಭಾರತೀಯ ಚುನಾವಣಾ ಆಯೋಗ (ECI) ಅತೃಪ್ತಿ ವ್ಯಕ್ತಪಡಿಸಿದೆ.

ದೆಹಲಿಯಲ್ಲಿ ನರಮೇಧವನ್ನು ಉಂಟುಮಾಡುವ ಉದ್ದೇಶದಿಂದ ಹರಿಯಾಣ ಸರ್ಕಾರವು ಯಮುನಾ ನದಿಗೆ ವಿಷ ಬೆರೆಸಿದೆ ಎಂದು ದೆಹಲಿ ಚುನಾವಣೆ ಪ್ರಚಾರ ಸಂದರ್ಭದಲ್ಲಿ ನೀಡಿರುವ ಸಾರ್ವಜನಿಕ ಹೇಳಿಕೆಗೆ ಸಂಬಂಧಪಟ್ಟಂತೆ ನೀಡಿರುವ ನೊಟೀಸ್ ಗೆ ಕೇಜ್ರಿವಾಲ್ ಅವರ ಉತ್ತರವು ಸಂಪೂರ್ಣವಾಗಿ ಮೌನವಾಗಿದೆ ಎಂದು ಇಸಿಐ ಹೇಳಿದೆ.

ನಾಳೆ ಬೆಳಗ್ಗೆ 11 ಗಂಟೆಯೊಳಗೆ ಪ್ರತಿಕ್ರಿಯೆ ನೀಡುವಂತೆ ಇಸಿಐ ಹಲವಾರು ನಿರ್ದಿಷ್ಟ ಅಂಶಗಳ ಕುರಿತು ಹೆಚ್ಚಿನ ಸ್ಪಷ್ಟೀಕರಣವನ್ನು ಕೋರಿದೆ, ವಿಫಲವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆಯನ್ನು ಸಹ ನೀಡಿದೆ.

ಕೇಜ್ರಿವಾಲ್ ಅವರು ನೊಟೀಸ್ ಗೆ ಉತ್ತರ ನೀಡಿದ್ದರೂ, ಯಮುನಾ ನದಿಗೆ ವಿಷ ಬೆರೆಸಿದ ಆರೋಪದ ಕುರಿತು ಅವರ ಹೇಳಿಕೆಯ ನಿರ್ಣಾಯಕ ವಿಷಯವನ್ನು ಪರಿಹರಿಸಲು ವಿಫಲವಾಗಿದೆ ಎಂದು ಚುನಾವಣಾ ಆಯೋಗದ ಪತ್ರದಲ್ಲಿ ತಿಳಿಸಿದೆ.

ಈ ಹೇಳಿಕೆಯನ್ನು ದೃಢೀಕರಿಸಲು ಯಾವುದೇ ವಾಸ್ತವಿಕ ಅಥವಾ ಕಾನೂನು ಪುರಾವೆಗಳನ್ನು ಒದಗಿಸಲಾಗಿಲ್ಲ ಎಂದ ಚುನಾವಣಾ ಆಯೋಗ ಹೆಚ್ಚು ವಿವರವಾದ ಉತ್ತರವನ್ನು ಸಲ್ಲಿಸಲು ಕೇಜ್ರಿವಾಲ್‌ಗೆ ಸೂಚಿಸಿದೆ.

ಹರಿಯಾಣ ಸರ್ಕಾರವು ಯಮುನಾ ನದಿಯಲ್ಲಿ ಬೆರೆಸಿದೆ ಎಂದು ಹೇಳಲಾದ ವಿಷದ ಪ್ರಮಾಣ ಮತ್ತು ಸ್ವರೂಪ, ಅದನ್ನು ಪತ್ತೆಹಚ್ಚುವ ವಿಧಾನ, ಸ್ಥಳ ಮತ್ತು ದೆಹಲಿ ಪ್ರದೇಶಕ್ಕೆ ವಿಷಕಾರಿ ನೀರು ಪ್ರವೇಶಿಸುವುದನ್ನು ತಡೆಯುವಲ್ಲಿ ದೆಹಲಿ ಜಲ ಮಂಡಳಿಯ ಎಂಜಿನಿಯರ್‌ಗಳ ಪಾತ್ರದ ಬಗ್ಗೆ ಸ್ಪಷ್ಟನೆ ನೀಡುವಂತೆ ಆಯೋಗವು ಕೇಜ್ರಿವಾಲ್ ಅವರನ್ನು ಕೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT