ಕುಂಭಮೇಳ online desk
ದೇಶ

ಕಾಲ್ತುಳಿತದ ಬೆನ್ನಲ್ಲೇ Mahakumbh Melaದಲ್ಲಿ ಮತ್ತೊಂದು ಅವಘಡ!

ಗುರುವಾರ (ಜ.30 ರಂದು) ಸೆಕ್ಟರ್ 22 ರ ನಾಗೇಶ್ವರ ಘಾಟ್‌ನಲ್ಲಿ ನಿರ್ಮಿಸಲಾದ ಟೆಂಟ್ ಸಿಟಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಮೊದಲೇ ಹಲವಾರು ಟೆಂಟ್‌ಗಳು ಬೂದಿಯಾಗಿವೆ.

ಪ್ರಯಾಗ್ ರಾಜ್: ಮಹಾಕುಂಭಮೇಳದಲ್ಲಿ ಕಾಲ್ತುಳಿತ ಉಂಟಾದ ಬೆನ್ನಲ್ಲೇ ಮತ್ತೊಂದು ಭಾರಿ ಅನಾಹುತ ಸಂಭವಿಸಿದೆ.

ಕುಂಭಮೇಳಕ್ಕಾಗಿ ನಿರ್ಮಿಸಲಾಗಿರುವ ಪ್ರಯಾಗ್ ರಾಜ್ ನ ಟೆಂಟ್ ಸಿಟಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವು ಟೆಂಟ್ ಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಈ ವರೆಗೂ ಯಾವುದೇ ಪ್ರಾಣ ಹಾನಿ ವರದಿಯಾಗಿಲ್ಲ.

ಗುರುವಾರ ಸೆಕ್ಟರ್ 22 ರ ನಾಗೇಶ್ವರ ಘಾಟ್‌ನಲ್ಲಿ ನಿರ್ಮಿಸಲಾದ ಟೆಂಟ್ ಸಿಟಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಮೊದಲೇ ಹಲವಾರು ಟೆಂಟ್‌ಗಳು ಬೂದಿಯಾಗಿವೆ.

ಪ್ರಪಂಚದಾದ್ಯಂತದ ಜನರಿಗೆ ಅಪಾರ ಆಧ್ಯಾತ್ಮಿಕ ಮಹತ್ವವನ್ನು ಹೊಂದಿರುವ ಮಹಾಕುಂಭಮೇಳ 144 ವರ್ಷಗಳ ಬಳಿಕ ನಡೆಯುತ್ತಿದೆ.

ಅಧಿಕಾರಿಗಳು ಕಾರ್ಯಕ್ರಮಕ್ಕಾಗಿ ವ್ಯಾಪಕ ವ್ಯವಸ್ಥೆಗಳನ್ನು ಮಾಡಿದ್ದಾರೆ. ಆದರೆ ಭಾರಿ ಜನಸಂದಣಿ ಕಳವಳವನ್ನುಂಟುಮಾಡಿದೆ. ಜ.29 ಒಂದೇ ದಿನ ದಾಖಲೆಯ ಪ್ರಮಾಣದಲ್ಲಿ ಜನರು ಮಹಾಕುಂಭದಲ್ಲಿ ಭಾಗವಹಿಸಿದ್ದು, ಅದನ್ನು ನಿರ್ವಹಿಸುವುದು ಸವಾಲಿನ ಸಂಗತಿಯಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT