ಕುಂಭಮೇಳ online desk
ದೇಶ

ಕಾಲ್ತುಳಿತದ ಬೆನ್ನಲ್ಲೇ Mahakumbh Melaದಲ್ಲಿ ಮತ್ತೊಂದು ಅವಘಡ!

ಗುರುವಾರ (ಜ.30 ರಂದು) ಸೆಕ್ಟರ್ 22 ರ ನಾಗೇಶ್ವರ ಘಾಟ್‌ನಲ್ಲಿ ನಿರ್ಮಿಸಲಾದ ಟೆಂಟ್ ಸಿಟಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಮೊದಲೇ ಹಲವಾರು ಟೆಂಟ್‌ಗಳು ಬೂದಿಯಾಗಿವೆ.

ಪ್ರಯಾಗ್ ರಾಜ್: ಮಹಾಕುಂಭಮೇಳದಲ್ಲಿ ಕಾಲ್ತುಳಿತ ಉಂಟಾದ ಬೆನ್ನಲ್ಲೇ ಮತ್ತೊಂದು ಭಾರಿ ಅನಾಹುತ ಸಂಭವಿಸಿದೆ.

ಕುಂಭಮೇಳಕ್ಕಾಗಿ ನಿರ್ಮಿಸಲಾಗಿರುವ ಪ್ರಯಾಗ್ ರಾಜ್ ನ ಟೆಂಟ್ ಸಿಟಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಹಲವು ಟೆಂಟ್ ಗಳು ಬೆಂಕಿಗೆ ಆಹುತಿಯಾಗಿವೆ. ಅದೃಷ್ಟವಶಾತ್ ಘಟನೆಯಲ್ಲಿ ಈ ವರೆಗೂ ಯಾವುದೇ ಪ್ರಾಣ ಹಾನಿ ವರದಿಯಾಗಿಲ್ಲ.

ಗುರುವಾರ ಸೆಕ್ಟರ್ 22 ರ ನಾಗೇಶ್ವರ ಘಾಟ್‌ನಲ್ಲಿ ನಿರ್ಮಿಸಲಾದ ಟೆಂಟ್ ಸಿಟಿಯಲ್ಲಿ ಬೆಂಕಿ ಕಾಣಿಸಿಕೊಂಡಿತು. ಅಗ್ನಿಶಾಮಕ ದಳ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವ ಮೊದಲೇ ಹಲವಾರು ಟೆಂಟ್‌ಗಳು ಬೂದಿಯಾಗಿವೆ.

ಪ್ರಪಂಚದಾದ್ಯಂತದ ಜನರಿಗೆ ಅಪಾರ ಆಧ್ಯಾತ್ಮಿಕ ಮಹತ್ವವನ್ನು ಹೊಂದಿರುವ ಮಹಾಕುಂಭಮೇಳ 144 ವರ್ಷಗಳ ಬಳಿಕ ನಡೆಯುತ್ತಿದೆ.

ಅಧಿಕಾರಿಗಳು ಕಾರ್ಯಕ್ರಮಕ್ಕಾಗಿ ವ್ಯಾಪಕ ವ್ಯವಸ್ಥೆಗಳನ್ನು ಮಾಡಿದ್ದಾರೆ. ಆದರೆ ಭಾರಿ ಜನಸಂದಣಿ ಕಳವಳವನ್ನುಂಟುಮಾಡಿದೆ. ಜ.29 ಒಂದೇ ದಿನ ದಾಖಲೆಯ ಪ್ರಮಾಣದಲ್ಲಿ ಜನರು ಮಹಾಕುಂಭದಲ್ಲಿ ಭಾಗವಹಿಸಿದ್ದು, ಅದನ್ನು ನಿರ್ವಹಿಸುವುದು ಸವಾಲಿನ ಸಂಗತಿಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT