ಕುಂಭಮೇಳ (ಸಂಗ್ರಹ ಚಿತ್ರ) online desk
ದೇಶ

Yogi Adityanath ಆಡಳಿತದಲ್ಲಿ ಮಹಿಳೆಯರು ಬೆತ್ತಲೆ; Mahakumbh ಪವಿತ್ರ ಸ್ನಾನದ ಬಗ್ಗೆ ವ್ಯಕ್ತಿಯ ಅವಹೇಳನ!

ಮಹಾ ಕುಂಭದಲ್ಲಿ ಮಹಿಳೆಯರ ಬಗ್ಗೆ ಅವಮಾನಕರ ಕಾಮೆಂಟ್‌ಗಳ ವೀಡಿಯೊದ ತನಿಖೆಯ ನಂತರ ಈ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಪ್ರಯಾಗ್ ರಾಜ್: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದ ಬಗ್ಗೆ ಅಸಹ್ಯಕರ ಹೇಳಿಕೆಯೊಂದನ್ನು ವಿಡಿಯೋ ಮೂಲಕ ವ್ಯಕ್ತಿಯೋರ್ವ ನೀಡಿದ್ದಾರೆ. ಮಹಿಳೆಯರ ಘನತೆಗೆ ಚ್ಯುತಿ ತರುವ ಹೇಳಿಕೆ ಇದಾಗಿದ್ದು, ಪೊಲೀರು ಪ್ರಕರಣ ದಾಖಲಿಸಿದ್ದಾರೆ.

ಉತ್ತರ ಪ್ರದೇಶದ ಬರೇಲಿಯ ಶಬೀರ್ ಹುಸೇನ್ ಎಂಬ ವ್ಯಕ್ತಿ ಮಹಾಕುಂಭ ಮೇಳ ಹಾಗೂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ವ್ಯಕ್ತಿಯಾಗಿದ್ದು, ಆತನ ವಿರುದ್ಧ ಮಿರ್ಗಂಜ್ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್‌ನ 353 (ಸುಳ್ಳು ಮಾಹಿತಿ, ವದಂತಿಗಳನ್ನು ಹರಡುವುದು) ಪ್ರಕರಣ ದಾಖಲಾಗಿದೆ ಎಂದು ಪೊಲೀಸ್ ಅಧಿಕಾರಿ (ಸಿಒ) ಅಂಜನಿ ಕುಮಾರ್ ತಿವಾರಿ ತಿಳಿಸಿದ್ದಾರೆ.

ಮಹಾ ಕುಂಭದಲ್ಲಿ ಮಹಿಳೆಯರ ಬಗ್ಗೆ ಅವಮಾನಕರ ಕಾಮೆಂಟ್‌ಗಳ ವೀಡಿಯೊದ ತನಿಖೆಯ ನಂತರ ಈ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.

ಮೀರ್ಗಂಜ್ ನಿವಾಸಿ ಹುಸೇನ್ ಮಹಾ ಕುಂಭದ ಬಗ್ಗೆ ನಕಲಿ ಸುದ್ದಿ ಪ್ರಸಾರ ಮಾಡಿದ ವೈರಲ್ ಪೋಸ್ಟ್ ಬಂದಿದೆ ಎಂದು ಉಪ ನಿರೀಕ್ಷಕ ಯತೇಂದ್ರ ಕುಮಾರ್ ಎಫ್ಐಆರ್ ನಲ್ಲಿ ತಿಳಿಸಿದ್ದಾರೆ.

ಯೋಗಿ ಆದಿತ್ಯನಾಥ್ ಸರ್ಕಾರದಲ್ಲಿ ಮಹಿಳೆಯರನ್ನು ಬೆತ್ತಲೆಗೊಳಿಸಲಾಗುತ್ತಿದೆ ಎಂದು ದೂರಿನಲ್ಲಿ ಹೇಳಲಾಗಿದೆ.

ಹುಸೇನ್ ಅವರ ವೈರಲ್ ಪೋಸ್ಟ್ ಹಿಂದೂ ಧರ್ಮದ ಭಾವನೆಗಳಿಗೆ ನೋವುಂಟು ಮಾಡಿದೆ ಮತ್ತು ಸಮುದಾಯದ ಜನರಲ್ಲಿ ಸಾಕಷ್ಟು ಕೋಪವಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಹುಡುಕುತ್ತಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT