ಮಂಡಿಯಲ್ಲಿ ಭೀಕರ ಪ್ರವಾಹ 
ದೇಶ

Himachal Pradesh: ಮಂಡಿಯಲ್ಲಿ ಭೀಕರ ಪ್ರವಾಹ; ಒಬ್ಬರು ಸಾವು, 18 ಮಂದಿ ನಾಪತ್ತೆ; 41 ಜನರ ರಕ್ಷಣೆ; Video

ಮಂಡಿ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕು ಸ್ಥಳಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಹಲವಾರು ಮನೆಗಳು, ವಾಹನಗಳು ಮತ್ತು ಸೇತುವೆಗಳು ಕೊಚ್ಚಿಹೋಗಿವೆ ಎಂದು ಮೂಲಗಳು ತಿಳಿಸಿವೆ.

ಚಂಡೀಗಢ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಕರ್ಸೋಗ್ ಉಪವಿಭಾಗದಲ್ಲಿ ಹಲವು ಮೇಘಸ್ಫೋಟಗಳಿಂದ ಉಂಟಾದ ದಿಢೀರ್ ಪ್ರವಾಹದಲ್ಲಿ ಸಿಲುಕಿ ಒಬ್ಬರು ಸಾವನ್ನಪ್ಪಿದ್ದು, 18 ಜನ ಕಾಣೆಯಾಗಿದ್ದಾರೆ. ಅಲ್ಲದೆ ವಿವಿಧ ಸ್ಥಳಗಳಿಂದ ಕನಿಷ್ಠ 41 ಜನರನ್ನು ರಕ್ಷಿಸಲಾಗಿದೆ.

ಭಾರಿ ಮಳೆಯಿಂದ ಮಂಡಿ ಮತ್ತು ಕುಲ್ಲು ನಡುವಿನ ಅನೇಕ ಸ್ಥಳಗಳಲ್ಲಿ ಕಿರಾತ್‌ಪುರ-ಮನಾಲಿ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ ಮತ್ತು ವಾಹನ ಸವಾರರು ಇಡೀ ರಾತ್ರಿ ರಸ್ತೆ ಸುರಂಗಗಳಲ್ಲಿ ಸಿಲುಕಿಕೊಂಡಿದ್ದರು.

ಮಂಡಿ ಜಿಲ್ಲೆಯಲ್ಲಿ ಕನಿಷ್ಠ ನಾಲ್ಕು ಸ್ಥಳಗಳಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಹಲವಾರು ಮನೆಗಳು, ವಾಹನಗಳು ಮತ್ತು ಸೇತುವೆಗಳು ಕೊಚ್ಚಿಹೋಗಿವೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ 12 ಮಕ್ಕಳು ಮತ್ತು 4 ಮಹಿಳೆಯರು ಸೇರಿದಂತೆ 16 ಜನರನ್ನು ರಕ್ಷಿಸಲಾಗಿದೆ. ರಿಕಿ ಗ್ರಾಮದ ಏಳು ಸದಸ್ಯರ ಕುಟುಂಬವನ್ನು ಸಹ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.

ಭಾರಿ ಮಳೆಯಿಂದ ಮಂಡಿ ಜಿಲ್ಲೆಯ ಎಲ್ಲಾ ನದಿಗಳು ಉಕ್ಕಿ ಹರಿಯುತ್ತಿದ್ದು, ಜಯುನಿ ಖಾಡ್‌ನ ಎರಡು ಮನೆಗಳು ಬಿಯಾಸ್ ನದಿಯಲ್ಲಿ ಕೊಚ್ಚಿಹೋಗಿ 18 ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ.

ಮುಂದಿನ 24 ರಿಂದ 48 ಗಂಟೆಗಳಲ್ಲಿ ಈ ಪ್ರದೇಶಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಹಠಾತ್ ಪ್ರವಾಹ, ಭೂಕುಸಿತ ಮತ್ತು ಮೂಲಸೌಕರ್ಯ ಕುಸಿತದ ಅಪಾಯ ಹೆಚ್ಚಿದೆ. ಧರ್ಮಶಾಲಾ, ಕುಲ್ಲು ಮತ್ತು ಸೋಲನ್‌ಗಳಲ್ಲಿ ಆರೆಂಜ್ ಅಲರ್ಟ್​ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT