ವಿದೇಶಾಂಗ ಸಚಿವ ಎಸ್ ಜೈಶಂಕರ್  
ದೇಶ

ಪಹಲ್ಗಾಮ್ ದಾಳಿ ಕಾಶ್ಮೀರ ಪ್ರವಾಸೋದ್ಯಮವನ್ನು ನಾಶಮಾಡಲು ನಡೆಸಿದ ಆರ್ಥಿಕ ಯುದ್ಧ: ವಿದೇಶಾಂಗ ಸಚಿವ ಜೈಶಂಕರ್

ಭಾರತದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳು ಪಾಕಿಸ್ತಾನದ ಕುಮ್ಮಕ್ಕಿನಿಂದ ಆಗಿವೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತೀಯರಲ್ಲಿ ಆಕ್ರೋಶದ ಅಲೆ ಎದ್ದಿದೆ ಎಂದಿದ್ದಾರೆ.

ನ್ಯೂಯಾರ್ಕ್: ಪ್ರವಾಸೋದ್ಯಮಕ್ಕೆ ಜನಪ್ರಿಯವಾಗಿರುವ ಮತ್ತು ರಾಜ್ಯದ ಆದಾಯದ ಮುಖ್ಯ ಮೂಲವಾಗಿರುವ ಕಾಶ್ಮೀರದಲ್ಲಿ ಪ್ರವಾಸೋದ್ಯಮವನ್ನು ನಾಶಮಾಡುವ ಉದ್ದೇಶದಿಂದ ನಡೆಸಲಾದ ಆರ್ಥಿಕ ಯುದ್ಧದ ಕೃತ್ಯ ಪಹಲ್ಗಾಮ್ ಭಯೋತ್ಪಾದಕ ದಾಳಿಯಾಗಿದೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ವ್ಯಾಖ್ಯಾನಿಸಿದ್ದಾರೆ.

ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಪಾಕಿಸ್ತಾನದಿಂದ ಹೊರಹೊಮ್ಮುವ ಭಯೋತ್ಪಾದನೆಗೆ ಪ್ರತಿಕ್ರಿಯಿಸುವುದನ್ನು ತಡೆಯಲು ಭಾರತ ಪರಮಾಣು ಬೆದರಿಕೆಗೆ ಬೆಂಬಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಹಲವಾರು ಭಯೋತ್ಪಾದಕ ದಾಳಿಗಳು ಪಾಕಿಸ್ತಾನದ ಕುಮ್ಮಕ್ಕಿನಿಂದ ಆಗಿವೆ. ಏಪ್ರಿಲ್ 22 ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಭಾರತೀಯರಲ್ಲಿ ಆಕ್ರೋಶದ ಅಲೆ ಎದ್ದಿದೆ ಎಂದಿದ್ದಾರೆ.

ಮ್ಯಾನ್‌ಹ್ಯಾಟನ್‌ನ 9/11 ಸ್ಮಾರಕದ ಬಳಿಯ ಒನ್ ವರ್ಲ್ಡ್ ಟ್ರೇಡ್ ಸೆಂಟರ್‌ನಲ್ಲಿರುವ ಪ್ರಕಟಣೆಯ ಪ್ರಧಾನ ಕಚೇರಿಯಲ್ಲಿ ನ್ಯೂಸ್‌ವೀಕ್ ಸಿಇಒ ದೇವ್ ಪ್ರಗಾದ್ ಅವರೊಂದಿಗೆ ಆಯೋಜಿಸಲಾದ ಸಂವಾದದ ಸಂದರ್ಭದಲ್ಲಿ ಹೇಳಿದ್ದಾರೆ.

ಪಹಲ್ಗಾಮ್ ದಾಳಿಯು ಆರ್ಥಿಕ ಯುದ್ಧದ ಕೃತ್ಯ

ಆರ್ಥಿಕತೆಯ ಪ್ರಮುಖ ಆಧಾರಸ್ತಂಭವಾಗಿದ್ದ ಕಾಶ್ಮೀರದಲ್ಲಿ ಪ್ರವಾಸೋದ್ಯಮವನ್ನು ನಾಶಮಾಡುವುದು ದಾಳಿಯ ಉದ್ದೇಶವಾಗಿತ್ತು. ಜನರನ್ನು ಕೊಲ್ಲುವ ಮೊದಲು ಅವರ ಧಾರ್ಮಿಕ ಗುರುತು ಕೇಳಿ ಹತ್ಯೆ ಮಾಡಿದ್ದು ನೋಡಿದರೆ ಧಾರ್ಮಿಕ ಹಿಂಸಾಚಾರವನ್ನು ಪ್ರಚೋದಿಸುವುದು ಇದರ ಉದ್ದೇಶವಾಗಿತ್ತು.

ವಿದೇಶಾಂಗ ಸಚಿವ ಜೈಶಂಕರ್ ಅಮೆರಿಕಕ್ಕೆ ಅಧಿಕೃತ ಭೇಟಿ ನೀಡುತ್ತಿದ್ದು, ಇಂದು ಕ್ವಾಡ್ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿಸಲು ವಾಷಿಂಗ್ಟನ್ ಡಿಸಿಗೆ ಪ್ರಯಾಣಿಸಲಿದ್ದಾರೆ.

ವಿಶ್ವಸಂಸ್ಥೆಯ ಪ್ರಧಾನ ಕಚೇರಿಯಲ್ಲಿ ಭಾರತದ ಶಾಶ್ವತ ಮಿಷನ್ ಆಯೋಜಿಸಿದ್ದ 'ಭಯೋತ್ಪಾದನೆ ಮಾನವನ ಮೇಲೆ ಪರಿಣಾಮ' ಎಂಬ ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಅವರು ತಮ್ಮ ಭೇಟಿಯನ್ನು ಪ್ರಾರಂಭಿಸಿದರು.

ಭಾರತದ ವಿರುದ್ಧ ದಾಳಿ ನಡೆಸುತ್ತಿರುವ ಪಾಕಿಸ್ತಾನದಲ್ಲಿ ನೆಲೆಸಿರುವ ಭಯೋತ್ಪಾದಕರು ರಹಸ್ಯವಾಗಿ ಕಾರ್ಯನಿರ್ವಹಿಸುವುದಿಲ್ಲ, ಇವು ಪಾಕಿಸ್ತಾನದ ಜನನಿಬಿಡ ಪಟ್ಟಣಗಳಲ್ಲಿನ ಅವರ ಕಾರ್ಪೊರೇಟ್ ಪ್ರಧಾನ ಕಚೇರಿಗೆ ಸಮಾನವಾದ ಭಯೋತ್ಪಾದಕ ಸಂಘಟನೆಗಳಾಗಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT