ಐಪಿಎಸ್ ಅಧಿಕಾರಿ ಸಿದ್ಧಾರ್ಥ್ ಕೌಶಲ್ 
ದೇಶ

IPS ಅಧಿಕಾರಿ Siddharth Kaushal ರಾಜಿನಾಮೆ

ವೈಯಕ್ತಿಕ ಕಾರಣಗಳಿಂದಾಗಿ ಐಪಿಎಸ್ ಕೆಲಸಕ್ಕೆ ರಾಜೀನಾಮೆ ನೀಡಿದ್ದೇನೆ. ಸ್ವಯಂಪ್ರೇರಣೆಯಿಂದ ಐಪಿಎಸ್ ಕೆಲಸಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ಬಹಿರಂಗಪಡಿಸಿದ್ದಾರೆ.

ಅಮರಾವತಿ: ಮಹತ್ವದ ಬೆಳವಣಿಗೆಯಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಸಿದ್ಧಾರ್ಥ್ ಕೌಶಲ್ (Siddharth Kaushal) ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಆಂಧ್ರಪ್ರದೇಶದ ಐಪಿಎಸ್ ಅಧಿಕಾರಿ ಸಿದ್ಧಾರ್ಥ್ ಕೌಶಲ್ ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದು, ವೈಯಕ್ತಿಕ ಕಾರಣಗಳಿಂದ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅವರು ಹೇಳಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರವನ್ನು ಡಿಜಿಪಿಗೆ ಕಳುಹಿಸಿದ್ದು, ಈ ನಿರ್ಧಾರವನ್ನು ತಾವೇ ತೆಗೆದುಕೊಂಡಿರುವುದಾಗಿ ಸ್ಪಷ್ಟಪಡಿಸಿದ್ದಾರೆ.

ಐಪಿಎಸ್ ಅಧಿಕಾರಿ ಸಿದ್ಧಾರ್ಥ್ ಕೌಶಲ್ ಈ ಹಿಂದೆ ಕಡಪ, ಕೃಷ್ಣ ಮತ್ತು ಪ್ರಕಾಶಂ ಜಿಲ್ಲೆಗಳ ಎಸ್ಪಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಡಿಜಿಪಿ ಕಚೇರಿಯಲ್ಲಿ ಎಸ್ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದೇ ವೇಳೆ ರಾಜಕೀಯ ಒತ್ತಡದಿಂದಾಗಿ ರಾಜೀನಾಮೆ ನೀಡುತ್ತಿರುವ ಸುದ್ದಿಯನ್ನು ಅವರು ನಿರಾಕರಿಸಿದ್ದಾರೆ.

'ವೈಯಕ್ತಿಕ ಕಾರಣಗಳಿಂದಾಗಿ ಐಪಿಎಸ್ ಕೆಲಸಕ್ಕೆ ರಾಜೀನಾಮೆ ನೀಡಿದ್ದೇನೆ. ಸ್ವಯಂಪ್ರೇರಣೆಯಿಂದ ಐಪಿಎಸ್ ಕೆಲಸಕ್ಕೆ ರಾಜೀನಾಮೆ ನೀಡಿರುವುದಾಗಿ ಅವರು ಬಹಿರಂಗಪಡಿಸಿದ್ದಾರೆ. ಅಂತೆಯೇ ಇಷ್ಟು ವರ್ಷಗಳ ಕಾಲ ಆಂಧ್ರಪ್ರದೇಶ ರಾಜ್ಯದಲ್ಲಿ ಕೆಲಸ ಮಾಡಿದ್ದಕ್ಕೆ ನಾನು ಅದೃಷ್ಟಶಾಲಿ. ಆಂಧ್ರಪ್ರದೇಶ ಸರ್ಕಾರಕ್ಕೆ ಈ ಮೂಲಕ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಸರ್ಕಾರ, ಅಧಿಕಾರಿಗಳು, ಸಹೋದ್ಯೋಗಿಗಳು ಮತ್ತು ಇಷ್ಟು ದಿನ ತಮಗೆ ಸಹಕರಿಸಿದ ಎಲ್ಲ ಜನರಿಗೆ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ' ಎಂದು ಸಿದ್ಧಾರ್ಥ್ ಕೌಶಲ್ ಹೇಳಿದರು.

ಅಂತೆಯೇ ಮುಂಬರುವ ದಿನಗಳಲ್ಲಿ ಹೊಸ ಗುರಿಗಳೊಂದಿಗೆ ಮತ್ತು ಸಮಾಜಕ್ಕೆ ವಿಭಿನ್ನ ರೀತಿಯಲ್ಲಿ ಸೇವೆ ಸಲ್ಲಿಸುವ ಸಂಕಲ್ಪದೊಂದಿಗೆ ಮುನ್ನಡೆಯುವುದಾಗಿ ಸಿದ್ಧಾರ್ಥ್ ಕೌಶಲ್ ತಮ್ಮ ಹೇಳಿಕೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಅಂದಹಾಗೆ ಸಿದ್ಧಾರ್ಥ್ ಕೌಶಲ್ ಈ ಹಿಂದೆಯೇ ಸ್ವಯಂ ನಿವೃತ್ತಿಗೆ ಅರ್ಜಿ ಸಲ್ಲಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT