ಭದ್ರತಾ ಪಡೆಗಳು 
ದೇಶ

ಜಮ್ಮು-ಕಾಶ್ಮೀರ: ಕಿಶ್ತ್ವಾರ್'ನಲ್ಲಿ ಮೂವರು 'ಜೈಶ್ ಉಗ್ರ'ರಿಗಾಗಿ ಶೋಧ ಕಾರ್ಯಾಚರಣೆ ತೀವ್ರ!

ಡ್ರೋನ್‌ಗಳು ಮತ್ತು ಸ್ನಿಫರ್ ಡಾಗ್‌ಗಳೊಂದಿಗೆ ಹೆಚ್ಚುವರಿ ಪಡೆ ನಿಯೋಜನೆಯೊಂದಿಗೆ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಕಿಶ್ತ್ವಾರ್ : ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್' ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅಡಗಿರುವ ಮೂವರು ಜೈಶ್ ಉಗ್ರರಿಗಾಗಿ ಗುರುವಾರ ಭಾರಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಬುಧವಾರ ರಾತ್ರಿ ಕುಚಲ್-ಚತ್ರೂ ಬೆಲ್ಟ್‌ನ ದಟ್ಟ ಅರಣ್ಯದಿಂದ ಕೂಡಿದ ಕಂಝಲ್ ಮಂಡು ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವಿನ ಎನ್ ಕೌಂಟರ್ ನಂತರ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಡ್ರೋನ್‌ಗಳು ಮತ್ತು ಸ್ನಿಫರ್ ಡಾಗ್‌ಗಳೊಂದಿಗೆ ಹೆಚ್ಚುವರಿ ಪಡೆ ನಿಯೋಜನೆಯೊಂದಿಗೆ ಶೋಧ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಲಾಗಿದೆ.

ಇಂದು ಬೆಳಗ್ಗೆ ಮುಂದುವರಿದ ಗುಂಡಿನ ಕಾಳಗದಲ್ಲಿ ಓರ್ವ ಉಗ್ರ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ. ಚತ್ರೂವಿನ ಕುಚಾಲ್ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ನಿನ್ನೆ ಸಂಜೆ 7-45ರ ಸುಮಾರಿಗೆ ಮಾಹಿತಿ ತಿಳಿದುಬಂದ ನಂತರ ಕಾರ್ಯಾಚರಣೆ ಆರಂಭಿಸಲಾಯಿತು. ಕೊನೆಯ ವರದಿಗಳು ಬಂದಾಗ ಗುಂಡಿನ ಚಕಮಕಿ ಮುಂದುವರೆದಿದೆ.

ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಬಂಧ ಹೊಂದಿರುವ ಉಗ್ರರನ್ನು ಹೊಡೆದುರುಳಿಸಲು ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೈನಿಕರನ್ನು ನಿಯೋಜಿಸಲಾಗಿದೆ.

ಜಿಲ್ಲೆಯ ಬೆಟ್ಟಗಳಲ್ಲಿ ಪ್ರಮುಖ ಉಗ್ರರಾದ ಸೈಫುಲ್ಲಾ ಮತ್ತು ಆದಿಲ್ ಅಡಗಿರುವ ಮಾಹಿತಿ ಸಿಕ್ಕಿದೆ. ಕಳೆದೊಂದು ವಾರದಲ್ಲಿ ಜಮ್ಮು ಪ್ರದೇಶದಲ್ಲಿ ಎರಡನೇ ಬಾರಿಗೆ ನಡೆಯುತ್ತಿರುವ ಎನ್ ಕೌಂಟರ್ ಇದಾಗಿದೆ. ಜೂನ್ 26 ರಂದು ನಡೆದ ಎನ್ ಕೌಂಟರ್ ಲ್ಲಿ ಪಾಕಿಸ್ತಾನ ಮೂಲದ ಜೆಎಂ ಉಗ್ರನನ್ನು ಹೊಡೆದುರುಳಿಸಲಾಗಿತ್ತು.ಆತನ ಮೂವರು ಸಹಚರರು ತಪ್ಪಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಪರಸ್ತ್ರೀ ಮೋಹ, ನಂಬಿಕೆ ದ್ರೋಹ: ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

ಕೆಲಸದ ಹೊರೆ ಖಂಡಿಸಿ ಪಶ್ಚಿಮ ಬಂಗಾಳ CEO ಕಚೇರಿ ಮುಂದೆ BLOಗಳಿಂದ ಅಹೋರಾತ್ರಿ ಧರಣಿ!

SCROLL FOR NEXT