ಬಾಬಾ ರಾಮದೇವ್ 
ದೇಶ

Baba Ramdev ಗೆ ಮತ್ತೆ ಹೈಕೋರ್ಟ್ ಶಾಕ್: Dabur Chyawanprash ವಿರುದ್ಧ ಮಾತಾಡೋದು ನಿಲ್ಲಿಸಿ!

ಪತಂಜಲಿ ಆಯುರ್ವೇದವು ತನ್ನ ಉತ್ಪನ್ನವನ್ನು ಸಾಮಾನ್ಯ ಎಂದು ಕರೆಯುವ ಮೂಲಕ ಡಾಬರ್‌ನ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ಡಾಬರ್‌ನ ಅರ್ಜಿಯಲ್ಲಿ ಹೇಳಿದೆ.

ನವದೆಹಲಿ: ಬಾಬಾ ರಾಮದೇವ್‌ಗೆ (Baba Ramdev) ದೆಹಲಿ ಹೈಕೋರ್ಟ್ ಶಾಕ್ ನೀಡಿದೆ. ಬಾಬಾ ರಾಮದೇವ್ ಅವರ ಕಂಪನಿ ಪತಂಜಲಿ ಆಯುರ್ವೇದವು ಡಾಬರ್ ಚ್ಯವನ್‌ಪ್ರಾಶ್ ವಿರುದ್ಧ ಯಾವುದೇ ದಾರಿತಪ್ಪಿಸುವ ಅಥವಾ ನಕಾರಾತ್ಮಕ ಜಾಹೀರಾತು ಪ್ರಸಾರ ಮಾಡದಂತೆ ಹೈಕೋರ್ಟ್ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಮಿನಿ ಪುಷ್ಕರ್ಣ ನೇತೃತ್ವದ ಪೀಠ ಈ ಮಧ್ಯಂತರ ಆದೇಶ ನೀಡಿದ್ದು ಪ್ರಕರಣದ ಮುಂದಿನ ವಿಚಾರಣೆ ಜುಲೈ 14ಕ್ಕೆ ಮುಂದೂಡಿದರು.

ಡಾಬರ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯ ಸಮಯದಲ್ಲಿ ಡಾಬರ್ ಇಂಡಿಯಾ ಪರವಾಗಿ ಹಾಜರಾದ ವಕೀಲ ಸಂದೀಪ್ ಸೇಥಿ, ಬಾಬಾ ರಾಮದೇವ್ ಅವರ ಕಂಪನಿ ಪತಂಜಲಿ ಆಯುರ್ವೇದವು ತನ್ನ ಜಾಹೀರಾತುಗಳ ಮೂಲಕ ಚ್ಯವನ್‌ಪ್ರಾಶ್ ಗೆ ಮಾನಹಾನಿ ಮಾಡುತ್ತಿದೆ ಎಂದು ಆರೋಪಿಸಿದರು. ಪತಂಜಲಿ ಆಯುರ್ವೇದವು ತನ್ನ ಜಾಹೀರಾತುಗಳ ಮೂಲಕ ಗ್ರಾಹಕರನ್ನು ಗೊಂದಲಗೊಳಿಸುತ್ತಿದೆ. ಪತಂಜಲಿ ನಿಜವಾದ ಆಯುರ್ವೇದ ಚ್ಯವನ್‌ಪ್ರಾಶ್ ತಯಾರಿಸುವ ಏಕೈಕ ಸಂಸ್ಥೆ ಎಂದು ದಾರಿತಪ್ಪಿಸುವ ಮತ್ತು ಸುಳ್ಳು ಹೇಳಿಕೆಗಳನ್ನು ನೀಡಲು ಪ್ರಯತ್ನಿಸಿದೆ ಎಂದು ಸೇಥಿ ಹೇಳಿದರು. ಡಿಸೆಂಬರ್ 2024ರಲ್ಲಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದರೂ, ಪತಂಜಲಿ ಒಂದು ವಾರದಲ್ಲಿ 6182 ದಾರಿತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡಿದೆ ಎಂದು ಅವರು ಹೇಳಿದರು.

ಪತಂಜಲಿ ಆಯುರ್ವೇದವು ತನ್ನ ಉತ್ಪನ್ನವನ್ನು ಸಾಮಾನ್ಯ ಎಂದು ಕರೆಯುವ ಮೂಲಕ ಡಾಬರ್‌ನ ಪ್ರತಿಷ್ಠೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿದೆ ಎಂದು ಡಾಬರ್‌ನ ಅರ್ಜಿಯಲ್ಲಿ ಹೇಳಿದೆ. ಪತಂಜಲಿಯ ಜಾಹೀರಾತುಗಳು ತನ್ನ ಚ್ಯವನ್‌ಪ್ರಾಶ್ ಅನ್ನು 51ಕ್ಕೂ ಹೆಚ್ಚು ಗಿಡಮೂಲಿಕೆಗಳಿಂದ ತಯಾರಿಸಲಾಗಿದೆ ಎಂದು ಹೇಳುತ್ತವೆ. ಆದರೆ ವಾಸ್ತವದಲ್ಲಿ ಅದು ಕೇವಲ 47 ಗಿಡಮೂಲಿಕೆಗಳನ್ನು ಮಾತ್ರ ಒಳಗೊಂಡಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ. ಪತಂಜಲಿಯ ಉತ್ಪನ್ನದಲ್ಲಿ ಮಕ್ಕಳಿಗೆ ಹಾನಿಕಾರಕ ಪಾದರಸ ಕಂಡುಬಂದಿದೆ ಎಂದು ಡಾಬರ್ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಇದಕ್ಕೂ ಮೊದಲು, ಹೈಕೋರ್ಟ್ ಬಾಬಾ ರಾಮದೇವ್ ಅವರನ್ನು ಖಂಡಿಸಿತ್ತು. ರೂಹ್ ಅಫ್ಜಾ ಪ್ರಕರಣದ ಕುರಿತು ಬಾಬಾ ರಾಮದೇವ್ ಅವರ ವಿವಾದಾತ್ಮಕ ಹೇಳಿಕೆಯನ್ನು ಹೈಕೋರ್ಟ್ ಖಂಡಿಸಿತ್ತು. ಹೈಕೋರ್ಟ್‌ನ ವಾಗ್ದಂಡನೆಯ ನಂತರ, ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದ ಎಲ್ಲಾ ವೀಡಿಯೊಗಳನ್ನು ತೆಗೆದುಹಾಕುವುದಾಗಿ ಬಾಬಾ ರಾಮದೇವ್ ಹೇಳಿದ್ದರು. ಬಾಬಾ ರಾಮದೇವ್ ಯಾರ ನಿಯಂತ್ರಣದಲ್ಲಿಲ್ಲ ಮತ್ತು ತನ್ನದೇ ಆದ ಜಗತ್ತಿನಲ್ಲಿ ವಾಸಿಸುತ್ತಿದ್ದಾರೆ ಎಂದು ಹೈಕೋರ್ಟ್ ಹೇಳಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT