ಜೀವಿತಾವಧಿ ಮುಗಿದ ವಾಹನಗಳಿಗೆ ಇಂಧನ ನಿಷೇಧದ ನಂತರ ಸಂಚಾರ ಪೊಲೀಸ್ ಸಿಬ್ಬಂದಿ ಪೆಟ್ರೋಲ್ ಪಂಪ್‌ನಲ್ಲಿ ಕಾವಲು ಕಾಯುತ್ತಿದ್ದಾರೆ. FILE PHOTO
ದೇಶ

ತಂತ್ರಜ್ಞಾನ, ಜಾರಿ ಅಡೆತಡೆಗಳಿಂದ ಹಳೆ ವಾಹನಗಳಿಗೆ ಪೆಟ್ರೋಲ್/ಡೀಸೆಲ್ ನಿಷೇಧ ಅಸಾಧ್ಯ: ದೆಹಲಿ ಸರ್ಕಾರ

ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, ಈ ಕ್ರಮದ ಬಗ್ಗೆ ಜನರಲ್ಲಿ ಅಸಮಾಧಾನವಿದೆ ಮತ್ತು ಸರ್ಕಾರ ಅವರೊಂದಿಗೆ ನಿಂತಿದೆ ಎಂದು ಹೇಳಿದರು.

ನವದೆಹಲಿ: ತಾಂತ್ರಿಕ ಸವಾಲುಗಳು ಮತ್ತು ಸಂಕೀರ್ಣ ವ್ಯವಸ್ಥೆಗಳಿಂದಾಗಿ ಹಳೆಯ ವಾಹನಗಳಿಗೆ ಇಂಧನ(ಪೆಟ್ರೋಲ್, ಡೀಸೆಲ್) ನಿಷೇಧ ಕಾರ್ಯಸಾಧ್ಯವಲ್ಲ ಎಂದು ದೆಹಲಿ ಸರ್ಕಾರ ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ(CAQM) ಪತ್ರ ಬರೆದಿದೆ.

ಗುರುವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ, ಈ ಕ್ರಮದ ಬಗ್ಗೆ ಜನರಲ್ಲಿ ಅಸಮಾಧಾನವಿದೆ ಮತ್ತು ಸರ್ಕಾರ ಅವರೊಂದಿಗೆ ನಿಂತಿದೆ ಎಂದು ಹೇಳಿದರು.

ರಾಷ್ಟ್ರ ರಾಜಧಾನಿ ಪ್ರದೇಶದಾದ್ಯಂತ(NCR) ನಿಷೇಧವನ್ನು ಜಾರಿಗೆ ತರಬೇಕೆಂದು ಸರ್ಕಾರ ಸೂಚಿಸಿದೆ. ಆದರೆ ಹಳೆಯ ವಾಹನಗಳಿಗೆ "ಕಠಿಣ ಮಾನದಂಡಗಳನ್ನು" ನಿಗದಿಪಡಿಸಿದ್ದಕ್ಕಾಗಿ ಹಿಂದಿನ AAP ಆಡಳಿತವನ್ನು ಅವರು ಟೀಕಿಸಿದರು.

ಜುಲೈ 1 ರಿಂದ ದೆಹಲಿ ಸರ್ಕಾರವು, ನೋಂದಣಿ ರದ್ದುಪಡಿಸಲಾದ ಮತ್ತು ನ್ಯಾಯಾಲಯದ ಆದೇಶದ ಪ್ರಕಾರ ರಸ್ತೆಗಳಲ್ಲಿ ಓಡಾಡಲು ಅನುಮತಿಸದ - ಡೀಸೆಲ್ ವಾಹನಗಳಿಗೆ 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ಮತ್ತು ಪೆಟ್ರೋಲ್ ವಾಹನಗಳಿಗೆ 15 ವರ್ಷ ಅಥವಾ ಅದಕ್ಕಿಂತ ಹಳೆಯ ವಾಹನಗಳಿಗೆ ಇಂಧನ ನಿಷೇಧಿಸಲಾಗಿದೆ.

ನಿಷೇಧ ಜಾರಿಗೆ ಬಂದ ನಂತರ ಇಂಧನ ತುಂಬಿಸಲು ಪೆಟ್ರೋಲ್ ಪಂಪ್‌ಗಳಿಗೆ ತೆರಳುವ ಹಳೆಯ ವಾಹನಗಳನ್ನು ಸಾರಿಗೆ ಇಲಾಖೆ ಮತ್ತು ಸಂಚಾರಿ ಪೊಲೀಸರು ಮುಟ್ಟುಗೋಲು ಹಾಕಿಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT