ಬಂಗಾಳ ಬಿಜೆಪಿ ಅಧ್ಯಕ್ಷರಾಗಿ ಭಟ್ಟಾಚಾರ್ಯ ಅಧಿಕಾರ 
ದೇಶ

ಬಂಗಾಳ ಬಿಜೆಪಿ ಅಧ್ಯಕ್ಷರಾಗಿ ಭಟ್ಟಾಚಾರ್ಯ ಅಧಿಕಾರ; ಟಿಎಂಸಿ ಹೊರಹಾಕಲು 'ಒಗ್ಗಟ್ಟಿನ ಹೋರಾಟ'ಕ್ಕೆ ಕರೆ

"ತೃಣಮೂಲ ಕಾಂಗ್ರೆಸ್ ಅನ್ನು ರಾಜ್ಯದಿಂದ ಹೊರದಬ್ಬುವುದು ನಮ್ಮ ಏಕೈಕ ಗುರಿ. ಈ ಗುರಿಯನ್ನು ಸಾಧಿಸಲು ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ" ಎಂದು ಹೇಳಿದರು.

ಕೋಲ್ಕತ್ತಾ: ಪಶ್ಚಿಮ ಬಂಗಾಳ ಬಿಜೆಪಿಯ 11ನೇ ಅಧ್ಯಕ್ಷರಾಗಿ ಗುರುವಾರ ಅಧಿಕಾರ ವಹಿಸಿಕೊಂಡ ಬಿಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಮಿಕ್ ಭಟ್ಟಾಚಾರ್ಯ ಅವರು, ಟಿಎಂಸಿ ಸರ್ಕಾರವನ್ನು ಕಿತ್ತುಹಾಕಲು 'ಒಗ್ಗಟ್ಟಿನ ಹೋರಾಟ'ಕ್ಕೆ ಕರೆ ನೀಡಿದ್ದಾರೆ.

ಇಂದು ಕೋಲ್ಕತ್ತಾದ ಸೈನ್ಸ್ ಸಿಟಿಯಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಭಟ್ಟಾಚಾರ್ಯ ಅವರು ಪಶ್ಚಿಮ ಬಂಗಾಳ ನೂತನ ಬಿಜೆಪಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಯಿತು.

61 ವರ್ಷದ ಭಟ್ಟಾಚಾರ್ಯ ಅವರು 1974 ರಲ್ಲಿ ತಮ್ಮ ಶಾಲಾ ದಿನಗಳಿಂದಲೂ ಆರ್‌ಎಸ್‌ಎಸ್‌ನೊಂದಿಗೆ ಸಂಬಂಧ ಹೊಂದಿದ್ದಾರೆ.

"ಪಶ್ಚಿಮ ಬಂಗಾಳ ಅಧ್ಯಕ್ಷ ಸ್ಥಾನಕ್ಕೆ ಕೇವಲ ಒಂದು ನಾಮಪತ್ರ ಸಲ್ಲಿಕೆಯಾಗಿತ್ತು ಮತ್ತು ಅದು ಸಮಿಕ್ ಭಟ್ಟಾಚಾರ್ಯ ಅವರದ್ದು. ನಾನು ಅವರನ್ನು ಅಭಿನಂದಿಸುತ್ತೇನೆ" ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಪ್ರಮಾಣಪತ್ರ ಹಸ್ತಾಂತರಿಸುತ್ತಾ ಹೇಳಿದರು. ರವಿಶಂಕರ್ ಪ್ರಸಾದ್ ಅವರು ಪಶ್ಚಿಮ ಬಂಗಾಳದ ಅಧ್ಯಕ್ಷರ ಆಯ್ಕೆಗೆ ಬಿಜೆಪಿಯ ರಾಜ್ಯ ಚುನಾವಣಾ ಆಯುಕ್ತರಾಗಿದ್ದರು.

ಪಶ್ಚಿಮ ಬಂಗಾಳ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮಾತನಾಡಿದ ಭಟ್ಟಾಚಾರ್ಯ, "ತೃಣಮೂಲ ಕಾಂಗ್ರೆಸ್ ಅನ್ನು ರಾಜ್ಯದಿಂದ ಹೊರದಬ್ಬುವುದು ನಮ್ಮ ಏಕೈಕ ಗುರಿ. ಈ ಗುರಿಯನ್ನು ಸಾಧಿಸಲು ನಾವು ಒಗ್ಗಟ್ಟಿನಿಂದ ಹೋರಾಡುತ್ತೇವೆ" ಎಂದು ಹೇಳಿದರು.

"ಒಗ್ಗಟ್ಟಿನ ಹೋರಾಟ"ದ ಬಗ್ಗೆ ಮಾತನಾಡಿದ ಅವರು, ಪಶ್ಚಿಮ ಬಂಗಾಳದ ಮಾಜಿ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿಲ್ಲ. ಇದು ರಾಜ್ಯ ಬಿಜೆಪಿಯಿಂದ ಅವರು ದೂರವಾಗುತ್ತಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಯಿತು. ಪಕ್ಷದ ಅತ್ಯಂತ ಯಶಸ್ವಿ ರಾಜ್ಯ ಅಧ್ಯಕ್ಷರೆಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟ ಘೋಷ್ ಅವರನ್ನು ಗುರುವಾರ ಸ್ಪಷ್ಟವಾಗಿ ಕಡೆಗಣಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT