ಅಪಘಾತಕ್ಕೊಳಗಾದ ಬಸ್ ಗಳು 
ದೇಶ

ಜಮ್ಮು-ಕಾಶ್ಮೀರ: ಅಮರನಾಥ ಯಾತ್ರೆ ವೇಳೆ 5 ಬಸ್ ಗಳ ನಡುವೆ ಸರಣಿ ಅಪಘಾತ; 36 ಯಾತ್ರಿಕರಿಗೆ ಗಾಯ

ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ವೇಳೆ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ ಕೂಟ್ ಬಳಿ ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಅವಘಡ ಸಂಭವಿಸಿದೆ

ರಾಂಬನ್: ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ ಅಮರನಾಥ ಯಾತ್ರಿಕರಿದ್ದ ಐದು ಬಸ್ ಗಳು ಪರಸ್ಪರ ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ಪರಿಣಾಮ ಕನಿಷ್ಠ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಸ್‌ಗಳು ಜಮ್ಮುವಿನ ಭಗವತಿ ನಗರದಿಂದ ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಬೇಸ್ ಕ್ಯಾಂಪ್‌ಗೆ ತೆರಳುತ್ತಿದ್ದ ವೇಳೆ, ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಚಂದರ್ ಕೂಟ್ ಬಳಿ ಬೆಳಗ್ಗೆ 8 ಗಂಟೆ ಸುಮಾರಿನಲ್ಲಿ ಅವಘಡ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಗಾವಲು ಪಡೆಯಲ್ಲಿರುವ ಬಸ್‌ ಒಂದರ ಬ್ರೇಕ್ ವೈಫಲ್ಯದಿಂದ ಡಿಕ್ಕಿ ಸಂಭವಿಸಿದೆ. ಬೆಂಗಾವಲಿನಲ್ಲಿದ್ದ ಕೊನೇ ಬಸ್, ನಿಯಂತ್ರಣ ಕಳೆದುಕೊಂಡು ಮುಂದಿನ ಬಸ್ ಗೆ ಗುದ್ದಿದೆ. ಇದರಿಂದಾಗಿ ನಾಲ್ಕು ಬಸ್ ಗಳಲ್ಲಿದ್ದ 36 ಯಾತ್ರಿಕರು ಗಾಯಗೊಂಡಿದ್ದಾರೆ ಎಂದು ರಾಂಬನ್ ಉಪ ಆಯುಕ್ತ ಮೊಹಮ್ಮದ್ ಅಲಿಯಾಸ್ ಖಾನ್ ಹೇಳಿದ್ದಾರೆ.

ಘಟನಾ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು, ಗಾಯಾಳುಗಳನ್ನು ರಾಂಬನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಗಾಯಾಳುಗಳಿಗೆ ಕೂಡಲೇ ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ ಡಿಸ್ಚಾರ್ಜ್ ಮಾಡಲಾಯಿತು ಎಂದು ರಾಂಬನ್ ವೈದ್ಯಕೀಯ ಮಹಾ ಅಧೀಕ್ಷಕ ಸುದರ್ಶನ್ ಸಿಂಗ್ ಕಟೋಚ್ ತಿಳಿಸಿದ್ದಾರೆ.

ಹಾನಿಗೊಳಗಾದ ಬಸ್‌ಗಳನ್ನು ಬದಲಾಯಿಸಿ ಅಮರನಾಥ ಯಾತ್ರಿಕರ ಸುಗಮ ಯಾತ್ರೆಗೆ ಅನುಕೂಲ ಮಾಡಿಕೊಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT