ಎಂಎನ್ ಎಸ್ ಕಾರ್ಯಕರ್ತರಿಂದ ದಾಳಿ ಚಿತ್ರ 
ದೇಶ

'ಮರಾಠಿ ಕಲಿಯಲ್ಲ' ಎಂದಿದ್ದಕ್ಕೆ ಕಚೇರಿ ಧ್ವಂಸ: ಕ್ಷಮೆಯಾಚಿಸಿದ ಉದ್ಯಮಿ; ಐವರು MNS ಕಾರ್ಯಕರ್ತರ ಬಂಧನ

ದಾಳಿ ನಡೆದ ಕೆಲ ತಾಸುಗಳ ಬಳಿಕ, ಮಿತಿ ಮೀರಿದ ರೀತಿಯ ಸೋಶಿಯಲ್ ಮೀಡಿಯಾ ಫೋಸ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಠಾಕ್ರೆ ಅವರ ಅಭಿಮಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂಬೈ: ಮರಾಠಿ ಕಲಿಯಲ್ಲ ಎಂದು ರಾಜ್ ಠಾಕ್ರೆ ಅವರಿಗೆ ಸವಾಲು ಹಾಕಿ ಸಾಮಾಜಿಕ ಮಾಧ್ಯಮದಲ್ಲಿ ಫೋಸ್ಟ್ ಹಂಚಿಕೊಂಡಿದ್ದ ಉದ್ಯಮಿ ಸುಶೀಲ್ ಕೇಡಿಯಾ ಅವರ ಕಚೇರಿ ಮೇಲೆ ದಾಳಿ ನಡೆಸಿದ ಐವರು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಕಾರ್ಯಕರ್ತರನ್ನು ಶನಿವಾರ ಬಂಧಿಸಲಾಗಿದೆ.

ದಾಳಿ ನಡೆದ ಕೆಲ ತಾಸುಗಳ ಬಳಿಕ, ಮಿತಿ ಮೀರಿದ ರೀತಿಯ ಸೋಶಿಯಲ್ ಮೀಡಿಯಾ ಫೋಸ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಠಾಕ್ರೆ ಅವರ ಅಭಿಮಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒತ್ತಡದಲ್ಲಿ ತಪ್ಪು ಮನಸ್ಥಿತಿಯಲ್ಲಿ ಅಂತಹ ಪೋಸ್ಟ್ ಹಾಕಿದ್ದು, ತನ್ನ ತಪ್ಪು ಗೊತ್ತಾದ ಬಳಿಕ ಅದನ್ನು ನಿಸ್ಸಂದಿಗ್ಧವಾಗಿ ಸರಿಪಡಿಸಿಕೊಳ್ಳಲು ಬಯಸಿದ್ದೇನೆ. ಮರಾಠಿ ಗೊತ್ತಿಲ್ಲದವರ ಮೇಲೆ ನಡೆದ ದಾಳಿಯಿಂದ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗಿದ್ದೇನೆ. ನನ್ನ ಮಿತಿ ಮೀರಿದ ರೀತಿಯ ಹೇಳಿಕೆಯನ್ನು ವಾಪಸ್ ಪಡೆಯುವುದಾಗಿ ಹೇಳಿದ್ದಾರೆ.

ಮುಂಬಯಿಯಲ್ಲಿ 30 ವರ್ಷಗಳ ಕಾಲ ವಾಸಿಸುತ್ತಿದ್ದರೂ, ಸ್ಥಳೀಯ ಮರಾಠಿಯವರು ಮಾತನಾಡುವಂತೆ ನಿರರ್ಗಳವಾಗಿ ಮಾತನಾಡಲು, ಗೊಂದಲ ಅಥವಾ ಯಾವುದೇ ಮುಜುಗರ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೇಡಿಯಾ ಕ್ಷಮೆಯಾಚಿಸಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ಲದೇ ಮರಾಠಿ ಭಾಷೆ ಮೇಲಿನ ರಾಜ್ ಠಾಕ್ರೆ ಅವರ ಅಭಿಮಾನವನ್ನು ಶ್ಲಾಘಿಸಿದ್ದಾರೆ.

ಇದಕ್ಕೂ ಮುನ್ನಾ ರಾಜ್ ಠಾಕ್ರೆ ಅವರನ್ನು ಗುರಿಯನ್ನಾಗಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಕೇಡಿಯಾ, 30 ವರ್ಷದಿಂದ ಮುಂಬೈನಲ್ಲಿ ವಾಸಿಸುತ್ತಿದ್ದರೂ ನನಗೆ ಮರಾಠಿ ಸರಿಯಾಗಿ ಬರುತ್ತಿಲ್ಲ. ಭಾಷೆ ಉಳಿಸುವ ಸೋಗು ಹಾಕಿಕೊಂಡಿರುವ ನಿಮ್ಮಂತರವರನ್ನು ನೋಡಿದ ಮೇಲಂತೂ ಮರಾಠಿ ಕಲಿಯಬಾರದು ಎಂದು ಪ್ರತಿಜ್ಞೆ ಮಾಡಿದ್ದೇನೆ. ಏನು ಮಾಡೋಣ ಹೇಳು ಎಂದು ಸವಾಲು ಹಾಕಿದ್ದರು.

ಇದರಿಂದ ಕೆರಳಿದ MNS ಕಾರ್ಯಕರ್ತರು, ಕೇಡಿಯಾ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಈ ದಾಳಿ ಸಂಬಂಧ ಐವರು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆಎಂದು ವರ್ಲಿ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

SCROLL FOR NEXT