ಎಂಎನ್ ಎಸ್ ಕಾರ್ಯಕರ್ತರಿಂದ ದಾಳಿ ಚಿತ್ರ 
ದೇಶ

'ಮರಾಠಿ ಕಲಿಯಲ್ಲ' ಎಂದಿದ್ದಕ್ಕೆ ಕಚೇರಿ ಧ್ವಂಸ: ಕ್ಷಮೆಯಾಚಿಸಿದ ಉದ್ಯಮಿ; ಐವರು MNS ಕಾರ್ಯಕರ್ತರ ಬಂಧನ

ದಾಳಿ ನಡೆದ ಕೆಲ ತಾಸುಗಳ ಬಳಿಕ, ಮಿತಿ ಮೀರಿದ ರೀತಿಯ ಸೋಶಿಯಲ್ ಮೀಡಿಯಾ ಫೋಸ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಠಾಕ್ರೆ ಅವರ ಅಭಿಮಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಂಬೈ: ಮರಾಠಿ ಕಲಿಯಲ್ಲ ಎಂದು ರಾಜ್ ಠಾಕ್ರೆ ಅವರಿಗೆ ಸವಾಲು ಹಾಕಿ ಸಾಮಾಜಿಕ ಮಾಧ್ಯಮದಲ್ಲಿ ಫೋಸ್ಟ್ ಹಂಚಿಕೊಂಡಿದ್ದ ಉದ್ಯಮಿ ಸುಶೀಲ್ ಕೇಡಿಯಾ ಅವರ ಕಚೇರಿ ಮೇಲೆ ದಾಳಿ ನಡೆಸಿದ ಐವರು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಕಾರ್ಯಕರ್ತರನ್ನು ಶನಿವಾರ ಬಂಧಿಸಲಾಗಿದೆ.

ದಾಳಿ ನಡೆದ ಕೆಲ ತಾಸುಗಳ ಬಳಿಕ, ಮಿತಿ ಮೀರಿದ ರೀತಿಯ ಸೋಶಿಯಲ್ ಮೀಡಿಯಾ ಫೋಸ್ಟ್ ನಲ್ಲಿ ಕ್ಷಮೆಯಾಚಿಸಿದ್ದಾರೆ. ಅಲ್ಲದೇ ಠಾಕ್ರೆ ಅವರ ಅಭಿಮಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಒತ್ತಡದಲ್ಲಿ ತಪ್ಪು ಮನಸ್ಥಿತಿಯಲ್ಲಿ ಅಂತಹ ಪೋಸ್ಟ್ ಹಾಕಿದ್ದು, ತನ್ನ ತಪ್ಪು ಗೊತ್ತಾದ ಬಳಿಕ ಅದನ್ನು ನಿಸ್ಸಂದಿಗ್ಧವಾಗಿ ಸರಿಪಡಿಸಿಕೊಳ್ಳಲು ಬಯಸಿದ್ದೇನೆ. ಮರಾಠಿ ಗೊತ್ತಿಲ್ಲದವರ ಮೇಲೆ ನಡೆದ ದಾಳಿಯಿಂದ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗಿದ್ದೇನೆ. ನನ್ನ ಮಿತಿ ಮೀರಿದ ರೀತಿಯ ಹೇಳಿಕೆಯನ್ನು ವಾಪಸ್ ಪಡೆಯುವುದಾಗಿ ಹೇಳಿದ್ದಾರೆ.

ಮುಂಬಯಿಯಲ್ಲಿ 30 ವರ್ಷಗಳ ಕಾಲ ವಾಸಿಸುತ್ತಿದ್ದರೂ, ಸ್ಥಳೀಯ ಮರಾಠಿಯವರು ಮಾತನಾಡುವಂತೆ ನಿರರ್ಗಳವಾಗಿ ಮಾತನಾಡಲು, ಗೊಂದಲ ಅಥವಾ ಯಾವುದೇ ಮುಜುಗರ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೇಡಿಯಾ ಕ್ಷಮೆಯಾಚಿಸಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ಲದೇ ಮರಾಠಿ ಭಾಷೆ ಮೇಲಿನ ರಾಜ್ ಠಾಕ್ರೆ ಅವರ ಅಭಿಮಾನವನ್ನು ಶ್ಲಾಘಿಸಿದ್ದಾರೆ.

ಇದಕ್ಕೂ ಮುನ್ನಾ ರಾಜ್ ಠಾಕ್ರೆ ಅವರನ್ನು ಗುರಿಯನ್ನಾಗಿಸಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಕೇಡಿಯಾ, 30 ವರ್ಷದಿಂದ ಮುಂಬೈನಲ್ಲಿ ವಾಸಿಸುತ್ತಿದ್ದರೂ ನನಗೆ ಮರಾಠಿ ಸರಿಯಾಗಿ ಬರುತ್ತಿಲ್ಲ. ಭಾಷೆ ಉಳಿಸುವ ಸೋಗು ಹಾಕಿಕೊಂಡಿರುವ ನಿಮ್ಮಂತರವರನ್ನು ನೋಡಿದ ಮೇಲಂತೂ ಮರಾಠಿ ಕಲಿಯಬಾರದು ಎಂದು ಪ್ರತಿಜ್ಞೆ ಮಾಡಿದ್ದೇನೆ. ಏನು ಮಾಡೋಣ ಹೇಳು ಎಂದು ಸವಾಲು ಹಾಕಿದ್ದರು.

ಇದರಿಂದ ಕೆರಳಿದ MNS ಕಾರ್ಯಕರ್ತರು, ಕೇಡಿಯಾ ಕಚೇರಿಯನ್ನು ಧ್ವಂಸಗೊಳಿಸಿದ್ದಾರೆ. ಈ ದಾಳಿ ಸಂಬಂಧ ಐವರು ಮಹಾರಾಷ್ಟ್ರ ನವ ನಿರ್ಮಾಣ ಸೇನೆ ಕಾರ್ಯಕರ್ತರನ್ನು ಬಂಧಿಸಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆಎಂದು ವರ್ಲಿ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT