ರೈಲು ನಿಲ್ದಾಣದಲ್ಲಿಯೇ ಮಹಿಳೆಗೆ ಹೆರಿಗೆ ANI
ದೇಶ

Jhansi Railway Station ಪ್ಲಾಟ್‌ಫಾರ್ಮ್‌ನಲ್ಲೇ ಹೆರಿಗೆ ಮಾಡಿಸಿದ Indian Army ವೈದ್ಯ: ಪಾಕೆಟ್ ಚಾಕು, ಹೇರ್ ಕ್ಲಿಪ್ ಬಳಕೆ! ವ್ಯಾಪಕ ಮೆಚ್ಚುಗೆ

ಭಾರತೀಯ ಸೇನೆಯ ವೈದ್ಯ ಮೇಜರ್‌ ಡಾ.ರೋಹಿತ್‌ ಬಚ್‌ವಾಲಾ (31) ಅವರು ಮಹಿಳೆಗೆ ಹೆರಿಗೆ ಮಾಡಿಸಿ ತಾಯಿ ಮತ್ತು ಆಕೆಯ ಮಗುವಿನ ಜೀವ ಉಳಿಸಿದ್ದಾರೆ.

ಝಾನ್ಸಿ: ರೈಲ್ವೇ ನಿಲ್ದಾಣದಲ್ಲಿ ಹೆರಿಗೆ ನೋವಿನಿಂದ ಸಾವು-ನೋವಿನ ನಡುವೆ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಭಾರತೀಯ ಸೇನೆ (Indian Army)ಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಹೌದು.. ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಸೇನೆಯ ವೈದ್ಯ ಮೇಜರ್‌ ಡಾ.ರೋಹಿತ್‌ ಬಚ್‌ವಾಲಾ (31) ಅವರು ಮಹಿಳೆಗೆ ಹೆರಿಗೆ ಮಾಡಿಸಿ ಆಕೆಯ ಮತ್ತು ಆಕೆಯ ಮಗುವಿನ ಜೀವ ಉಳಿಸಿದ್ದಾರೆ.

ಮೂಲಗಳ ಪ್ರಕಾರ ಪನವೇಲ್‌–ಗೋರಖಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ ಶನಿವಾರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿಕೊಂಡಿತ್ತು.

ಹೀಗಾಗಿ ಅವರು ಝಾನ್ಸಿ ರೈಲು ನಿಲ್ದಾಣದಲ್ಲಿ ಇಳಿದಿದ್ದರು. ಮಹಿಳೆ ನೋವಿನಿಂದ ಕಿರುಚಾಡುವುದನ್ನು ಕಂಡ ಟಿಕೆಟ್‌ ಚೆಕ್ಕಿಂಗ್‌ ಸಿಬ್ಬಂದಿ ಮತ್ತು ಸೇನಾ ವೈದ್ಯಾಧಿಕಾರಿ ಕೂಡಲೇ ಕಾರ್ಯಪ್ರವೃತ್ತರಾಗಿ ಮಹಿಳೆಗೆ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಪಾಕೆಟ್ ಚಾಕು, ಹೇರ್ ಕ್ಲಿಪ್ ಬಳಕೆ

ಮೇಜರ್‌ ಡಾ.ರೋಹಿತ್‌ ಬಚ್‌ವಾಲಾ (31) ಅವರು ರೈಲಿಗಾಗಿ ಕಾಯುತ್ತಿದ್ದರು. ತುಂಬು ಗರ್ಭಿಣಿಯನ್ನು ಕಂಡು ಸಹಾಯ ಮಾಡಲು ಮುಂದಾದ ಅವರು ರೈಲ್ವೆ ಸಿಬ್ಬಂದಿಯ ನೆರವಿನೊಂದಿಗೆ ಹೇರ್‌ ಕ್ಲಿಪ್‌, ಪಾಕೆಟ್‌ ಚಾಕು ಬಳಸಿ ಹೆರಿಗೆ ಮಾಡಿಸಿದರು ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಮನೋಜ್‌ ಕುಮಾರ್‌ ಸಿಂಗ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

'ಹೊಟ್ಟೆ ನೋವಿನಿಂದ ಬಳಲಿದ್ದ ಮಹಿಳೆಯನ್ನು ಕಂಡ ಕೂಡಲೇ ಸಮಯ ವ್ಯರ್ಥ ಮಾಡದೇ ಪ್ಲಾಟ್‌ಫಾರ್ಮ್‌ನಲ್ಲಿಯೇ ಹೆರಿಗೆ ಮಾಡಿಸಲು ಸಿದ್ಧನಾದೆ. ವೈದ್ಯರು ತುರ್ತು ಸಂದರ್ಭಕ್ಕೆ ಸದಾ ಸಿದ್ಧರಾಗಿರಬೇಕು. ದೇವರ ದಯೆಯಿಂದ ನಾನು ಎರಡು ಜೀವಗಳನ್ನು ಉಳಿಸಿದೆ’ ಎಂದು ಡಾ.ರೋಹಿತ್‌ ತಿಳಿಸಿದರು.

ಹೆರಿಗೆ ಬಳಿಕ ಮಗು ಮತ್ತು ಬಾಣಂತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT