ರೈಲು ನಿಲ್ದಾಣದಲ್ಲಿಯೇ ಮಹಿಳೆಗೆ ಹೆರಿಗೆ ANI
ದೇಶ

Jhansi Railway Station ಪ್ಲಾಟ್‌ಫಾರ್ಮ್‌ನಲ್ಲೇ ಹೆರಿಗೆ ಮಾಡಿಸಿದ Indian Army ವೈದ್ಯ: ಪಾಕೆಟ್ ಚಾಕು, ಹೇರ್ ಕ್ಲಿಪ್ ಬಳಕೆ! ವ್ಯಾಪಕ ಮೆಚ್ಚುಗೆ

ಭಾರತೀಯ ಸೇನೆಯ ವೈದ್ಯ ಮೇಜರ್‌ ಡಾ.ರೋಹಿತ್‌ ಬಚ್‌ವಾಲಾ (31) ಅವರು ಮಹಿಳೆಗೆ ಹೆರಿಗೆ ಮಾಡಿಸಿ ತಾಯಿ ಮತ್ತು ಆಕೆಯ ಮಗುವಿನ ಜೀವ ಉಳಿಸಿದ್ದಾರೆ.

ಝಾನ್ಸಿ: ರೈಲ್ವೇ ನಿಲ್ದಾಣದಲ್ಲಿ ಹೆರಿಗೆ ನೋವಿನಿಂದ ಸಾವು-ನೋವಿನ ನಡುವೆ ಬಳಲುತ್ತಿದ್ದ ಮಹಿಳೆಯೊಬ್ಬರಿಗೆ ಭಾರತೀಯ ಸೇನೆ (Indian Army)ಯ ವೈದ್ಯರೊಬ್ಬರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಹೌದು.. ಉತ್ತರ ಪ್ರದೇಶದ ಝಾನ್ಸಿ ರೈಲು ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಸೇನೆಯ ವೈದ್ಯ ಮೇಜರ್‌ ಡಾ.ರೋಹಿತ್‌ ಬಚ್‌ವಾಲಾ (31) ಅವರು ಮಹಿಳೆಗೆ ಹೆರಿಗೆ ಮಾಡಿಸಿ ಆಕೆಯ ಮತ್ತು ಆಕೆಯ ಮಗುವಿನ ಜೀವ ಉಳಿಸಿದ್ದಾರೆ.

ಮೂಲಗಳ ಪ್ರಕಾರ ಪನವೇಲ್‌–ಗೋರಖಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಯೊಬ್ಬರಿಗೆ ಶನಿವಾರ ಮಧ್ಯಾಹ್ನ ಹೆರಿಗೆ ನೋವು ಕಾಣಿಸಿಕೊಂಡಿತ್ತು.

ಹೀಗಾಗಿ ಅವರು ಝಾನ್ಸಿ ರೈಲು ನಿಲ್ದಾಣದಲ್ಲಿ ಇಳಿದಿದ್ದರು. ಮಹಿಳೆ ನೋವಿನಿಂದ ಕಿರುಚಾಡುವುದನ್ನು ಕಂಡ ಟಿಕೆಟ್‌ ಚೆಕ್ಕಿಂಗ್‌ ಸಿಬ್ಬಂದಿ ಮತ್ತು ಸೇನಾ ವೈದ್ಯಾಧಿಕಾರಿ ಕೂಡಲೇ ಕಾರ್ಯಪ್ರವೃತ್ತರಾಗಿ ಮಹಿಳೆಗೆ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ನಲ್ಲಿಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ.

ಪಾಕೆಟ್ ಚಾಕು, ಹೇರ್ ಕ್ಲಿಪ್ ಬಳಕೆ

ಮೇಜರ್‌ ಡಾ.ರೋಹಿತ್‌ ಬಚ್‌ವಾಲಾ (31) ಅವರು ರೈಲಿಗಾಗಿ ಕಾಯುತ್ತಿದ್ದರು. ತುಂಬು ಗರ್ಭಿಣಿಯನ್ನು ಕಂಡು ಸಹಾಯ ಮಾಡಲು ಮುಂದಾದ ಅವರು ರೈಲ್ವೆ ಸಿಬ್ಬಂದಿಯ ನೆರವಿನೊಂದಿಗೆ ಹೇರ್‌ ಕ್ಲಿಪ್‌, ಪಾಕೆಟ್‌ ಚಾಕು ಬಳಸಿ ಹೆರಿಗೆ ಮಾಡಿಸಿದರು ಎಂದು ಸಾರ್ವಜನಿಕ ಸಂಪರ್ಕಾಧಿಕಾರಿ ಮನೋಜ್‌ ಕುಮಾರ್‌ ಸಿಂಗ್‌ ಮಾಧ್ಯಮಗಳಿಗೆ ತಿಳಿಸಿದ್ದಾರೆ.

'ಹೊಟ್ಟೆ ನೋವಿನಿಂದ ಬಳಲಿದ್ದ ಮಹಿಳೆಯನ್ನು ಕಂಡ ಕೂಡಲೇ ಸಮಯ ವ್ಯರ್ಥ ಮಾಡದೇ ಪ್ಲಾಟ್‌ಫಾರ್ಮ್‌ನಲ್ಲಿಯೇ ಹೆರಿಗೆ ಮಾಡಿಸಲು ಸಿದ್ಧನಾದೆ. ವೈದ್ಯರು ತುರ್ತು ಸಂದರ್ಭಕ್ಕೆ ಸದಾ ಸಿದ್ಧರಾಗಿರಬೇಕು. ದೇವರ ದಯೆಯಿಂದ ನಾನು ಎರಡು ಜೀವಗಳನ್ನು ಉಳಿಸಿದೆ’ ಎಂದು ಡಾ.ರೋಹಿತ್‌ ತಿಳಿಸಿದರು.

ಹೆರಿಗೆ ಬಳಿಕ ಮಗು ಮತ್ತು ಬಾಣಂತಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!