ಸಂಗ್ರಹ ಚಿತ್ರ 
ದೇಶ

ಒಂದು ದಿನವೂ ಕೆಲಸಕ್ಕೆ ಬಾರದೆ 12 ವರ್ಷಗಳಿಂದ 35 ಲಕ್ಷ ರೂ ವೇತನ ಪಡೆದ ಪೊಲೀಸ್ ಕಾನ್ಸ್ಟೇಬಲ್..!

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.

ಭೋಪಾಲ್: ಒಂದಲ್ಲ, ಎರಡಲ್ಲ ಬರೋಬ್ಬರಿ 12 ವರ್ಷಗಳ ಕಾಲ ಒಂದೇ ಒಂದು ದಿನವೂ ಕೆಲಸಕ್ಕೆ ಹೋಗದೆ ಪೊಲೀಸ್ ಪೇದೆಯೊಬ್ಬ 35 ಲಕ್ಷ ರೂಪಾಯಿ ವೇತನ ಪಡೆದ ಪ್ರಕರಣವೊಂದು ಇದೀಗ ಬೆಳಕಿಗೆ ಬಂದಿದ್ದು, ಈ ಪ್ರಕಣ ಇಲಾಖೆಯ ನಿರ್ಲಕ್ಷ್ಯ ಮತ್ತು ವ್ಯವಸ್ಥೆಯಲ್ಲಿನ ಲೋಪಗಳನ್ನು ಬಹಿರಂಗಪಡಿಸಿದೆ.

ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. 2011ರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ ನೇಮಕವಾಗಿದ್ದ ಅಭಿಷೇಕ್ ಎಂಬ ವ್ಯಕ್ತಿಯನ್ನು ಸಗರ ಪೊಲೀಸ್ ತರಬೇತಿ ಕೇಂದ್ರಕ್ಕೆ ಕಳುಹಿಸಲಾಗಿತ್ತು. ಆತ ತರಬೇತಿ ಕೇಂದ್ರಕ್ಕೆ ಹೋಗದೆ ಮನೆಗೆ ಮರಳಿದ್ದ. ಆದರೂ ವೇತನ ಮಾತ್ರ ಪ್ರತಿ ತಿಂಗಳು ಆತನ ಬ್ಯಾಂಕ್ ಖಾತೆಗೆ ಜಮಾ ಆಗಿದೆ.

ಸಗರ ಪೊಲೀಸ್ ತರಬೇತಿ ಕೇಂದ್ರಕ್ಕೆ ಆತ ತರಬೇತಿಗೆ ಹೋಗಿಲ್ಲ ಮತ್ತು ನಿರಂತರವಾಗಿ ಆತನ ಖಾತೆಗೆ ಸಂಬಳ ಜಮಾ ಆಗುತ್ತಿರುವುದು ಯಾರ ಗಮನಕ್ಕೂ ಬಂದಿಲ್ಲ.

ಕರ್ತವ್ಯಕ್ಕೆ ಗೈರು ಹಾಜರಾದರೂ ಇಲಾಖೆಗೆ ಈ ಬಗ್ಗೆ ಮಾಹಿತಿ ನೀಡಿಲ್ಲ, ರಜೆಗೆ ಅರ್ಜಿಯನ್ನೂ ಸಲ್ಲಿಸಿಲ್ಲ. ಒಂದು ದಿನವೂ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡದಿದ್ದರೂ ಇಲಾಖೆಯಲ್ಲಿ ಆತನ ಹೆಸರು ದಾಖಲಾಗಿದೆ. ಮಾತ್ರವಲ್ಲ, 35 ಲಕ್ಷ ರೂ. ವೇತನ ಆತನ ಖಾತೆಗೆ ಜಮಾ ಆಗಿದೆ.

ಕಾನ್ಸ್ಟೇಬಲ್ ತನ್ನ ಸೇವಾ ದಾಖಲೆಗಳನ್ನು ಸ್ಪೀಡ್ ಪೋಸ್ಟ್ ಮೂಲಕ ಭೋಪಾಲ್ ಪೊಲೀಸ್ ಲೈನ್ಸ್ ಗೆ ಕಳುಹಿಸಿದ್ದಾನೆ. ಆದರೆ, ಇದ್ಯಾವುದನ್ನೂ ಪರಿಶೀಲಿಸದೆ ದಾಖಲೆಗಳನ್ನು ಸ್ವೀಕರಿಸಿ ಅನುಮೋದಿಸಲಾಗಿದೆ. ತರಬೇತಿ ಕೇಂದ್ರದಲ್ಲಿ ಯಾರೂ ಅವನ ಗೈರುಹಾಜರಿಯನ್ನು ಗಮನಿಸಿಲ್ಲ. ಇಲಾಖೆಯಲ್ಲಿ ಬೆಳಕಿಗೆ ಬಂದಿರುವ ಈ ಪ್ರಕರಣ ಹಲವರ ಹುಬ್ಬೇರುವಂತೆ ಮಾಡಿದೆ.

ಪ್ರಕರಣ ಬಯಲಿಗೆ ಬಂದಿದ್ದು ಹೇಗೆ?

2011ರ ಬ್ಯಾಚ್ ನಲ್ಲಿ ತರಬೇತಿ ಪಡೆದು ಸೇವೆ ಸಲ್ಲಿಸುತ್ತಿರುವವರಿಗೆ ಬಡ್ತಿ ನೀಡಲು ಕಡತ ಪರಿಶೀಲಿಸಿದಾಗ ಈ ಮಾಹಿತಿ ಬಹಿರಂಗವಾಗಿದೆ.

ಪೊಲೀಸ್ ಕಾನ್ಸ್ಟೇಬಲ್ ನೋಡಿದ ನೆನಪು ಯಾರಿಗೂ ಇರಲಿಲ್ಲ. ಆಂತರಿಕ ತನಿಖೆಯಲ್ಲಿ ಅಧಿಕಾರಿಗಳು ಕಾನ್ಸ್ಟೇಬಲ್'ನ ಹಿಂದಿನ ದಾಖಲೆಗಳು ಮತ್ತು ಸೇವಾ ಮಾಹಿತಿಯನ್ನು ಪತ್ತೆಹಚ್ಚಲು ಪ್ರಯತ್ನಿಸಿದರೂ ಅದು ವಿಫಲವಾಗಿದೆ. 12 ವರ್ಷಗಳ ಕಾಲ ಒಬ್ಬ ವ್ಯಕ್ತಿ ಕೆಲಸದಲ್ಲಿದ್ದು ಯಾವುದೇ ಮಾಹಿತಿ ಇಲ್ಲದಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ನೆಗೆ ವಿಚಾರಣೆಗಾಗಿ ಕಾನ್ಸ್ಟೇಬಲ್ ಅನ್ನು ಕರೆಸಿದ್ದಾರೆ.

ವಿಚಾರಣೆ ವೇಳೆ ಕಾನ್ಸ್ಟೇಬಲ್ ತನಗೆ ಮಾನಸಿಕ ಆರೋಗ್ಯ ಸಮಸ್ಯೆಗಳಿವೆ ಎಂದು ಹೇಳಿಕೊಂಡಿದ್ದಾನೆಂದು ತಿಳಿದುಬಂದಿದೆ.

ಮಾನಸಿಕ ಆರೋಗ್ಯ ಸಂಸ್ಯೆಗಳಿಂದಾಗಿ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಎಂದಿರುವ ಆತ ಇದನ್ನು ಸಾಬೀತುಪಡಿಸಲು ದಾಖಲೆಗಳನ್ನೂ ಸಲ್ಲಿಸಿದ್ದಾನೆಂದು ಪ್ರಕರಣ ತನಿಖೆ ನಡೆಸುತ್ತಿರುವ ಎಸಿಪಿ ಅಂಕಿತಾ ಖಟೇರ್ಕರ್ ಅವರು ಹೇಳಿದ್ದಾರೆ.

ಪೊಲೀಸ್ ನಿಯಮಗಳ ಬಗ್ಗೆ ತನಗೆ ತಿಳಿದಿರಲಿಲ್ಲ, ಸಂವಹನದ ಕೊರತೆ ಮತ್ತು ಆರೋಗ್ಯ ಸಮಸ್ಯೆಗಳಿಂದಾಗಿ ನಿಯಮಗಳನ್ನು ಪಾಲಿಸಲು ಸಾಧ್ಯವಾಗಲಿಲ್ಲ ಎಂದು ತಿಳಿಸಿದ್ದಾರೆ. ಇಲ್ಲಿಯವರೆಗೆ 1.5 ಲಕ್ಷ ರೂಪಾಯಿಗಳನ್ನು ಇಲಾಖೆಗೆ ಹಿಂದಿರುಗಿಸಿದ್ದಾನೆ. ಉಳಿದ ಮೊತ್ತವನ್ನು ಭವಿಷ್ಯದ ಸಂಬಳದಿಂದ ಕಡಿತಗೊಳಿಸಿ ಪಾವತಿಸಲು ಒಪ್ಪಿಕೊಂಡಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

ಧರ್ಮಸ್ಥಳ ಪ್ರಕರಣ NIA ತನಿಖೆ ಮಾಡಿದರೆ ಆಕ್ಷೇಪವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ಭಾರತ- ಫಿಜಿ ರಕ್ಷಣಾ ಸಹಕಾರ ಕ್ರಿಯಾ ಯೋಜನೆ ಸಿದ್ಧ: ಇಂಡೋ ಪೆಸಿಫಿಕ್‌ ವಲಯದಲ್ಲಿ ಚೀನಾದ ಪ್ರಾಬಲ್ಯ ತಡೆಗೆ ಮಾಸ್ಟರ್ ಪ್ಲಾನ್!

US tariff deadline: ಅಮೆರಿಕದ ಶೇ. 50 ರಷ್ಟು ಸುಂಕ ಆಗಸ್ಟ್ 27 ರಿಂದ ಜಾರಿ; ಮಂಗಳವಾರ ಮಹತ್ವದ PMO ಸಭೆ; ಮೋದಿ ಹೇಳಿದ್ದೇನು? Video

SCROLL FOR NEXT