ಸಾಂದರ್ಭಿಕ ಚಿತ್ರ 
ದೇಶ

Mandi miracle: ಹಿಮಾಚಲದಲ್ಲಿ ಮೇಘಸ್ಫೋಟ; ಮಧ್ಯರಾತ್ರಿ ಬೊಗಳುತ್ತಾ 67 ಜನರ ಪ್ರಾಣ ಉಳಿಸಿದ ಹೀರೋ!

ಜೂನ್ 30 ರಂದು ಮಧ್ಯರಾತ್ರಿ ಮಂಡಿಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿತ್ತು. ಈ ಗ್ರಾಮದ ನರೇಂದ್ರ ಅವರ ನಿವಾಸದ ಎರಡನೇ ಮಹಡಿಯಲ್ಲಿ ಮಲಗಿದ್ದ ಸಾಕು ನಾಯಿ ಇದ್ದಕ್ಕಿದ್ದಂತೆ ಬೊಗಳಲು ಆರಂಭಿಸಿದೆ.

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಈ ನಡುವೆ ಮಂಡಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಶ್ವಾನವೊಂದು ಬೊಗಳಿದ್ದರಿಂದ 20 ಕುಟುಂಬಗಳ 67 ಜನರು ಕೊನೆ ಕ್ಷಣದಲ್ಲಿ ಸಾವಿನಿಂದ ಪಾರಾಗಿದ್ದಾರೆ.

ಜೂನ್ 30 ರಂದು ಮಧ್ಯರಾತ್ರಿ ಮಂಡಿಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿತ್ತು. ಈ ಗ್ರಾಮದ ನರೇಂದ್ರ ಅವರ ನಿವಾಸದ ಎರಡನೇ ಮಹಡಿಯಲ್ಲಿ ಮಲಗಿದ್ದ ಸಾಕುನಾಯಿ ಇದ್ದಕ್ಕಿದ್ದಂತೆ ಬೊಗಳಲು ಆರಂಭಿಸಿದೆ.

ರಾತ್ರಿ ಇಷ್ಟೊಂದು ಬೊಗಳದ ನಾಯಿ ಯಾಕೆ ಈ ಪರಿ ಬೊಗಳುವುದನ್ನು ನೋಡಿ ಅಚ್ಚರಿಗೊಂಡು ನರೇಂದ್ರ ಎಚ್ಚರಗೊಂಡಿದ್ದಾರೆ. ನಂತರ ನಾಯಿ ಬೊಗಳಿದ ಜಾಗದ ಬಳಿ ಹೋದಾಗ ಮನೆಯ ಗೋಡೆಯಲ್ಲಿ ದೊಡ್ಡ ಬಿರುಕು ಮೂಡಿದ್ದನ್ನು ನೋಡಿದ್ದಾರೆ. ನೋಡುತ್ತಿರುವಾಗಲೇ ಆ ಬಿರುಕಿನ ಮೂಲಕ ನೀರು ಮನೆ ಒಳಗಡೆ ಹರಿಯಲು ಆರಂಭಿಸಿತ್ತು.

ನೀರು ಮನೆಗೆ ನುಗ್ಗಿದೆ ಎಂಬದು ಖಾತ್ರಿ ಆಗುತ್ತಿದ್ದಂತೆ ನಾಯಿಯ ಜೊತೆ ಕೆಳಗಡೆ ಮಲಗಿದ್ದ ಕುಟುಂಬದ ಸದಸ್ಯರನ್ನು ಎಬ್ಬಿಸಿ ಕೂಡಲೇ ಹೊರ ಬರುವಂತೆ ಹೇಳಿದ್ದಾರೆ. ನರೇಂದ್ರ ಅವರು ನಂತರ ಸಮೀಪದಲ್ಲಿ ಇದ್ದ ನೆರೆಹೊರೆಯ ನಿವಾಸಿಗಳನ್ನು ಎಬ್ಬಿಸಿ ಮನೆಯಿಂದ ಹೊರ ಬಂದು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಜೋರು ಮಳೆ ಸುರಿಯುತ್ತಲೇ ಇತ್ತು. ಕೂಡಲೇ ಗ್ರಾಮಸ್ಥರು ಮನೆಯನ್ನು ತೊರೆದು ಓಡಿದ್ದಾರೆ. ಮನೆ ತೊರೆದ ಕೆಲ ಸಮಯದಲ್ಲಿ ಈ ನಿವಾಸಿಗಳು ಮಲಗಿದ್ದ ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ಒಟ್ಟಿನಲ್ಲಿ ನಾಯಿ ಸರಿಯಾದ ಸಮಯದಲ್ಲಿ ಬೊಗಳಿದ್ದರಿಂದ ಸುಮಾರು 67 ಮಂದಿ ಪಾರಾಗಿದ್ದಾರೆ.

ದುರಂತದ ನಂತರ, ಇತರ ಹಳ್ಳಿಗಳ ಜನರು ಸಹಾಯ ನೀಡಿದ್ದಾರೆ. ಸರ್ಕಾರವು ಪೀಡಿತ ಕುಟುಂಬಗಳಿಗೆ ತಕ್ಷಣದ ಪರಿಹಾರವಾಗಿ 10,000 ರೂ.ಗಳನ್ನು ನೀಡುತ್ತಿದೆ.

ಏತನ್ಮಧ್ಯೆ, ಭಾರತ ಹವಾಮಾನ ಇಲಾಖೆ (IMD) ಜುಲೈ 8 ಮತ್ತು 9 ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT