ಸಾಂದರ್ಭಿಕ ಚಿತ್ರ 
ದೇಶ

Mandi miracle: ಹಿಮಾಚಲದಲ್ಲಿ ಮೇಘಸ್ಫೋಟ; ಮಧ್ಯರಾತ್ರಿ ಬೊಗಳುತ್ತಾ 67 ಜನರ ಪ್ರಾಣ ಉಳಿಸಿದ ಹೀರೋ!

ಜೂನ್ 30 ರಂದು ಮಧ್ಯರಾತ್ರಿ ಮಂಡಿಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿತ್ತು. ಈ ಗ್ರಾಮದ ನರೇಂದ್ರ ಅವರ ನಿವಾಸದ ಎರಡನೇ ಮಹಡಿಯಲ್ಲಿ ಮಲಗಿದ್ದ ಸಾಕು ನಾಯಿ ಇದ್ದಕ್ಕಿದ್ದಂತೆ ಬೊಗಳಲು ಆರಂಭಿಸಿದೆ.

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದೆ. ಈ ನಡುವೆ ಮಂಡಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಶ್ವಾನವೊಂದು ಬೊಗಳಿದ್ದರಿಂದ 20 ಕುಟುಂಬಗಳ 67 ಜನರು ಕೊನೆ ಕ್ಷಣದಲ್ಲಿ ಸಾವಿನಿಂದ ಪಾರಾಗಿದ್ದಾರೆ.

ಜೂನ್ 30 ರಂದು ಮಧ್ಯರಾತ್ರಿ ಮಂಡಿಯ ಧರಂಪುರ ಪ್ರದೇಶದ ಸಿಯಾಥಿ ಗ್ರಾಮದಲ್ಲಿ ಭಾರೀ ಮಳೆಯಾಗುತ್ತಿತ್ತು. ಈ ಗ್ರಾಮದ ನರೇಂದ್ರ ಅವರ ನಿವಾಸದ ಎರಡನೇ ಮಹಡಿಯಲ್ಲಿ ಮಲಗಿದ್ದ ಸಾಕುನಾಯಿ ಇದ್ದಕ್ಕಿದ್ದಂತೆ ಬೊಗಳಲು ಆರಂಭಿಸಿದೆ.

ರಾತ್ರಿ ಇಷ್ಟೊಂದು ಬೊಗಳದ ನಾಯಿ ಯಾಕೆ ಈ ಪರಿ ಬೊಗಳುವುದನ್ನು ನೋಡಿ ಅಚ್ಚರಿಗೊಂಡು ನರೇಂದ್ರ ಎಚ್ಚರಗೊಂಡಿದ್ದಾರೆ. ನಂತರ ನಾಯಿ ಬೊಗಳಿದ ಜಾಗದ ಬಳಿ ಹೋದಾಗ ಮನೆಯ ಗೋಡೆಯಲ್ಲಿ ದೊಡ್ಡ ಬಿರುಕು ಮೂಡಿದ್ದನ್ನು ನೋಡಿದ್ದಾರೆ. ನೋಡುತ್ತಿರುವಾಗಲೇ ಆ ಬಿರುಕಿನ ಮೂಲಕ ನೀರು ಮನೆ ಒಳಗಡೆ ಹರಿಯಲು ಆರಂಭಿಸಿತ್ತು.

ನೀರು ಮನೆಗೆ ನುಗ್ಗಿದೆ ಎಂಬದು ಖಾತ್ರಿ ಆಗುತ್ತಿದ್ದಂತೆ ನಾಯಿಯ ಜೊತೆ ಕೆಳಗಡೆ ಮಲಗಿದ್ದ ಕುಟುಂಬದ ಸದಸ್ಯರನ್ನು ಎಬ್ಬಿಸಿ ಕೂಡಲೇ ಹೊರ ಬರುವಂತೆ ಹೇಳಿದ್ದಾರೆ. ನರೇಂದ್ರ ಅವರು ನಂತರ ಸಮೀಪದಲ್ಲಿ ಇದ್ದ ನೆರೆಹೊರೆಯ ನಿವಾಸಿಗಳನ್ನು ಎಬ್ಬಿಸಿ ಮನೆಯಿಂದ ಹೊರ ಬಂದು ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಸೂಚಿಸಿದ್ದಾರೆ.

ಈ ಸಂದರ್ಭದಲ್ಲಿ ಜೋರು ಮಳೆ ಸುರಿಯುತ್ತಲೇ ಇತ್ತು. ಕೂಡಲೇ ಗ್ರಾಮಸ್ಥರು ಮನೆಯನ್ನು ತೊರೆದು ಓಡಿದ್ದಾರೆ. ಮನೆ ತೊರೆದ ಕೆಲ ಸಮಯದಲ್ಲಿ ಈ ನಿವಾಸಿಗಳು ಮಲಗಿದ್ದ ಮನೆಗಳು ನೀರಿನಲ್ಲಿ ಕೊಚ್ಚಿ ಹೋಗಿದೆ. ಒಟ್ಟಿನಲ್ಲಿ ನಾಯಿ ಸರಿಯಾದ ಸಮಯದಲ್ಲಿ ಬೊಗಳಿದ್ದರಿಂದ ಸುಮಾರು 67 ಮಂದಿ ಪಾರಾಗಿದ್ದಾರೆ.

ದುರಂತದ ನಂತರ, ಇತರ ಹಳ್ಳಿಗಳ ಜನರು ಸಹಾಯ ನೀಡಿದ್ದಾರೆ. ಸರ್ಕಾರವು ಪೀಡಿತ ಕುಟುಂಬಗಳಿಗೆ ತಕ್ಷಣದ ಪರಿಹಾರವಾಗಿ 10,000 ರೂ.ಗಳನ್ನು ನೀಡುತ್ತಿದೆ.

ಏತನ್ಮಧ್ಯೆ, ಭಾರತ ಹವಾಮಾನ ಇಲಾಖೆ (IMD) ಜುಲೈ 8 ಮತ್ತು 9 ರಂದು ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT