ಸಾಂದರ್ಭಿಕ ಚಿತ್ರ 
ದೇಶ

'ಜನ್ ಧನ್' ನಿಷ್ಕ್ರಿಯ ಖಾತೆ ಮುಚ್ಚುವಂತೆ ಬ್ಯಾಂಕ್ ಗಳಿಗೆ ಸೂಚನೆ? ಹಣಕಾಸು ಸಚಿವಾಲಯದ ಸ್ಪಷ್ಪನೆ

ನಿಷ್ಕ್ರಿಯ ಪ್ರಧಾನ ಮಂತ್ರಿ ಜನ್ ಧನ್ ಖಾತೆಗಳ ಸಂಖ್ಯೆಯನ್ನು ಹಣಕಾಸು ಸೇವೆಗಳ ಇಲಾಖೆಯು ನಿರಂತರವಾಗಿ ಮೇಲ್ವಿಚಾರಣೆ

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯ ನಿಷ್ಕ್ರಿಯ ಖಾತೆಗಳನ್ನು ಮುಚ್ಚುವಂತೆ ಹಣಕಾಸು ಸಚಿವಾಲಯ ಬ್ಯಾಂಕುಗಳಿಗೆ ನಿರ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈ ವರದಿ ಕುರಿತು ಸ್ಪಷ್ಪನೆ ನೀಡಿರುವ ಸಚಿವಾಲಯ, ಪ್ರಧಾನಮಂತ್ರಿ ಜನಧನ್ ಯೋಜನೆಯ ನಿಷ್ಕ್ರಿಯ ಖಾತೆಗಳನ್ನು ಮುಚ್ಚುವಂತೆ ಬ್ಯಾಂಕುಗಳಿಗೆ ಸೂಚಿಸಿಲ್ಲ ಎಂದು ತಿಳಿಸಿದೆ.

ಜನಧನ್ ಯೋಜನಾ ಖಾತೆಗಳು, ಜೀವನ್ ಜ್ಯೋತಿ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ ಮತ್ತು ಇತರ ಕಲ್ಯಾಣ ಯೋಜನೆಗಳ ಅಳವಡಿಕೆಯನ್ನು ಹೆಚ್ಚಿಸಲು ಜುಲೈ 1 ರಿಂದ ದೇಶಾದ್ಯಂತ ಹಣಕಾಸು ಸೇವೆಗಳ ಇಲಾಖೆಯು ಮೂರು ತಿಂಗಳ ಅಭಿಯಾನವನ್ನು ಪ್ರಾರಂಭಿಸಿದೆ.

ಈ ಅಭಿಯಾನದ ಸಮಯದಲ್ಲಿ ಬ್ಯಾಂಕುಗಳು ಎಲ್ಲಾ ಬ್ಯಾಂಕ್ ಗಳು ಖಾತೆಗಳ ಮರು- ಕೆವೈಸಿಯನ್ನು ಸಹ ಕೈಗೊಳ್ಳಲಿವೆ ಎಂದು ಹೇಳಿಕೆಯಲ್ಲಿ ಸಚಿವಾಲಯ ಹೇಳಿದೆ.

ನಿಷ್ಕ್ರಿಯ ಪ್ರಧಾನ ಮಂತ್ರಿ ಜನ್ ಧನ್ ಖಾತೆಗಳ ಸಂಖ್ಯೆಯನ್ನು ಹಣಕಾಸು ಸೇವೆಗಳ ಇಲಾಖೆಯು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತದೆ ಮತ್ತು ಅವರ ಖಾತೆಗಳನ್ನು ಸಕ್ರಿಯಗೊಳಿಸಲು ಆಯಾ ಖಾತೆದಾರರನ್ನು ಸಂಪರ್ಕಿಸುವಂತೆ ಬ್ಯಾಂಕುಗಳಿಗೆ ಸೂಚಿಸಿದೆ.

ಪಿಎಂಜೆಡಿವೈ ಖಾತೆಗಳ ಒಟ್ಟು ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ ಮತ್ತು ನಿಷ್ಕ್ರಿಯ ಪಿಎಂಜೆಡಿವೈ ಖಾತೆಗಳನ್ನು ಸಾಮೂಹಿಕವಾಗಿ ಮುಚ್ಚುವ ಯಾವುದೇ ಪ್ರಕರಣಗಳು ಇಲಾಖೆಯ ಗಮನಕ್ಕೆ ಬಂದಿಲ್ಲ ಎಂದು ಹಣಕಾಸು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT