ಸಾಂದರ್ಭಿಕ ಚಿತ್ರ 
ದೇಶ

'ಜನ್ ಧನ್' ನಿಷ್ಕ್ರಿಯ ಖಾತೆ ಮುಚ್ಚುವಂತೆ ಬ್ಯಾಂಕ್ ಗಳಿಗೆ ಸೂಚನೆ? ಹಣಕಾಸು ಸಚಿವಾಲಯದ ಸ್ಪಷ್ಪನೆ

ನಿಷ್ಕ್ರಿಯ ಪ್ರಧಾನ ಮಂತ್ರಿ ಜನ್ ಧನ್ ಖಾತೆಗಳ ಸಂಖ್ಯೆಯನ್ನು ಹಣಕಾಸು ಸೇವೆಗಳ ಇಲಾಖೆಯು ನಿರಂತರವಾಗಿ ಮೇಲ್ವಿಚಾರಣೆ

ನವದೆಹಲಿ: ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯ ನಿಷ್ಕ್ರಿಯ ಖಾತೆಗಳನ್ನು ಮುಚ್ಚುವಂತೆ ಹಣಕಾಸು ಸಚಿವಾಲಯ ಬ್ಯಾಂಕುಗಳಿಗೆ ನಿರ್ದೇಶಿಸಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಈ ವರದಿ ಕುರಿತು ಸ್ಪಷ್ಪನೆ ನೀಡಿರುವ ಸಚಿವಾಲಯ, ಪ್ರಧಾನಮಂತ್ರಿ ಜನಧನ್ ಯೋಜನೆಯ ನಿಷ್ಕ್ರಿಯ ಖಾತೆಗಳನ್ನು ಮುಚ್ಚುವಂತೆ ಬ್ಯಾಂಕುಗಳಿಗೆ ಸೂಚಿಸಿಲ್ಲ ಎಂದು ತಿಳಿಸಿದೆ.

ಜನಧನ್ ಯೋಜನಾ ಖಾತೆಗಳು, ಜೀವನ್ ಜ್ಯೋತಿ ಬಿಮಾ ಯೋಜನೆ, ಅಟಲ್ ಪಿಂಚಣಿ ಯೋಜನೆ ಮತ್ತು ಇತರ ಕಲ್ಯಾಣ ಯೋಜನೆಗಳ ಅಳವಡಿಕೆಯನ್ನು ಹೆಚ್ಚಿಸಲು ಜುಲೈ 1 ರಿಂದ ದೇಶಾದ್ಯಂತ ಹಣಕಾಸು ಸೇವೆಗಳ ಇಲಾಖೆಯು ಮೂರು ತಿಂಗಳ ಅಭಿಯಾನವನ್ನು ಪ್ರಾರಂಭಿಸಿದೆ.

ಈ ಅಭಿಯಾನದ ಸಮಯದಲ್ಲಿ ಬ್ಯಾಂಕುಗಳು ಎಲ್ಲಾ ಬ್ಯಾಂಕ್ ಗಳು ಖಾತೆಗಳ ಮರು- ಕೆವೈಸಿಯನ್ನು ಸಹ ಕೈಗೊಳ್ಳಲಿವೆ ಎಂದು ಹೇಳಿಕೆಯಲ್ಲಿ ಸಚಿವಾಲಯ ಹೇಳಿದೆ.

ನಿಷ್ಕ್ರಿಯ ಪ್ರಧಾನ ಮಂತ್ರಿ ಜನ್ ಧನ್ ಖಾತೆಗಳ ಸಂಖ್ಯೆಯನ್ನು ಹಣಕಾಸು ಸೇವೆಗಳ ಇಲಾಖೆಯು ನಿರಂತರವಾಗಿ ಮೇಲ್ವಿಚಾರಣೆ ಮಾಡುತ್ತದೆ ಮತ್ತು ಅವರ ಖಾತೆಗಳನ್ನು ಸಕ್ರಿಯಗೊಳಿಸಲು ಆಯಾ ಖಾತೆದಾರರನ್ನು ಸಂಪರ್ಕಿಸುವಂತೆ ಬ್ಯಾಂಕುಗಳಿಗೆ ಸೂಚಿಸಿದೆ.

ಪಿಎಂಜೆಡಿವೈ ಖಾತೆಗಳ ಒಟ್ಟು ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ ಮತ್ತು ನಿಷ್ಕ್ರಿಯ ಪಿಎಂಜೆಡಿವೈ ಖಾತೆಗಳನ್ನು ಸಾಮೂಹಿಕವಾಗಿ ಮುಚ್ಚುವ ಯಾವುದೇ ಪ್ರಕರಣಗಳು ಇಲಾಖೆಯ ಗಮನಕ್ಕೆ ಬಂದಿಲ್ಲ ಎಂದು ಹಣಕಾಸು ಇಲಾಖೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್