ಕೇಂದ್ರ ಸಚಿವ ಭೂಪೇಂದರ್ ಯಾದವ್ ಭೇಟಿಯಾದ ಡಿಕೆ ಶಿವಕುಮಾರ್ 
ದೇಶ

ಎತ್ತಿನಹೊಳೆ ಯೋಜನೆ: ಅರಣ್ಯ ಭೂಮಿ ಬಳಕೆಗೆ ಶೀಘ್ರ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಡಿ.ಕೆ ಶಿವಕುಮಾರ್ ಮನವಿ!

ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 111.02 ಹೆಕ್ಟೇರ್ (173.31 ಹೆಕ್ಟೇರ್ ನಿಂದ ಪರಿಷ್ಕೃತ) ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಜೂನ್ 4 ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (MoEF) ಪ್ರಸ್ತಾವನೆ.

ನವದೆಹಲಿ: ಕೇಂದ್ರ ಪರಿಸರ ಸಚಿವ ಭೂಪೇಂದರ್ ಯಾದವ್ ಅವರನ್ನು ಮಂಗಳವಾರ ಭೇಟಿಯಾದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ದಕ್ಷಿಣ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶದ ಎತ್ತಿನಹೊಳೆ ಯೋಜನೆಗೆ ಅರಣ್ಯ ಭೂಮಿ ಬಳಕೆಗೆ ಶೀಘ್ರ ತಾತ್ವಿಕ ಅನುಮೋದನೆ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ.

ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ 111.02 ಹೆಕ್ಟೇರ್ (173.31 ಹೆಕ್ಟೇರ್ ನಿಂದ ಪರಿಷ್ಕೃತ) ಅರಣ್ಯ ಭೂಮಿ ಬಳಕೆಗೆ ಒಪ್ಪಿಗೆ ನೀಡುವಂತೆ ರಾಜ್ಯ ಸರ್ಕಾರವು ಜೂನ್ 4 ರಂದು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯಕ್ಕೆ (MoEF) ಪ್ರಸ್ತಾವ ಸಲ್ಲಿಸಿದೆ ಎಂದು ಜಲಸಂಪನ್ಮೂಲ ಸಚಿವರು ಆಗಿರುವ ಡಿಕೆ ಶಿವಕುಮಾರ್ ಸಭೆಯಲ್ಲಿ ತಿಳಿಸಿದರು.

ಈ ಪ್ರಸ್ತಾವನ್ನು ಕೇಂದ್ರ ಪರಿಸರ ಮತ್ತು ಅರಣ್ಯ ಸಚಿವಾಲಯದ ಸಲಹಾ ಸಮಿತಿಯು ಜೂನ್ 24 ರಂದು ಚರ್ಚಿಸಿತ್ತು. ನಂತರ ಜುಲೈ 7 ರಂದು ಅರಣ್ಯಗಳ ಮಹಾನಿರೀಕ್ಷಕರು ( Inspector General of Forests) EDS (ಅಗತ್ಯ ವಿವರ) ಕೋರಿದ್ದಾರೆ.

ಇದು ಪರಿಸರ ಅಥವಾ ಅರಣ್ಯ ಬಳಕೆಗೆ ಅಗತ್ಯವಿರುವ ಯೋಜನೆಗಳ ಮೌಲ್ಯಮಾಪನದ ಸಮಯದಲ್ಲಿ ಕೇಂದ್ರ ಸಚಿವಾಲಯವು ಬಳಸುವ ಔಪಚಾರಿಕ ಪ್ರಕ್ರಿಯೆಯಾಗಿದೆ. EDS ಸಿದ್ಧಪಡಿಸಲಾಗುತ್ತಿದ್ದು, ಅನುಮೋದನೆಗಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಗೆ ಆದಷ್ಟು ಬೇಗ ತಾತ್ವಿಕ ಅನುಮೋದನೆ ನೀಡಲು ನಿಮ್ಮ ಮಧ್ಯಸ್ಥಿಕೆ ಕೋರುವುದಾಗಿ ಡಿಕೆ ಶಿವಕುಮಾರ್ ಮನವಿ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಎತ್ತಿನಹೊಳೆ ಯೋಜನೆ ಅನುಷ್ಟಾನದಿಂದ ಏಳು ಜಿಲ್ಲೆಗಳಲ್ಲಿ 75.59 ಲಕ್ಷ ಜನರಿಗೆ ಅನುಕೂಲವಾಗಲಿದೆ. 527 ಕೆರೆಗಳನ್ನು ಅವುಗಳ ಶೇ. 50 ರಷ್ಟು ಸಾಮರ್ಥ್ಯದಷ್ಟು ತುಂಬಿಸಲು ಮತ್ತು ಅಂತರ್ಜಲದ ಮಟ್ಟವನ್ನು ಮರುಪೂರಣಗೊಳಿಸಲು ನೆರವಾಗುತ್ತದೆ ಎಂದು ಅವರು ಹೇಳಿದ್ದಾರೆ.

ಡಿಕೆ ಶಿವಕುಮಾರ್ ಅವರು ಕರ್ನಾಟಕ ಭವನದಲ್ಲಿ ರಾಜ್ಯ ಜಲಸಂಪನ್ಮೂಲ ಇಲಾಖೆಯ ಕಾನೂನು ತಂಡದೊಂದಿಗೆ ನದಿ ಯೋಜನೆಗಳ ಕಾನೂನು ಹೋರಾಟ ಕುರಿತು ಪ್ರತ್ಯೇಕವಾಗಿ ಚರ್ಚಿಸಿದರು. ಸಭೆಯಲ್ಲಿ ರಾಜ್ಯ ಕೃಷಿ ಸಚಿವ ಎನ್ ಚೆಲುವರಾಯ ಸ್ವಾಮಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEO

LeT ಜೊತೆಗೆ ಒಪ್ಪಂದ; ಹಮಾಸ್ 'ಭಯೋತ್ಪಾದಕ ಸಂಘಟನೆ' ಎಂದು ಘೋಷಿಸಿ; ಭಾರತಕ್ಕೆ ಇಸ್ರೇಲ್ ಒತ್ತಾಯ!

ರಾಷ್ಟ್ರ ಪ್ರಶಸ್ತಿ ವಿಜೇತ ಚಿತ್ರ: 'ತಿಥಿ' ಹೀರೋಗೆ ಇಂದೆಂಥಾ ಸ್ಥಿತಿ?, ಅಭಿ ಈಗ ದಿನಗೂಲಿ ಕಾರ್ಮಿಕ!

ಮದುವೆ ರದ್ದು ಬೆನ್ನಲ್ಲೇ ಪರಸ್ಪರ 'ಅನ್‌ಫಾಲೋ' ಮಾಡಿಕೊಂಡ ಸ್ಮೃತಿ ಮಂಧಾನ, ಪಲಾಶ್ ಮುಚ್ಚಲ್!

Goa nightclub fire: ರೆಸ್ಟೋರೆಂಟ್‌ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!

SCROLL FOR NEXT