ಮೇಲ್ಸೇತುವೆ ಕುಸಿತ ಪ್ರಕರಣ 
ದೇಶ

Gambhira Bridge: 3 ತಿಂಗಳ ಮೊದಲೇ ಮೇಲ್ಸೇತುವೆ ಕುಸಿತದ ಬಗ್ಗೆ ಎಚ್ಚರಿಕೆ ನೀಡಿದ್ದ ವರದಿಗಾರ! Video

ಗುಜರಾತ್ ನ ವಡೋದರಾದ ಆನಂದ್ ಮತ್ತು ವಡೋದರಾ ಪ್ರದೇಶಗಳನ್ನು ಸಂಪರ್ಕಿಸುವ ಗಂಭೀರ ಸೇತುವೆ ಕುಸಿದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದು, 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಡೋದರ: ಗುಜರಾತ್‌ನ ವಡೋದರಾದಲ್ಲಿ ಸಂಭವಿಸಿದ ಮೇಲ್ಸೇತುವೆ ಕುಸಿತ ದುರಂತ ದೇಶಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿರುವಂತೆಯೇ ಈ ಸೇತುವೆಯ ಶಿಥಿಲಾವಸ್ಥೆಯ ಕುರಿತು ವರದಿಗಾರರೊಬ್ಬರು ಮೂರು ತಿಂಗಳ ಮೊದಲೇ ಎಚ್ಚರಿಸಿದ್ದರು ಎನ್ನಲಾಗಿದೆ.

ಹೌದು.. ಗುಜರಾತ್ ನ ವಡೋದರಾದ ಆನಂದ್ ಮತ್ತು ವಡೋದರಾ ಪ್ರದೇಶಗಳನ್ನು ಸಂಪರ್ಕಿಸುವ ಗಂಭೀರ ಸೇತುವೆ ಕುಸಿದಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 9 ಮಂದಿ ಸಾವಿಗೀಡಾಗಿದ್ದು, 5ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದುರಂತದ ವೇಳೆ ಈ ಮಾರ್ಗದಲ್ಲಿ ಸಂಚರಿಸುತ್ತಿದ್ದ ಟ್ರಕ್, ಟ್ಯಾಂಕರ್ ಮತ್ತು ಕಾರುಗಳು ಸೇರಿದಂತೆ ಹಲವಾರು ವಾಹನಗಳು ನದಿಗೆ ಬಿದ್ದಿವೆ.

ಪ್ರಸ್ತುತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿವೆ. ಗ್ರಾಮಸ್ಥರು, ಪೊಲೀಸರು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಐವರನ್ನು ಸಾವಿನ ದವಡೆಯಿಂದ ರಕ್ಷಿಸಿದ್ದಾರೆ.

3 ತಿಂಗಳ ಮೊದಲೇ ಎಚ್ಚರಿಸಿದ್ದ ವರದಿಗಾರ

ಇನ್ನು ಈ ಸೇತುವೆ ಬಹಳ ಹಿಂದಿನಿಂದಲೂ ಶಿಥಿಲಾವಸ್ಥೆಯಲ್ಲಿದ್ದು ಅಪಾಯಕಾರಿಯಾಗಿತ್ತು. ಸ್ಥಳೀಯರು ಈ ಬಗ್ಗೆ ಎಚ್ಚರಿಕೆ ನೀಡುತ್ತಲೇ ಇದ್ದರು. ತುರ್ತು ದುರಸ್ತಿ ಮಾಡಬೇಕೆಂದು ಇಲ್ಲವೇ ಹೊಸದಾಗಿ ನಿರ್ಮಿಸಬೇಕೆಂದು ಒತ್ತಾಯಿಸುತ್ತಿದ್ದರು. ಇದೇ ವಿಚಾರವಾಗಿ ವರದಿಗಾರನೋರ್ವ ಈ ಬಗ್ಗೆ ವರದಿ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಈ ಕುರಿತ ವಿಡಿಯೋವೊಂದು ಇದೀಗ ವ್ಯಾಪಕ ವೈರಲ್ ಆಗುತ್ತಿದೆ.

ವಿಡಿಯೋದಲ್ಲೇನಿದೆ?

ವರದಿಗಾರನ ಈ ವಿಡಿಯೋದಲ್ಲಿ ಮೇಲ್ಸೇತುವೆಯಲ್ಲಿ ಬಿರುಕು ಮತ್ತು ಕಾಂಕ್ರೀಟ್ ಗಳಲ್ಲಿನ ಬಿರುಕಿನ ಕುರಿತು ಎಚ್ಚರಿಕೆ ನೀಡಲಾಗಿದೆ. ಅಲ್ಲದೆ ಈ ಮೇಲ್ಸೇತುವೆ ಮೇಲೆ ಭಾರಿ ವಾಹನಗಳು ಚಲಿಸಿದರು ಸೇತುವ ನಡುಗಿದಂತೆ ಭಾಸವಾಗುತ್ತದೆ. ಅಲ್ಲದೆ ಸೇತುವೆಯಲ್ಲಿನ ಜಾಯಿಂಟ್ ಗಳು ಬಿರುಕು ಬಿಟ್ಟಿರುವುದು ಸ್ಪಷ್ಟವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT