ಅಕ್ರಮ ಸಂಬಂಧ ಆರೋಪ, ಯುವಕನ ಮೇಲೆ ಹಲ್ಲೆ 
ದೇಶ

ಆಂಟಿ ಜೊತೆ ಅಕ್ರಮ ಸಂಬಂಧ: ಯುವಕನಿಗೆ ಹಿಗ್ಗಾಮುಗ್ಗ ಥಳಿತ, ಸ್ಥಳದಲ್ಲೇ ಮದುವೆ! Video

ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 24 ವರ್ಷದ ಯುವಕ ತನ್ನ ಆಂಟಿ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎಂದು ಆರೋಪಿಸಿ ಮನಸೋ ಇಚ್ಛೆ ಥಳಿಸಲಾಗಿದೆ.

ಪಾಟ್ನಾ: ಗಂಡ ಇಲ್ಲದಿರುವಾಗ ಆಂಟಿ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಯುವಕನನ್ನು ಹಿಡಿದ ಸ್ಥಳೀಯರು ಆತನಿಗೆ ಥಳಿಸಿ ಸ್ಥಳದಲ್ಲೇ ಆಂಟಿ ಜೊತೆ ಮದುವೆ ಮಾಡಿದ್ದಾರೆ.

ಹೌದು.. ಬಿಹಾರದ ಸುಪೌಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, 24 ವರ್ಷದ ಯುವಕ ತನ್ನ ಆಂಟಿ ಜೊತೆ ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎಂದು ಆರೋಪಿಸಿ ಮನಸೋ ಇಚ್ಛೆ ಥಳಿಸಲಾಗಿದೆ. ಅಲ್ಲದೆ ಬಲವಂತವಾಗಿ ಆಂಟಿ ಜೊತೆ ಆತನಿಗೆ ಮದುವೆ ಮಾಡಲಾಗಿದೆ.

ಜುಲೈ 2 ರಂದು ಈ ಘಟನೆ ನಡೆದಿದ್ದು, ಭೀಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೀವ್‌ಚಾಪುರ ವಾರ್ಡ್ ಸಂಖ್ಯೆ 8 ರಲ್ಲಿ ಮಿಥಲೇಶ್ ಕುಮಾರ್ ಮಖಿಯಾ ಎಂಬ ಯುವಕನನ್ನು ಅಪಹರಿಸಿದ ದುಷ್ಕರ್ಮಿಗಳು ಆತನ ಮೇಲೆ ಹಲ್ಲೆ ಮಾಡಿ ಬಳಿಕ ಆತನನ್ನು ಆತನ ಚಿಕ್ಕಪ್ಪ ಶಿವಚಂದ್ರ ಮುಖಿಯಾ ಅವರಿಗೆ ಸೇರಿದ ಮನೆಗೆ ಕರೆದೊಯ್ಯಿದ್ದಾರೆ.

ಅಲ್ಲಿ ಮಿಥಲೇಶ್ ಕುಮಾರ್ ಮಖಿಯಾ ಮೇಲೆ ಹಲ್ಲೆ ಮಾಡಿ ಆತ ತನ್ನ ಚಿಕ್ಕಪ್ಪ ಶಿವಚಂದ್ರ ಅವರ ಪತ್ನಿ ರೀಟಾ ದೇವಿ ಅವರೊಂದಿಗೆ ಸಂಬಂಧ ಹೊಂದಿರುವ ಕುರಿತು ತಪ್ಪೊಪ್ಪಿಗೆ ಹೇಳಿಕೆ ನೀಡಿದ ಬಳಿಕ ಮಿಥಲೇಶ್ ಕುಮಾರ್ ಮತ್ತು ರೀಟಾದೇವಿಗೆ ಸ್ಥಳದಲ್ಲೇ ಮದುವೆ ಮಾಡಲಾಗಿದೆ.

ಅಂದಹಾಗೆ ಶಿವಚಂದ್ರ ಮತ್ತು ರೀಟಾ ದೇನವಿ ದಂಪತಿಗೆ ಈಗಾಗಲೇ ನಾಲ್ಕು ವರ್ಷದ ಮಗನಿದ್ದಾನೆ. ಹೀಗಿದ್ದೂ ರೀಟಾ ದೇವಿ ಜೊತೆ ಮಿಥಿಲೇಶ್ ಅಕ್ರಮ ಸಂಬಂಧ ಹೊಂದಿದ್ದ ಎಂದು ಹೇಳಲಾಗಿದೆ.

ಇನ್ನು ಹಲ್ಲೆ ವೇಳೆ ರೀಟಾ ಮತ್ತು ಮಿಥಿಲೇಶ್ ತಂದೆ ರಾಮಚಂದ್ರ ಅವರು ತಡೆಯಲೆತ್ನಿಸಿದ್ದು. ಅವರ್ ಮೇಲೆಯೂ ಕೂಡ ಗ್ರಾಮಸ್ಥರು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ.

ದೂರು ದಾಖಲು

ಇನ್ನು ಗ್ರಾಮಸ್ಥರ ಈ ಪುಂಡಾಟಿಕೆ ವಿರುದ್ಧ ಮಿಥಲೇಶ್ ಕುಮಾರ್ ಮಖಿಯಾ ತಂದೆ ರಾಮಚಂದ್ರ ಅವರು ಪೊಲೀಸ್ ದೂರು ದಾಖಲಿಸಿದ್ದಾರೆ. ರೀಟಾ ಜೊತೆ ನನ್ನ ಮಗ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಆರೋಪದ ಮೇರೆಗೆ ಗುಂಪು ತನ್ನ ಮಗನನ್ನು ಥಳಿಸಿದೆ ಎಂದು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಜೀವ್‌ಛಾಪುರದ ನಿವಾಸಿಗಳಾದ ರಾಜ ಕುಮಾರ್, ವಿಕಾಸ್ ಮುಖಿಯಾ, ಶಿವಚಂದ್ರ ಮುಖಿಯಾ, ಸೂರಜ್ ಮುಖಿಯಾ, ಪ್ರದೀಪ್ ಠಾಕೂರ್, ಸುರೇಶ್ ಮುಖಿಯಾ ಮತ್ತು ಭೀಮ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಬೆಳಗಂಜ್ ನಿವಾಸಿಗಳಾದ ರಾಹುಲ್ ಕುಮಾರ್ ಮತ್ತು ಸಜನ್ ಸಾಹ್ನಿ ಅವರು ತಮ್ಮ ಮಗನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ರಾಮಚಂದ್ರ ಹೇಳಿದ್ದು, ಹಲ್ಲೆಯಲ್ಲಿ ಅವರ ಮಗನ ಬೆನ್ನು, ಕುತ್ತಿಗೆ ಮತ್ತು ಕೈಗಳಿಗೆ ಗಂಭೀರ ಗಾಯಗಳಾಗಿವೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ತಂದೆ ರಾಮಚಂದ್ರ ನೀಡಿರುವ ದೂರಿನ ಅನ್ವಯ ಪೊಲೀಸರು ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಭೀಮ್‌ಪುರ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ಮಿಥ್‌ಲೇಶ್ ಪಾಂಡೆ ತಿಳಿಸಿದ್ದಾರೆ.

ಆರಂಭದಲ್ಲಿ ಮಿಥ್‌ಲೇಶ್ ಅವರನ್ನು ನರಪತ್‌ಗಂಜ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ನಂತರ ಗಂಭೀರ ಸ್ಥಿತಿಯಲ್ಲಿ ಅರಾರಿಯಾ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT