ಆನಂದ್ ಮತ್ತು ವಡೋದರಾ ಸಂಪರ್ಕ ಕಲ್ಪಿಸುವ ಸೇತುವೆ ಕುಸಿತ  
ದೇಶ

ಗುಜರಾತ್: ವಡೋದರಾ ಬಳಿ ಗಂಭೀರಾ ಸೇತುವೆ ಕುಸಿತ; ಮೃತರ ಸಂಖ್ಯೆ 9ಕ್ಕೆ ಏರಿಕೆ; Video

ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಭಾಗಗಳನ್ನು ಸಂಪರ್ಕಿಸುವ ನದಿಯಲ್ಲಿ ಗಂಭೀರಾ ಸೇತುವೆಯ ಸ್ಲ್ಯಾಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ.

ಅಹಮದಾಬಾದ್: ಗುಜರಾತ್‌ ರಾಜ್ಯದ ವಡೋದರಾ ಜಿಲ್ಲೆಯ ಮುಜ್‌ಪುರ ಬಳಿಯ ನಾಲ್ಕು ದಶಕಗಳಷ್ಟು ಹಳೆಯದಾದ ಗಂಭೀರಾ ಸೇತುವೆಯ ಒಂದು ಭಾಗ ಇಂದು ಬುಧವಾರ ಬೆಳಗ್ಗೆ ಕುಸಿದು ಬಿದ್ದ ಪರಿಣಾಮ ಹಲವಾರು ವಾಹನಗಳು ನದಿಗೆ ಬಿದ್ದು, ಕನಿಷ್ಠ ಒಂಬತ್ತು ಜನರು ಮೃತಪಟ್ಟಿದ್ದಾರೆ. ಐವರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯಾವುದೇ ಮುನ್ಸೂಚನೆ ಸಿಗದೆ ಸೇತುವೆ ಏಕಾಏಕಿ ಕುಸಿದು ಬಿದ್ದಿದ್ದು, ಎರಡು ಟ್ರಕ್‌ಗಳು, ಒಂದು ಪಿಕಪ್ ವ್ಯಾನ್ ಮತ್ತು ಇನ್ನೊಂದು ವಾಹನ ನದಿಗೆ ಬಿದ್ದಿವೆ. ಕೆಲವೇ ನಿಮಿಷಗಳಲ್ಲಿ, ಗ್ರಾಮಸ್ಥರು ಸುದ್ದಿ ಮುಟ್ಟಿಸಿ ಪೊಲೀಸರು ಮತ್ತು ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ ಐವರನ್ನು ರಕ್ಷಿಸಿ ಮೇಲೆತ್ತಿದರು.

ಮಧ್ಯ ಗುಜರಾತ್ ಮತ್ತು ಸೌರಾಷ್ಟ್ರ ಭಾಗಗಳನ್ನು ಸಂಪರ್ಕಿಸುವ ನದಿಯಲ್ಲಿ ಗಂಭೀರಾ ಸೇತುವೆಯ ಸ್ಲ್ಯಾಬ್ ಕುಸಿದು ಐದಾರು ವಾಹನಗಳು ಮಹಿಸಾಗರ್ ನದಿಗೆ ಬಿದ್ದವು ಎಂದು ಗುಜರಾತ್ ಆರೋಗ್ಯ ಸಚಿವ ರುಷಿಕೇಶ್ ಪಟೇಲ್ ತಿಳಿಸಿದ್ದಾರೆ. ಸೇತುವೆಯನ್ನು 1985 ರಲ್ಲಿ ನಿರ್ಮಿಸಲಾಗಿತ್ತು. ಅದರ ನಿರ್ವಹಣೆಯನ್ನು ಅಗತ್ಯವಿದ್ದಾಗ ನಿಯತಕಾಲಿಕವಾಗಿ ಮಾಡಲಾಗುತ್ತಿತ್ತು ಎನ್ನುತ್ತಾರೆ.

ಆದರೆ ಸ್ಥಳೀಯರು ಹೇಳುವುದೇ ಬೇರೆ. ಗಂಭೀರಾ ಸೇತುವೆ ಬಹಳ ಹಿಂದಿನಿಂದಲೂ ಅಪಾಯಕಾರಿ ಶಿಥಿಲಾವಸ್ಥೆಯಲ್ಲಿತ್ತು. ಸ್ಥಳೀಯರು ಅದರ ಶಿಥಿಲಾವಸ್ಥೆಯ ಬಗ್ಗೆ ಪದೇ ಪದೇ ಎಚ್ಚರಿಕೆ ನೀಡಿ ತುರ್ತು ದುರಸ್ತಿ ಅಥವಾ ಹೊಸ ಸೇತುವೆ ನಿರ್ಮಾಣಕ್ಕೆ ಮನವಿ ಮಾಡುತ್ತಿದ್ದರು, ಆದರೆ ಅವರ ಎಚ್ಚರಿಕೆಗಳನ್ನು ನಿರ್ಲಕ್ಷಿಸಲಾಗಿತ್ತು.

ಇಂದು ಸೇತುವೆ ಕುಸಿದಿದ್ದರಿಂದ ಆನಂದ್, ವಡೋದರಾ, ಭರೂಚ್ ಮತ್ತು ಅಂಕಲೇಶ್ವರವನ್ನು ಸೌರಾಷ್ಟ್ರಕ್ಕೆ ಸಂಪರ್ಕಿಸುವ ಪ್ರಮುಖ ರಸ್ತೆಗಳು ಕಡಿದುಹಾಕಿದೆ, ಇದು ಪ್ರಾದೇಶಿಕ ಸಾರಿಗೆ ಮತ್ತು ವಾಣಿಜ್ಯ ಸಾರಿಗೆ ಸಂಚಾರವನ್ನು ನಿಷ್ಕ್ರಿಯಗೊಳಿಸಿದೆ.

ಘಟನೆಯ ಹಿಂದಿನ ನಿಖರವಾದ ಕಾರಣವನ್ನು ತನಿಖೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿದ್ದಾರೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ತಾಂತ್ರಿಕ ತಜ್ಞರನ್ನು ಸ್ಥಳಕ್ಕೆ ತಲುಪಿ ಕುಸಿತದ ಕಾರಣದ ಬಗ್ಗೆ ತನಿಖೆ ನಡೆಸಲು ನಿರ್ದೇಶಿಸಿದ್ದಾರೆ ಎಂದು ಅವರು ಹೇಳಿದರು.

ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಂಡವು ರಕ್ಷಣಾ ಸಾಧನಗಳೊಂದಿಗೆ ಘಟನಾ ಸ್ಥಳಕ್ಕೆ ತೆರಳಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಿಹಾರ ವಿಧಾನಸಭಾ ಚುನಾವಣೆ 2025: Exit Poll Results ಬಹಿರಂಗ; ಯಾರಿಗೆ ಎಷ್ಟು ಸ್ಥಾನ?- ಇಲ್ಲಿದೆ ಮಾಹಿತಿ

Delhi Blast: ಆಪರೇಷನ್ ಸಿಂದೂರ್ ಗೆ ಸೇಡು... 20 ಟೈಮರ್, 3000 ಕೆಜಿ ಸ್ಫೋಟಕ.. ಉಗ್ರರ ಯೋಜನೆ ಕಾರ್ಯಗತವಾಗಿದ್ದರೇ ಇತಿಹಾಸದ ಅತೀ ದೊಡ್ಡ 'ಭಯೋತ್ಪಾದಕ ದಾಳಿ'!

Delhi Red Fort blast: ಸ್ಪೂಟಕ್ಕೂ ಮುನ್ನ 3 ಗಂಟೆ ಕಾರು ಪಾರ್ಕಿಂಗ್! ನಿರ್ಣಾಯಕ 'ಮೂರು ಆಯಾಮ'ಗಳಲ್ಲಿ ಪೊಲೀಸರ ತನಿಖೆ

Delhi Blast: ಲಖನೌನಲ್ಲಿ ಡಾ. ಶಾಹೀನ್ ಶಾಹಿದ್ ಮನೆಯಲ್ಲಿ ಪೊಲೀಸರಿಂದ ತೀವ್ರ ಶೋಧ

Delhi Blast: ಟೋಲ್ ಪ್ಲಾಜಾದಲ್ಲಿ 'ಸೂಸೈಡ್ ಬಾಂಬರ್'; ಹೊಸ CCTV ದೃಶ್ಯಾವಳಿ ಪತ್ತೆ..! Video

SCROLL FOR NEXT