ಗಣೇಶ ಮೂರ್ತಿ ಪ್ರತಿಷ್ಠಾಪನೆ(ಸಂಗ್ರಹ ಚಿತ್ರ) 
ದೇಶ

ಗಣೇಶೋತ್ಸವ 'ಮಹಾರಾಷ್ಟ್ರ ರಾಜ್ಯದ ಹಬ್ಬ' ಎಂದು ಸರ್ಕಾರ ಘೋಷಣೆ

ಇಂದು ವಿಧಾನಸಭೆಯಲ್ಲಿ ರಾಜ್ಯದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಆಶಿಶ್ ಶೇಲಾರ್ ಅವರು ಈ ಘೋಷಣೆ ಮಾಡಿದ್ದಾರೆ.

ಮುಂಬೈ: ಮಹಾರಾಷ್ಟ್ರ ಸರ್ಕಾರ ಶತಮಾನದಷ್ಟು ಹಳೆಯದಾದ ಸಾರ್ವಜನಿಕ ಗಣೇಶೋತ್ಸವವನ್ನು "ಮಹಾರಾಷ್ಟ್ರ ರಾಜ್ಯದ ಉತ್ಸವ" ಎಂದು ಅಧಿಕೃತವಾಗಿ ಗುರುವಾರ ಘೋಷಿಸಿದೆ.

ಇಂದು ವಿಧಾನಸಭೆಯಲ್ಲಿ ರಾಜ್ಯದ ಸಾಂಸ್ಕೃತಿಕ ವ್ಯವಹಾರಗಳ ಸಚಿವ ಆಶಿಶ್ ಶೇಲಾರ್ ಅವರು ಈ ಘೋಷಣೆ ಮಾಡಿದ್ದಾರೆ ಎಂದು ಸಂಸ್ಕೃತಿ ಸಚಿವರ ಕಚೇರಿಯ ಪತ್ರಿಕಾ ಪ್ರಕಟಣೆ ತಿಳಿಸಿದೆ.

ವಿಧಾನಸಭೆಯಲ್ಲಿ ಮಾತನಾಡಿದ ಸಚಿವ ಆಶಿಶ್ ಶೇಲಾರ್, "ಸಾರ್ವಜನಿಕ ಗಣೇಶೋತ್ಸವವನ್ನು ಮಹಾರಾಷ್ಟ್ರದಲ್ಲಿ 1893 ರಲ್ಲಿ ಲೋಕಮಾನ್ಯ ತಿಲಕರು ಪ್ರಾರಂಭಿಸಿದರು. ಈ ಹಬ್ಬವು ಸಾಮಾಜಿಕ, ರಾಷ್ಟ್ರೀಯ, ಸ್ವಾತಂತ್ರ್ಯ, ಸ್ವಾಭಿಮಾನ ಮತ್ತು ಭಾಷಾ ಹೆಮ್ಮೆಯಲ್ಲಿ ಆಳವಾಗಿ ಬೇರೂರಿದೆ. ಇದು ಇಂದಿಗೂ ಅದೇ ಉತ್ಸಾಹದಲ್ಲಿ ಮುಂದುವರೆದಿದೆ. ಇದು ಮಹಾರಾಷ್ಟ್ರಕ್ಕೆ ಹೆಮ್ಮೆ ಮತ್ತು ಗೌರವದ ಸಂಕೇತವಾಗಿದೆ" ಎಂದರು.

ಈ ಹಬ್ಬದ ಸಾಂಸ್ಕೃತಿಕ ಮಹತ್ವ ಮತ್ತು ಪರಂಪರೆಯನ್ನು ಸಂರಕ್ಷಿಸಲು ಮತ್ತು ಉತ್ತೇಜಿಸಲು ಮಹಾರಾಷ್ಟ್ರ ಸರ್ಕಾರ ಬದ್ಧವಾಗಿದೆ ಎಂದು ಅವರು ಒತ್ತಿ ಹೇಳಿದರು.

ಕೆಲವು ವ್ಯಕ್ತಿಗಳು, ವಿವಿಧ ಕಾರಣಗಳಿಗಾಗಿ, ವಿವಿಧ ನ್ಯಾಯಾಲಯಗಳಲ್ಲಿ ಗಣೇಶೋತ್ಸವದ ಸಾರ್ವಜನಿಕ ಆಚರಣೆಯನ್ನು ಪ್ರಶ್ನಿಸಲು ಪ್ರಯತ್ನಿಸಿದರು. ಆದರೆ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ದಾದಾ ಪವಾರ್ ನೇತೃತ್ವದ ಮಹಾಯುತಿ ಸರ್ಕಾರವು ಅಂತಹ ಎಲ್ಲಾ ನಿರ್ಬಂಧಗಳು ಮತ್ತು ಕಾನೂನು ಅಡೆತಡೆಗಳನ್ನು ನಿವಾರಿಸಲು ತ್ವರಿತವಾಗಿ ಕಾರ್ಯನಿರ್ವಹಿಸಿದೆ ಎಂದರು.

ಗಣೇಶೋತ್ಸವಕ್ಕೆ ಅಗತ್ಯ ಮೂಲಸೌಕರ್ಯ ಮತ್ತು ಪೊಲೀಸ್ ಭದ್ರತೆ ಒದಗಿಸಲಾಗುವುದು. ಅಲ್ಲದೆ ಪುಣೆ, ಮುಂಬೈ ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಆರ್ಥಿಕ ನೆರವನ್ನೂ ಸರ್ಕಾರ ನೀಡಲಿದೆ ಎಂದು ಸಚಿವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia War: Strait of Hormuz ಕುರಿತು ಮೋದಿ-ಟ್ರಂಪ್ ಮಹತ್ವದ ಚರ್ಚೆ; ಇಂಧನ ಪೂರೈಕೆ ಸಮಸ್ಯೆಗೆ ಸಿಗುತ್ತಾ ಪರಿಹಾರ?

IPL ಇತಿಹಾಸದಲ್ಲೇ ಅತಿದೊಡ್ಡ ಮಾರಾಟ: 16,000 ಕೋಟಿ ರೂಗೆ RCB ಸೇಲ್, ಹೊಸ ಮಾಲೀಕರು ಯಾರು ಗೊತ್ತಾ?

IPL 2026: RCB ಅಭ್ಯಾಸದ ವೇಳೆ ಜರ್ಸಿಯಲ್ಲಿ 11 ನಂಬರ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 11 ಸೀಟುಗಳು ಸದಾ ಖಾಲಿ!

West Asia energy crisis: ಇಂಧನ ಬಿಕ್ಕಟ್ಟಿನಿಂದ ಮತ್ತೊಂದು ಕೋವಿಡ್ ಮಾದರಿಯ ಲಾಕ್ ಡೌನ್?

ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕೇಂದ್ರ ಸರ್ಕಾರ

SCROLL FOR NEXT