ಸ್ಕ್ವಾಡ್ರನ್ ಲೀಡರ್ ಲೋಕೇಂದ್ರ ಸಿಂಗ್ ಸಿಂಧು 
ದೇಶ

ಜಾಗ್ವಾರ್ ಯುದ್ಧ ವಿಮಾನ ಅಪಘಾತ: ತಿಂಗಳ ಹಿಂದಷ್ಟೇ ಜನಿಸಿದ್ದ ಗಂಡು ಮಗುವಿಗೆ ತಂದೆಯಾಗಿದ್ದ IAF ಪೈಲಟ್ ಸಾವು!

ಹರಿಯಾಣದ ರೋಹ್ಟಕ್‌ನ ಖೇರಿ ಸಾಧ್ ಗ್ರಾಮದ ಸಿಂಧು ಅವರು ಮಂಗಳವಾರ ಸಂಜೆ ವೀಡಿಯೊ ಕರೆ ಮಾಡಿ ತಮ್ಮ ಕುಟುಂಬದೊಂದಿಗೆ ಮಾತನಾಡಿದ್ದರು.

ಚಂಡೀಗಢ: ರಾಜಸ್ಥಾನದ ಚುರೂ ಬಳಿ ಬುಧವಾರ ಸಂಭವಿಸಿದ ಭಾರತೀಯ ವಾಯುಪಡೆಯ (IAF) ಜಾಗ್ವಾರ್ ತರಬೇತಿ ವಿಮಾನ ಅಪಫಾತದಲ್ಲಿ ಮೃತಪಟ್ಟ ಇಬ್ಬರು ಪೈಲಟ್ ಗಳ ಪೈಕಿ ಒಬ್ಬರಾದ ಸ್ಕ್ವಾಡ್ರನ್ ಲೀಡರ್ ಲೋಕೇಂದ್ರ ಸಿಂಗ್ ಸಿಂಧು ಅವರು ಒಂದು ತಿಂಗಳ ಹಿಂದಷ್ಟೇ ಜನಿಸಿದ ಮುದ್ದು ಮಗುವಿನ ತಂದೆಯಾಗಿದ್ದರು. ದುರಂತಕ್ಕೂ ಮುನ್ನಾ ಹರಿಯಾಣದಲ್ಲಿ ಕುಟುಂಬ ಆ ಸಂಭ್ರಮಾಚರಣೆಯಲ್ಲಿತ್ತು.

ಹರಿಯಾಣದ ರೋಹ್ಟಕ್‌ನ ಖೇರಿ ಸಾಧ್ ಗ್ರಾಮದ ಸಿಂಧು ಅವರು ಮಂಗಳವಾರ ಸಂಜೆ ವೀಡಿಯೊ ಕರೆ ಮಾಡಿ ತಮ್ಮ ಕುಟುಂಬದೊಂದಿಗೆ ಮಾತನಾಡಿದ್ದರು. ದುರಂತಕ್ಕೂ ಕೆಲ ಗಂಟೆಗಳ ಮುನ್ನಾ ತಮ್ಮ ಕುಟುಂಬದೊಂದಿಗೆ ಸಂದೇಶ ವಿನಿಮಯ ಮಾಡಿಕೊಂಡಿದ್ದರು. ಸಾಮಾನ್ಯ ಯೋಗಕ್ಷೇಮದ ಬಗ್ಗೆ ವಿಚಾರಿಸಿದ್ದರು ಎನ್ನಲಾಗಿದೆ.

ಗುರುವಾರ ರೋಹ್ಟಕ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಂಧು ಅವರ ಕುಟುಂಬದ ಕೆಲ ಸದಸ್ಯರು, ತಿಂಗಳ ಹಿಂದೆ ಇದೇ ದಿನದಂದು ಜನಿಸಿದ ಸಿಧು ಮಗನ ತಿಂಗಳ ಹುಟ್ಟುಹಬ್ಬವನ್ನು ಕುಟುಂಬದವರು ಆಚರಿಸುತ್ತಿದ್ದರು. ಆದರೆ ದುರದೃಷ್ಟ ಏನಾಗಿದೆ ಎಂದು ಯಾರಿಗೂ ತಿಳಿದಿಲ್ಲ ಎಂದರು.

ಜಾಗ್ವಾರ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಮತ್ತೋರ್ವ ಪೈಲಟ್ ರಿಷಿರಾಜ್ ಸಿಂಗ್ (23). ಘಟನೆಯ ನಂತರ ಅಪಘಾತದ ಕಾರಣ ಪತ್ತೆಗೆ ತನಿಖಾ ನ್ಯಾಯಾಲಯವನ್ನು ರಚಿಸಲಾಗಿದೆ ಎಂದು ಐಎಎಫ್ ಹೇಳಿದೆ.

ಸಿಂಧು ತನ್ನ ಪತ್ನಿ, ಒಂದು ತಿಂಗಳ ಮಗ, ಸಹೋದರ, ಸಹೋದರಿ, ಪೋಷಕರು ಮತ್ತು ಅಜ್ಜಿಯರನ್ನು ಅಗಲಿದ್ದಾರೆ ಎಂದು ಅವರ ಅಜ್ಜ ಬಲ್ವಾನ್ ಸಿಂಗ್ ಹೇಳಿದ್ದಾರೆ.

ಅವರಿಗೆ ಒಂದು ಮಗುವಿದೆ, ಇಂದಿಗೆ ಆ ಮಗುವಿಗೆ ಒಂದು ತಿಂಗಳು ತುಂಬಿದೆ. ಮಂಗಳವಾರ ಅವರೊಂದಿಗೆ ವಿಡಿಯೋ ಕಾಲ್ ನಲ್ಲಿ ಅವರೊಂದಿಗೆ ಮಾತನಾಡಿದ್ದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT