ಸಂಜಯ್ ಶಿರ್ಸಾತ್‌ ANI Photo 
ದೇಶ

ಶಿಂಧೆ ಶಿವಸೇನಾ ಸಚಿವ ಸಂಜಯ್ ಶಿರ್ಸಾತ್‌ಗೆ IT ನೋಟಿಸ್

ಶಿಂಧೆ ಅವರ ಪುತ್ರ ಕಲ್ಯಾಣ್ ಸಂಸದ ಶ್ರೀಕಾಂತ್ ಶಿಂಧೆ ಅವರಿಗೂ ನೋಟಿಸ್ ಬಂದಿದೆ ಎಂದು ಹೇಳಿದರು.

ಮುಂಬೈ: 2019 ಮತ್ತು 2024 ರ ವಿಧಾನಸಭಾ ಚುನಾವಣೆಗಳ ನಡುವೆ ತಮ್ಮ ಆಸ್ತಿಯಲ್ಲಿನ ಹೆಚ್ಚಳದ ಬಗ್ಗೆ ವಿವರಣೆ ಕೋರಿ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ ಎಂದು ಮಹಾರಾಷ್ಟ್ರ ಸಾಮಾಜಿಕ ನ್ಯಾಯ ಸಚಿವ ಸಂಜಯ್ ಶಿರ್ಸಾತ್ ಗುರುವಾರ ಹೇಳಿದ್ದಾರೆ.

ಇಂದು ಶಾಸಕಾಂಗ ಸಂಕೀರ್ಣದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ ಔರಂಗಾಬಾದ್(ಪಶ್ಚಿಮ) ಶಾಸಕ ಶಿರ್ಸಾತ್‌, ಶಿಂಧೆ ಅವರ ಪುತ್ರ ಕಲ್ಯಾಣ್ ಸಂಸದ ಶ್ರೀಕಾಂತ್ ಶಿಂಧೆ ಅವರಿಗೂ ನೋಟಿಸ್ ಬಂದಿದೆ ಎಂದು ಹೇಳಿದರು.

ಆದರೆ ನಂತರ ತಮ್ಮನ್ನು ತಾವು ಸರಿಪಡಿಸಿಕೊಂಡ ಶಿರ್ಸಾತ್‌ ಅವರು, ಶ್ರೀಕಾಂತ್ ಶಿಂಧೆ ಅವರಿಗೆ ಯಾವುದೇ ಐಟಿ ನೋಟಿಸ್ ಬಂದಿರುವ ಬಗ್ಗೆ ತಮಗೆ ಗೊತ್ತಿಲ್ಲ ಎಂದು ಉಲ್ಟಾ ಹೊಡೆದರು.

"ಕೆಲವರು ನನ್ನ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದರು. ಅದರ ಆಧಾರದ ಮೇಲೆ ನನಗೆ ನೋಟಿಸ್ ನೀಡಲಾಗಿದೆ. ನಾನು ಬುಧವಾರ ನೋಟಿಸ್ ಗೆ ಪ್ರತಿಕ್ರಿಯಿಸಬೇಕಿತ್ತು, ಆದರೆ ಹೆಚ್ಚಿನ ಸಮಯ ಕೇಳಿದ್ದೇನೆ ಎಂದರು.

ನಾನು ಯಾವುದೇ ತಪ್ಪು ಮಾಡಿಲ್ಲ. ನೋಟಿಸ್ ಸರಿಯಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ವರದಿಗಾರರಿಗೆ ಶಿರ್ಸಾತ್ ತಿಳಿಸಿದರು.

ಎರಡು ವಿಧಾನಸಭೆ ಚುನಾವಣೆಗಳ ನಡುವೆ ತಮ್ಮ ಘೋಷಿತ ಆಸ್ತಿಯಲ್ಲಿನ ಏರಿಕೆಯ ಬಗ್ಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೌರಿಂಗ್ ಆಸ್ಪತ್ರೆ ದುರಂತ: ಕಾರ್ಯನಿರ್ವಾಹಕ ಇಂಜಿನಿಯರ್ ಅಮಾನತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸಾರ್ವಜನಿಕವಾಗಿ ನನ್ನನ್ನು ಬಂಧಿಸಿ ಅವಮಾನಿಸುವ ಅಗತ್ಯವಿಲ್ಲ: ಪವನ್ ಖೇರಾ, ತೀರ್ಪು ಕಾಯ್ದಿರಿಸಿದ ಸುಪ್ರೀಂ

ಪ. ಬಂಗಾಳದ 77 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ದೂರು: ಚುನಾವಣಾ ಆಯೋಗದಿಂದ ಪರಿಶೀಲನೆ!

ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ: ಮಲ್ಲಿಕಾರ್ಜುನ ಖರ್ಗೆ; Video

ಎಲ್ಲಾ ಸರ್ಕಾರಿ ಆಸ್ಪತ್ರೆ ಕಟ್ಟಡಗಳ ಕ್ಷಮತೆ ಪರಿಶೀಲನೆಗೆ ನಿರ್ದೇಶನ; ಭಾರೀ ಮಳೆ ನಿರೀಕ್ಷೆ ಇರಲಿಲ್ಲ, ಇದ್ದಕ್ಕಿದ್ದಂತೆ ಜೋರಾಗಿ ಬಂತು: ಪರಮೇಶ್ವರ್

SCROLL FOR NEXT