ಸಂಜಯ್ ಶಿರ್ಸಾತ್‌ ANI Photo 
ದೇಶ

ಶಿಂಧೆ ಶಿವಸೇನಾ ಸಚಿವ ಸಂಜಯ್ ಶಿರ್ಸಾತ್‌ಗೆ IT ನೋಟಿಸ್

ಶಿಂಧೆ ಅವರ ಪುತ್ರ ಕಲ್ಯಾಣ್ ಸಂಸದ ಶ್ರೀಕಾಂತ್ ಶಿಂಧೆ ಅವರಿಗೂ ನೋಟಿಸ್ ಬಂದಿದೆ ಎಂದು ಹೇಳಿದರು.

ಮುಂಬೈ: 2019 ಮತ್ತು 2024 ರ ವಿಧಾನಸಭಾ ಚುನಾವಣೆಗಳ ನಡುವೆ ತಮ್ಮ ಆಸ್ತಿಯಲ್ಲಿನ ಹೆಚ್ಚಳದ ಬಗ್ಗೆ ವಿವರಣೆ ಕೋರಿ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ ಎಂದು ಮಹಾರಾಷ್ಟ್ರ ಸಾಮಾಜಿಕ ನ್ಯಾಯ ಸಚಿವ ಸಂಜಯ್ ಶಿರ್ಸಾತ್ ಗುರುವಾರ ಹೇಳಿದ್ದಾರೆ.

ಇಂದು ಶಾಸಕಾಂಗ ಸಂಕೀರ್ಣದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ ಔರಂಗಾಬಾದ್(ಪಶ್ಚಿಮ) ಶಾಸಕ ಶಿರ್ಸಾತ್‌, ಶಿಂಧೆ ಅವರ ಪುತ್ರ ಕಲ್ಯಾಣ್ ಸಂಸದ ಶ್ರೀಕಾಂತ್ ಶಿಂಧೆ ಅವರಿಗೂ ನೋಟಿಸ್ ಬಂದಿದೆ ಎಂದು ಹೇಳಿದರು.

ಆದರೆ ನಂತರ ತಮ್ಮನ್ನು ತಾವು ಸರಿಪಡಿಸಿಕೊಂಡ ಶಿರ್ಸಾತ್‌ ಅವರು, ಶ್ರೀಕಾಂತ್ ಶಿಂಧೆ ಅವರಿಗೆ ಯಾವುದೇ ಐಟಿ ನೋಟಿಸ್ ಬಂದಿರುವ ಬಗ್ಗೆ ತಮಗೆ ಗೊತ್ತಿಲ್ಲ ಎಂದು ಉಲ್ಟಾ ಹೊಡೆದರು.

"ಕೆಲವರು ನನ್ನ ವಿರುದ್ಧ ಆದಾಯ ತೆರಿಗೆ ಇಲಾಖೆಗೆ ದೂರು ನೀಡಿದ್ದರು. ಅದರ ಆಧಾರದ ಮೇಲೆ ನನಗೆ ನೋಟಿಸ್ ನೀಡಲಾಗಿದೆ. ನಾನು ಬುಧವಾರ ನೋಟಿಸ್ ಗೆ ಪ್ರತಿಕ್ರಿಯಿಸಬೇಕಿತ್ತು, ಆದರೆ ಹೆಚ್ಚಿನ ಸಮಯ ಕೇಳಿದ್ದೇನೆ ಎಂದರು.

ನಾನು ಯಾವುದೇ ತಪ್ಪು ಮಾಡಿಲ್ಲ. ನೋಟಿಸ್ ಸರಿಯಾದ ಪ್ರತಿಕ್ರಿಯೆ ನೀಡುತ್ತೇನೆ ಎಂದು ವರದಿಗಾರರಿಗೆ ಶಿರ್ಸಾತ್ ತಿಳಿಸಿದರು.

ಎರಡು ವಿಧಾನಸಭೆ ಚುನಾವಣೆಗಳ ನಡುವೆ ತಮ್ಮ ಘೋಷಿತ ಆಸ್ತಿಯಲ್ಲಿನ ಏರಿಕೆಯ ಬಗ್ಗೆ ನೋಟಿಸ್ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬೆಂಗಳೂರಿಗರಿಗೆ ಗುಡ್​​ನ್ಯೂಸ್: ನವೆಂಬರ್ 1ರಿಂದ A ಖಾತಾ ಅಭಿಯಾನ; ಆನ್‌ಲೈನ್ ವ್ಯವಸ್ಥೆಗೆ DCM ಚಾಲನೆ

"ಎಲ್ಲದಕ್ಕೂ ಒಂದು ಮಿತಿ ಇದೆ": ಕಿರಣ್ ಮಜುಂದಾರ್ ಷಾ ವಿರುದ್ಧ DCM ಡಿ.ಕೆ ಶಿವಕುಮಾರ್ ಕಿಡಿ

ಔರಂಗಜೇಬ್ ಆಡಳಿತಕ್ಕೆ ಹೋಲಿಕೆ: ಸಿಎಂ ಮಮತಾ ಬ್ಯಾನರ್ಜಿ ಕ್ಷಮೆ ಕೋರಿದ ದುರ್ಗಾಪುರ ಅತ್ಯಾಚಾರ ಸಂತ್ರಸ್ತೆ ತಂದೆ!

ಡೊನಾಲ್ಡ್ ಟ್ರಂಪ್ ಎಚ್ಚರಿಕೆಗೂ ಬಗ್ಗದ ಹಮಾಸ್, 8 ಗಾಜಾ ನಿವಾಸಿಗಳ 'ಗುಂಡಿಟ್ಟು ಹತ್ಯೆ', Video

ಆಂಧ್ರ vs ಕರ್ನಾಟಕ: 'ಅವರು ಅಸಮರ್ಥರಾದರೆ ನಾವೇನು ಮಾಡಲು ಸಾಧ್ಯ..': ಬೆಂಗಳೂರು ರಸ್ತೆಗುಂಡಿ, ಉದ್ಯಮಗಳ ಸ್ಥಳಾಂತರದ ಬಗ್ಗೆ ಸಚಿವ ನಾರಾ ಲೋಕೇಶ್ ಹೊಸ ಬಾಂಬ್!

SCROLL FOR NEXT