ಸಂಗ್ರಹ ಚಿತ್ರ 
ದೇಶ

ದೆಹಲಿ-NCRನಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲು; ಜನರಲ್ಲಿ ಆತಂಕ

ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಹರಿಯಾಣದ ಜಜ್ಜರ್‌ನಿಂದ ಈಶಾನ್ಯಕ್ಕೆ 4 ಕಿ.ಮೀ ದೂರದಲ್ಲಿದ್ದು, 14 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.

ದೆಹಲಿ, ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಗಳಲ್ಲಿ ಭೂಕಂಪದ ಅನುಭವವಾಗಿದೆ. ಹರಿಯಾಣದ ರೋಹ್ಟಕ್‌ನಲ್ಲೂ ಪರಿಣಾಮ ಎದುರಿಸಲಾಗಿದ್ದು, ರಸ್ತೆಗಳಲ್ಲಿ ವಾಹನಗಳು ಅಲುಗಾಡಿದ ಅನುಭವವಾಗಿದೆ.

ಹರಿಯಾಣದ ಜಿಂದ್ ಮತ್ತು ಬಹದ್ದೂರ್‌ಗಢ ಹೊರತುಪಡಿಸಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪ್ರದೇಶಗಳು ಸಹ 10 ಸೆಕೆಂಡುಗಳ ಕಾಲ ಕಂಪನವನ್ನು ಅನುಭವಿಸಿದವು.

ಕಳೆದ ಆರು ತಿಂಗಳಲ್ಲಿ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಇದು ಮೂರನೇ ಭೂಕಂಪವಾಗಿದೆ. ಇದಕ್ಕೂ ಮೊದಲು, ಏಪ್ರಿಲ್ 19 ಮತ್ತು ಫೆಬ್ರವರಿ 17 ರಂದು ಸಹ ಭೂಕಂಪಗಳು ಸಂಭವಿಸಿದ್ದವು.

ಭೂಕಂಪನದ ಜೊತೆಗೆ ದೆಹಲಿ ಮತ್ತು ಎನ್'ಸಿಆರ್ ನಲ್ಲಿ ಬುಧವಾರ ಸಂಜೆಯಿಂದ ಮಳೆಯಾಗುತ್ತಿದೆ. ಈ ಮಳೆ ಈ ಮಾನ್ಸೂನ್‌ನಲ್ಲಿ ಅತ್ಯಂತ ಹೆಚ್ಚಿನ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಈ ರಣಮಳೆ ಸುರಿದಿದೆ. ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ತೀವ್ರ ವಿರೋಧದ ನಡುವೆಯೂ ಬಾನು ಮುಷ್ತಾಕ್ ಗೆ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ಅಧಿಕೃತ ಆಹ್ವಾನ! Video

ಪಾಕ್ ಹುಟ್ಟಡಗಿಸಿದ್ದ 'Game-Changer': ಭಾರತದ ಬತ್ತಳಿಕೆ ಸೇರಲಿವೆ ಮತ್ತಷ್ಟು S-400 ಏರ್ ಡಿಫೆನ್ಸ್ ಸಿಸ್ಟಮ್ಸ್!

Indian Stock Market: GST ಕೌನ್ಸಿಲ್ ಸಭೆ ಎಫೆಕ್ಟ್, Sensex 410 ಅಂಕ ಏರಿಕೆ, ರೂಪಾಯಿ ಮೌಲ್ಯವೂ ಏರಿಕೆ!

Dharmasthala: ಸೌಜನ್ಯಾ ಪ್ರಕರಣದಲ್ಲಿ SIT ಮುಂದೆ ಹಾಜರಾದ Uday jain ಹೇಳಿದ್ದೇನು?

ವಿದೇಶಿಗರಿಂದ ಧರ್ಮೋಪದೇಶ ನಿಷೇಧ: ಮಿಲಾದ್-ಉನ್-ನಬಿ ಆಯೋಜಕರಿಗೆ ಪರಮೇಶ್ವರ ಸ್ಪಷ್ಟನೆ

SCROLL FOR NEXT