ಸಂಗ್ರಹ ಚಿತ್ರ 
ದೇಶ

ದೆಹಲಿ-NCRನಲ್ಲಿ ಪ್ರಬಲ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲು; ಜನರಲ್ಲಿ ಆತಂಕ

ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಗುರುವಾರ ಪ್ರಬಲ ಭೂಕಂಪನ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.4 ತೀವ್ರತೆ ದಾಖಲಾಗಿದೆ.

ಆರಂಭಿಕ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು ಹರಿಯಾಣದ ಜಜ್ಜರ್‌ನಿಂದ ಈಶಾನ್ಯಕ್ಕೆ 4 ಕಿ.ಮೀ ದೂರದಲ್ಲಿದ್ದು, 14 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಳಗ್ಗೆ 9 ಗಂಟೆ ಸುಮಾರಿಗೆ ಭೂಮಿ ಕಂಪಿಸಿದ ಅನುಭವವಾಗಿದೆ. ಈ ವೇಳೆ ಜನರು ಭಯಭೀತರಾಗಿ ಮನೆ-ಕಚೇರಿಗಳಿಂದ ಹೊರಗೆ ಓಡಿಬಂದಿದ್ದಾರೆ.

ದೆಹಲಿ, ನೋಯ್ಡಾ, ಗುರುಗ್ರಾಮ್, ಗಾಜಿಯಾಬಾದ್ ಗಳಲ್ಲಿ ಭೂಕಂಪದ ಅನುಭವವಾಗಿದೆ. ಹರಿಯಾಣದ ರೋಹ್ಟಕ್‌ನಲ್ಲೂ ಪರಿಣಾಮ ಎದುರಿಸಲಾಗಿದ್ದು, ರಸ್ತೆಗಳಲ್ಲಿ ವಾಹನಗಳು ಅಲುಗಾಡಿದ ಅನುಭವವಾಗಿದೆ.

ಹರಿಯಾಣದ ಜಿಂದ್ ಮತ್ತು ಬಹದ್ದೂರ್‌ಗಢ ಹೊರತುಪಡಿಸಿ, ಪಶ್ಚಿಮ ಉತ್ತರ ಪ್ರದೇಶ ಮತ್ತು ರಾಜಸ್ಥಾನದ ಪ್ರದೇಶಗಳು ಸಹ 10 ಸೆಕೆಂಡುಗಳ ಕಾಲ ಕಂಪನವನ್ನು ಅನುಭವಿಸಿದವು.

ಕಳೆದ ಆರು ತಿಂಗಳಲ್ಲಿ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಇದು ಮೂರನೇ ಭೂಕಂಪವಾಗಿದೆ. ಇದಕ್ಕೂ ಮೊದಲು, ಏಪ್ರಿಲ್ 19 ಮತ್ತು ಫೆಬ್ರವರಿ 17 ರಂದು ಸಹ ಭೂಕಂಪಗಳು ಸಂಭವಿಸಿದ್ದವು.

ಭೂಕಂಪನದ ಜೊತೆಗೆ ದೆಹಲಿ ಮತ್ತು ಎನ್'ಸಿಆರ್ ನಲ್ಲಿ ಬುಧವಾರ ಸಂಜೆಯಿಂದ ಮಳೆಯಾಗುತ್ತಿದೆ. ಈ ಮಳೆ ಈ ಮಾನ್ಸೂನ್‌ನಲ್ಲಿ ಅತ್ಯಂತ ಹೆಚ್ಚಿನ ಮಳೆಯಾಗಿದೆ. ಸುಮಾರು ಒಂದು ಗಂಟೆಗಳ ಕಾಲ ಈ ರಣಮಳೆ ಸುರಿದಿದೆ. ಮಳೆಯ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Amritsar: ಉಗ್ರರ ದಾಳಿ ಸಂಚು ವಿಫಲ, ISI ಜೊತೆಗೆ ನಂಟು ಹೊಂದಿದ್ದ ಇಬ್ಬರ ಬಂಧನ, ರಾಕೆಟ್ ಚಾಲಿತ ಗ್ರೇನೆಡ್ ವಶಕ್ಕೆ!

ಮಾನ್ಯ ವೀಸಾ ಹೊಂದಿದ್ದರೂ ಹಿಂದಿ ವಿದ್ವಾಂಸೆ ಫ್ರಾನ್ಸೆಸ್ಕಾ ಓರ್ಸಿನಿಗೆ ಭಾರತ ಪ್ರವೇಶಕ್ಕೆ ನಿರಾಕರಣೆ!

ಸೊಸೆ ಜೊತೆ ತಂದೆ ಅಕ್ರಮ ಸಂಬಂಧ: ಮಗನ ಕೊಲೆ ಆರೋಪ; ತಂದೆ ಮಾಜಿ DGP ಮುಸ್ತಫಾ, ತಾಯಿ, ಪತ್ನಿ ವಿರುದ್ಧ FIR!

India 'Proxy war': ಪಾಕಿಸ್ತಾನದ ಆರೋಪಕ್ಕೆ ತಿರುಗೇಟು ನೀಡಿದ ಅಪ್ಘಾನಿಸ್ತಾನ! ಹೇಳಿದ್ದೇನು?Video

ಬೆಂಗಳೂರಿನ ಎಲ್ಲ ರಸ್ತೆ ಗುಂಡಿಗಳನ್ನು ಒಂದು ವಾರದೊಳಗೆ ಮುಚ್ಚಿ: ಅಧಿಕಾರಿಗಳಿಗೆ ಸಿಎಂ ಸೂಚನೆ

SCROLL FOR NEXT