ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್‌ಗಢ: 37.5 ಲಕ್ಷ ರೂ ಬಹುಮಾನ ಘೋಷಿಸಲ್ಪಟ್ಟ 22 ನಕ್ಸಲೀಯರ ಶರಣಾಗತಿ!

ಪೊಳ್ಳು ನಕ್ಸಲ್ ಸಿದ್ಧಾಂತ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ತಮಗೆ ನಿರಾಶೆಯಾಗಿದೆ ಎಂದು ಶರಣಾದ ನಕ್ಸಲೀಯರು ಪೊಲೀಸರಿಗೆ ತಿಳಿಸಿದ್ದಾರೆ.

ಛತ್ತೀಸ್‌ಗಢ: ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ 22 ನಕ್ಸಲೀಯರು ಪೊಲೀಸರಿಗೆ ಶರಣಾಗಿದ್ದಾರೆ. ಇವರಿಗೆ ರೂ. 37.5 ಲಕ್ಷ ಬಹಮಾನ ಘೋಷಿಸಲಾಗಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಾವೋವಾದಿಗಳ ಮಾದ್ ವಿಭಾಗದ ಕುತುಲ್, ನೆಲ್ನಾರ್ ಮತ್ತು ಇಂದ್ರಾವತಿ ಪ್ರದೇಶ ಸಮಿತಿಗಳಿಗೆ ಸೇರಿದ ನಕ್ಸಲೀಯರು ಹಿರಿಯ ಪೊಲೀಸ್, ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಮತ್ತು ಐಟಿಬಿಪಿ ಅಧಿಕಾರಿಗಳ ಮುಂದೆ ನಾರಾಯಣಪುರದಲ್ಲಿ ಶರಣಾದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಪೊಳ್ಳು ನಕ್ಸಲ್ ಸಿದ್ಧಾಂತ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ತಮಗೆ ನಿರಾಶೆಯಾಗಿದೆ ಎಂದು ಶರಣಾದ ನಕ್ಸಲೀಯರು ಪೊಲೀಸರಿಗೆ ತಿಳಿಸಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಬಿನ್ಸನ್ ಗುರಿಯಾ ತಿಳಿಸಿದ್ದಾರೆ.

ಕ್ಷೀಪ್ರಗತಿಯಲ್ಲಿ ರಸ್ತೆ ಕಾಮಗಾರಿ ಸೇರಿದಂತೆ ಮಾದ್ ಪ್ರದೇಶದಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾರ್ಯಗಳಿಂದ ಪ್ರೇರಿತರಾಗಿ ಸಹಜ ಜೀವನ ನಡೆಸಲು ಬಯಸಿದ್ದರು. ಈ ಎಲ್ಲಾ 22 ನಕ್ಸಲೀಯರಿಗೆ ಒಟ್ಟು ರೂ. 37.5 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಅವರು ವಿವರ ನೀಡಿದ್ದಾರೆ.

ನಕ್ಸಲೀಯರ ಶರಣಾಗತಿಯಲ್ಲಿ ಜಿಲ್ಲಾ ಪೊಲೀಸರು, ಮೀಸಲು ದಳ, ಐಟಿಬಿಪಿ ಮತ್ತು ಬಿಎಸ್ ಎಫ್ ಪ್ರಮುಖ ಪಾತ್ರ ವಹಿಸಿದೆ. ಇದರಿಂದ ನಕ್ಸಲ್ ಮುಕ್ತ ಸಂಕಲ್ಪ ಈಡೇರುವ ಕಾಲ ಹತ್ತಿರವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಶರಣಾದ ಎಲ್ಲಾ ನಕ್ಸಲೀಯರಿಗೂ ರೂ. 50,000 ಆರ್ಥಿಕ ನೆರವನ್ನು ಒದಗಿಸಲಾಗುವುದು. ಇದರೊಂದಿಗೆ ಈ ವರ್ಷ ಇಲ್ಲಿಯವರೆಗೂ 132 ನಕ್ಸಲೀಯರು ಶರಣಾಗಿದ್ದಾರೆ ಎಂದು ಗುರಿಯಾ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಮಾ ಸ್ಥಿತಿಯಲ್ಲಿ ಇರಾನ್‌ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ? ವದಂತಿ ಬೆನ್ನಲ್ಲೇ ದಿಢೀರ್ Video ಬಿಡುಗಡೆ ಮಾಡಿದ ಇರಾನ್; ಸತ್ಯ ಮುಚ್ಚಿಡುವ ಯತ್ನವೇ..?

ಇಡೀ ದೇಹಕ್ಕೆ ಹರಡಿದ cancer, Joe Biden ಆರೋಗ್ಯ ಮತ್ತಷ್ಟು ಕ್ಷೀಣ; BBC ಸಂದರ್ಶನದಲ್ಲಿ ಪುತ್ರ ಹಂಟರ್ ಕಳವಳ

KBC ವೇದಿಕೆಯಲ್ಲಿ ಆಮಿರ್ ಖಾನ್‌; ‘4ನೇ ಮದುವೆ ಯಾವಾಗ?’; ಕಾಲೆಳೆದ ನೆಟ್ಟಿಗರು, Amitabh bachchan ಶೋ Promoಗೆ ಕಮೆಂಟ್‌ಗಳ ಮಹಾಪೂರ..!

40 ಕೋಟಿ ಯುವಕರು ದೇಶದ ನಿಜವಾದ ಶಕ್ತಿ, ಆದರೆ ನಿರುದ್ಯೋಗ ತಾಂಡವವಾಡುತ್ತಿದೆ: ಉತ್ತರಪ್ರದೇಶದಲ್ಲಿ ರಾಹುಲ್ ಗಾಂಧಿ

Toxic Trailer: ನಾನು ಬರೋ ಸಮಯ ಬಂದಿದೆ ಎಂದ ಯಶ್, ನಾವೆಲ್ಲರೂ ಕಾಯುತ್ತಿದ್ದೇವೆ ಎಂದ ಶಿವಣ್ಣ!