ರಂದೀಪ್ ಸಿಂಗ್ ಸುರ್ಜೆವಾಲಾ, ಸಿದ್ದರಾಮಯ್ಯ, ಡಿ ಕೆ ಶಿವಕುಮಾರ್  
ದೇಶ

ನಿಗಮ-ಮಂಡಳಿ ಅಧ್ಯಕ್ಷರ ನೇಮಕ ಜುಲೈ 16ಕ್ಕೆ ಫೈನಲ್; ಐದೂ ವರ್ಷ ನಾನೇ ಸಿಎಂ: ಸಿದ್ದರಾಮಯ್ಯ; Video

ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ 16ರಂದು ಸುರ್ಜೆವಾಲಾ ಅವರು ಮತ್ತೊಮ್ಮೆ ಬೆಂಗಳೂರಿಗೆ ಬರುತ್ತಾರೆ, ಅಂದು ನಾವು ಎಲ್ಲಾ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕವನ್ನು ಅಂತಿಮಗೊಳಿಸುತ್ತೇವೆ.

ನವದೆಹಲಿ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಜೊತೆಯಲ್ಲಿ ನಾನು ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಮಾತುಕತೆ ನಡೆಸಿದ್ದೇವೆ. ನಿಗಮ-ಮಂಡಳಿಗಳಿಗೆ ನಮ್ಮ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸುವ ಕುರಿತು ಚರ್ಚೆ ಮಾಡಿದ್ದೇವೆ, ಆದರೆ ನೇಮಕ ಪ್ರಕ್ರಿಯೆ ಪೂರ್ಣವಾಗಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಂದು ದೆಹಲಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಜುಲೈ 16ರಂದು ಸುರ್ಜೆವಾಲಾ ಅವರು ಮತ್ತೊಮ್ಮೆ ಬೆಂಗಳೂರಿಗೆ ಬರುತ್ತಾರೆ, ಅಂದು ನಾವು ಎಲ್ಲಾ ನಿಗಮ-ಮಂಡಳಿಗಳ ಅಧ್ಯಕ್ಷರ ನೇಮಕವನ್ನು ಅಂತಿಮಗೊಳಿಸುತ್ತೇವೆ ಎಂದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗುತ್ತದೆ ಎಂಬುದು ಮಾಧ್ಯಮಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಪಕ್ಷದೊಳಗೆ ಅಂತಹ ಒಪ್ಪಂದವಾಗಲೀ, ಚರ್ಚೆಗಳಾಗಲೀ ಯಾವುದೂ ನಡೆಯುತ್ತಿಲ್ಲ. ದೆಹಲಿ ಭೇಟಿಯಲ್ಲಿಯೂ ಅಧಿಕಾರ ಹಂಚಿಕೆ ಕುರಿತು ಚರ್ಚೆಯಾಗಿಲ್ಲ.

ಐದೂ ವರ್ಷ ನಾನೇ ಮುಖ್ಯಮಂತ್ರಿಯಾಗಿರುತ್ತೇನೆ. ಈ ಬಗ್ಗೆ ಈಗಾಗಲೇ ನಮ್ಮ ಹೈಕಮಾಂಡ್, ರಣದೀಪ್ ಸಿಂಗ್ ಸುರ್ಜೇವಾಲಾ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಲ್ಲರೂ ಸ್ಪಷ್ಟನೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬಂಧನ ನ್ಯಾಯಸಮ್ಮತ: ಭಾರತಕ್ಕೆ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ಹಸ್ತಾಂತರಕ್ಕೆ ಬೆಲ್ಜಿಯಂ ನ್ಯಾಯಾಲಯ ಆದೇಶ!

ವಿಜಯಪುರ ಬಳಿಕ ಇದೀಗ ಬಾಗಲಕೋಟೆ ಪ್ರವೇಶಕ್ಕೂ ಕಾಡಸಿದ್ದೇಶ್ವರ ಶ್ರೀಗಳಿಗೆ ನಿರ್ಬಂಧ!

ಲಕ್ಷ ಕೋಟಿ ಹೂಡಿಕೆಯ Google AI ಹಬ್ ಆಂಧ್ರಕ್ಕೆ ಹೊಯ್ತು: ನಮ್ಮ ಸಚಿವರು ಜಾತಿ, ಜಾತಿ ಗಣತಿಯಲ್ಲಿ ಮಗ್ನ; ಉದ್ಯಮಿ ಪೈ ವ್ಯಂಗ್ಯ

Pak-Afghan ಕದನ ವಿರಾಮ ಅಂತ್ಯ ಬೆನ್ನಲ್ಲೇ ಸೇನಾ ನೆಲೆ ಮೇಲೆ ಆತ್ಮಾಹುತಿ ಬಾಂಬ್ ದಾಳಿ: 7 ಪಾಕ್ ಸೈನಿಕರು ಬಲಿ!

ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಗೆ ಶಕ್ತಿ ಯೋಜನೆ; 'ನಕಲಿ' ಪ್ರಮಾಣಪತ್ರ ಹಂಚಿಕೊಂಡ್ರಾ CM?

SCROLL FOR NEXT