ಗಂಭೀರಾ ಸೇತುವೆ ಕುಸಿತ 
ದೇಶ

ಗಂಭೀರ ಸೇತುವೆ ಕುಸಿತ: ಸಾವಿನ ಸಂಖ್ಯೆ 20ಕ್ಕೆ ಏರಿಕೆ; ರಾಜಕೀಯ ಕೆಸರೆರಚಾಟದಿಂದ ಅಂತ್ಯಕ್ರಿಯೆ ವಿಳಂಬ

ಮಹಿಸಾಗರ್ ನದಿಗೆ ಕಟ್ಟಲಾದ 40 ವರ್ಷ ಹಳೆಯ ಸೇತುವೆ ಕುಸಿದು, ಸಂಚರಿಸುತ್ತಿದ್ದ ಹಲವು ವಾಹನಗಳು ನದಿಗೆ ಬಿದ್ದಿದ್ದವು.

ಅಹಮದಾಬಾದ್: ಗುಜರಾತ್‌ನ ವಡೋದರಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಗಂಭೀರಾ ಸೇತುವೆ ಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಶುಕ್ರವಾರ 20ಕ್ಕೆ ಏರಿಕೆಯಾಗಿದೆ.

ಮಹಿಸಾಗರ್ ನದಿಗೆ ಕಟ್ಟಲಾದ 40 ವರ್ಷ ಹಳೆಯ ಸೇತುವೆ ಕುಸಿದು, ಸಂಚರಿಸುತ್ತಿದ್ದ ಹಲವು ವಾಹನಗಳು ನದಿಗೆ ಬಿದ್ದಿದ್ದವು. ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇಂದು 20ಕ್ಕೆ ಏರಿಕೆಯಾಗಿದ್ದು, ನದಿಗೆ ಬಿದ್ದವರಲ್ಲಿ ಇನ್ನೂ ಇಬ್ಬರು ನಾಪತ್ತೆಯಾಗಿದ್ದು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ.

ಒಂದು ಕಡೆ ಮೃತರ ಕುಟುಂಬಗಳ ದುಃಖ ಹೆಚ್ಚುತ್ತಿದ್ದು, ಮತ್ತೊಂದು ಕಡೆ ರಾಜಕೀಯ ನಾಯಕರ ಕಟುವಾದ ಆರೋಪ, ಪ್ರತ್ಯಾರೋಪಗಳಿಂದ ಮೃತರ ಅಂತ್ಯಕ್ರಿಯೆ ವಿಳಂಬವಾಗುತ್ತಿದೆ.

ದುರಂತದಿಂದ ತೀವ್ರ ಟೀಕೆ ಎದುರಿಸುತ್ತಿರುವ ಗುಜರಾತ್ ಸರ್ಕಾರ, ಪ್ರಾಥಮಿಕ ತನಿಖೆಯ ನಂತರ ಲೋಕೋಪಯೋಗಿ ಇಲಾಖೆಯ (ಪಿಡಬ್ಲ್ಯೂಡಿ) ನಾಲ್ವರು ಎಂಜಿನಿಯರ್‌ಗಳನ್ನು ಅಮಾನತುಗೊಳಿಸಿದೆ.

ಲೋಕೋಪಯೋಗಿ ಖಾತೆ ಹೊಂದಿರುವ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದು, 30 ದಿನಗಳಲ್ಲಿ ವಿವರವಾದ ವರದಿ ನೀಡುವಂತೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

COVID ಬಳಿಕ ವಿಶ್ವಕ್ಕೆ ಮತ್ತೊಂದು ಹೆಮ್ಮಾರಿ ಕಂಟಕ: ಕೆನಡಾದಲ್ಲಿ ಮಾರಣಾಂತಿಕ 'Hantavirus' ಮತ್ತೊಂದು ಸೋಂಕು ದೃಢ, ಹೆಚ್ಚಿದ ಆತಂಕ..!

ಅಧಿಕಾರ ಬದಲಾವಣೆ ಚರ್ಚೆ ಬೆನ್ನಲ್ಲೇ ಡಿಕೆಶಿ ಟೆಂಪಲ್ ರನ್: CM ಗಾದಿ ಕನಸು ಜೀವಂತ..!

94ನೇ ವಸಂತಕ್ಕೆ ಕಾಲಿಟ್ಟ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ: ಅಪ್ಪಾಜಿ ಕ್ಯಾಂಟೀನ್‌ನಲ್ಲಿ ಕೇವಲ 1 ರೂ.ಗೆ ಭೋಜನ ವ್ಯವಸ್ಥೆ..!

IPL 2026 ಪಂದ್ಯದಲ್ಲೂ ವಿಜಯ್ ಫೀವರ್! ಫಿಫ್ಟಿ ಬಳಿಕ ವೆಂಕಟೇಶ್ ಅಯ್ಯರ್ ಸೆಲೆಬ್ರೇಶನ್ ಹೇಗಿತ್ತು ಗೊತ್ತಾ? Video

ಶಾಂತಿ ಒಪ್ಪಂದಕ್ಕೆ ಒಪ್ಪದಿದ್ದರೆ ಏನೂ ಉಳಿಯಲ್ಲ, ಯುರೇನಿಯಂ ಕೊಟ್ಬಿಡಿ; ಇರಾನ್ ಗೆ ಮತ್ತೆ ಡೊನಾಲ್ಡ್ ಟ್ರಂಪ್ ಎಚ್ಚರಿಕೆ

SCROLL FOR NEXT