ಬಂಧಿತ ದೀಪಕ್ ಯಾದವ್ 
ದೇಶ

ಗುರುಗ್ರಾಮ ಟೆನಿಸ್ ಆಟಗಾರ್ತಿ ಕೊಲೆ: ತಂದೆ 'ಹೇಳಿಕೆ'ಗೆ ಮರಣೋತ್ತರ ಪರೀಕ್ಷಾ ವರದಿ ತದ್ವಿರುದ್ಧ!

ರಾಧಿಕಾ ಅವರ ಎದೆಯ ಮೇಲೆ ನಾಲ್ಕು ಗುಂಡೇಟಿನ ಗಾಯಗಳಾಗಿದ್ದು, ಎಲ್ಲಾ ಗುಂಡುಗಳನ್ನು ಅವರ ದೇಹದಿಂದ ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ.

ಗುರುಗ್ರಾಮ: 25 ವರ್ಷದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ಅವರನ್ನು ಹತ್ಯೆ ಮಾಡಿದ ತಂದೆ ದೀಪಕ್ ಯಾದವ್ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ನಲ್ಲಿ ದಾಖಲಿಸಲಾದ ಪ್ರಮುಖ ಹೇಳಿಕೆಗಳಿಗೆ ಮರಣೋತ್ತರ ಪರೀಕ್ಷೆಯ ವರದಿಯು ತದ್ವಿರುದ್ಧವಾಗಿದೆ.

ಇಂಡಿಯಾ ಟುಡೇ ವರದಿಯ ಪ್ರಕಾರ, ಗುರ್ಗಾಂವ್ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ. ದೀಪಕ್ ಮಾಥುರ್ ಅವರು ದೂರವಾಣಿ ಮೂಲಕ ಮಾತನಾಡಿದ್ದು, ರಾಧಿಕಾ ಅವರ ಎದೆಯ ಮೇಲೆ ನಾಲ್ಕು ಗುಂಡೇಟಿನ ಗಾಯಗಳಾಗಿದ್ದು, ಎಲ್ಲಾ ಗುಂಡುಗಳನ್ನು ಅವರ ದೇಹದಿಂದ ಹೊರತೆಗೆದು ವಿಧಿವಿಜ್ಞಾನ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೇಳಿದ್ದಾರೆ.

ದೀಪಕ್ ತನ್ನ ಮಗಳ ಮೇಲೆ ಹಿಂದಿನಿಂದ ಮೂರು ಗುಂಡುಗಳನ್ನು ಹಾರಿಸಿದ್ದಾರೆ ಎಂದು ಹೇಳಲಾದ ಎಫ್‌ಐಆರ್‌ಗೆ ಈ ಬಹಿರಂಗಪಡಿಸುವಿಕೆಯು ಸಂಪೂರ್ಣ ವಿರುದ್ಧವಾಗಿದೆ. ಈ ವ್ಯತ್ಯಾಸವು 25 ವರ್ಷದ ಯುವತಿಯ ಸಾವಿಗೆ ಕಾರಣವಾದ ಘಟನೆಗಳ ಅನುಕ್ರಮ ಮತ್ತು ಆರೋಪಿಯ ತಪ್ಪೊಪ್ಪಿಗೆಯ ನಿಖರತೆಯ ಬಗ್ಗೆ ಹೊಸ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ದೀಪಕ್ ಯಾದವ್ ತನ್ನ ಮಗಳ ಆದಾಯದಲ್ಲಿ ತಾನು ಜೀವನ ಮಾಡುತ್ತೀರುವ ಬಗ್ಗೆ ಪದೇಪದೆ ನಿಂದಿಸಿದ್ದರಿಂದ ತನ್ನ ಮಗಳ ಮೇಲೆ ಗುಂಡು ಹಾರಿಸಿದ್ದಾಗಿ ಒಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಈ ಹಿಂದೆ ಹೇಳಿದ್ದರು.

ಈ ಮಧ್ಯೆ ಪೊಲೀಸರು ಶುಕ್ರವಾರ ಹೆಚ್ಚಿನ ವಿಚಾರಣೆಗಾಗಿ ಆರೋಪಿಯನ್ನು ಒಂದು ದಿನ ಕಸ್ಟಡಿಗೆ ಪಡೆದಿದ್ದಾರೆ.

ರಾಧಿಕಾ ಅವರ ಚಿಕ್ಕಪ್ಪ ಕುಲದೀಪ್ ಯಾದವ್ ಅವರ ದೂರಿನ ಮೇರೆಗೆ ದಾಖಲಿಸಲಾದ ಎಫ್‌ಐಆರ್‌ನಲ್ಲಿ, ಬೆಳಗ್ಗೆ 10:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಸೆಕ್ಟರ್ 57 ರಲ್ಲಿರುವ ತಮ್ಮ ಕುಟುಂಬದ ಎರಡು ಅಂತಸ್ತಿನ ಮನೆಯ ನೆಲ ಮಹಡಿಯಲ್ಲಿ ವಾಸಿಸುವ ಕುಲದೀಪ್, ದೊಡ್ಡ ಶಬ್ದ ಕೇಳಿ ಮೇಲಕ್ಕೆ ಓಡಿಹೋದಾಗ, ಅಡುಗೆಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ರಾಧಿಕಾ ಅವರನ್ನು ನೋಡಿದೆ. ಕೊಲೆಗೆ ಬಳಸಿದ ಪರವಾನಗಿ ಪಡೆದ .32 ಬೋರ್ ರಿವಾಲ್ವರ್ ಡ್ರಾಯಿಂಗ್ ರೂಮಿನಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

NIRF ರ‍್ಯಾಂಕಿಂಗ್‌: ಸತತ 7ನೇ ವರ್ಷವೂ ಐಐಟಿ ಮದ್ರಾಸ್ ಗೆ ಅಗ್ರಸ್ಥಾನ; IISc ಬೆಂಗಳೂರಿಗೆ 2ನೇ ಸ್ಥಾನ

SCO Summit 2025: ಬೀಜಿಂಗ್‌, ಮಾಸ್ಕೋ ಮತ್ತು ವಾಷಿಂಗ್ಟನ್‌ ನಡುವೆ ಭಾರತದ ಜಾಗರೂಕ ನಡಿಗೆ (ಜಾಗತಿಕ ಜಗಲಿ)

SCROLL FOR NEXT