ನಕ್ಸಲೀಯರ ಸಾಂದರ್ಭಿಕ ಚಿತ್ರ 
ದೇಶ

ಛತ್ತೀಸ್ ಗಢ: 1.18 ಕೋಟಿ ರೂ ಬಹುಮಾನ ಘೋಷಿಸಲಾದ ಮೂವರು ದಂಪತಿ ಸೇರಿದಂತೆ 23 ನಕ್ಸಲೀಯರ ಶರಣಾಗತಿ!

ನಾರಾಯಣಪುರ ಜಿಲ್ಲೆಯಲ್ಲಿ ನಿನ್ನೆಯಷ್ಟೇ 22 ನಕ್ಸಲೀಯರು ಶರಣಾಗಿದ್ದರು. ಇಂದು ಸುಕ್ಮಾ ಜಿಲ್ಲೆಯಲ್ಲಿ 1.18 ಕೋಟಿ ರೂ ಬಹುಮಾನ ಘೋಷಿಸಲಾಗಿದ್ದ ಮೂವರು ದಂಪತಿ ಸೇರಿದಂತೆ 23 ನಕ್ಸಲೀಯರು ಶರಣಾಗಿದ್ದಾರೆ.

ಸುಕ್ಮಾ: ಛತ್ತೀಸ್ ಗಢದಲ್ಲಿ ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗುತ್ತಿರುವ ನಕ್ಸಲೀಯರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ನಾರಾಯಣಪುರ ಜಿಲ್ಲೆಯಲ್ಲಿ ನಿನ್ನೆಯಷ್ಟೇ 22 ನಕ್ಸಲೀಯರು ಶರಣಾಗಿದ್ದರು. ಇಂದು ಸುಕ್ಮಾ ಜಿಲ್ಲೆಯಲ್ಲಿ ರೂ. 1.18 ಕೋಟಿ ಬಹುಮಾನ ಘೋಷಿಸಲಾಗಿದ್ದ ಮೂವರು ದಂಪತಿ ಸೇರಿದಂತೆ 23 ನಕ್ಸಲೀಯರು ಶರಣಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದರಲ್ಲಿ ನಕ್ಸಲ್ ಗುಂಪಿನ 11 ಹಿರಿಯ ಸದಸ್ಯರು ಸೇರಿದ್ದಾರೆ. ಅವರಲ್ಲಿ ಬಹುತೇಕರು ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ (PLGA)ಬೆಟಾಲಿಯನ್ ನಂ.1 ನಲ್ಲಿ ಸಕ್ರಿಯರಾಗಿದ್ದರು ಎಂದು ಅವರು ಮಾಹಿತಿ ನೀಡಿದ್ದಾರೆ.

ಪೊಳ್ಳು ನಕ್ಸಲ್ ಸಿದ್ದಾಂತ, ಅಮಾಯಕ ಆದಿವಾಸಿಗಳ ಮೇಲೆ ನಕ್ಸಲೀಯರು ನಡೆಸಿದ ದೌರ್ಜನ್ಯ ಮತ್ತು ಸಂಘಟನೆಯಲ್ಲಿ ಹೆಚ್ಚುತ್ತಿರುವ ಆಂತರಿಕ ಭಿನ್ನಾಭಿಪ್ರಾಯಗಳಿಂದ ನಿರಾಸೆಗೊಂಡು ಶರಣಾಗುತ್ತಿರುವುದಾಗಿ ಅವರು ಅಧಿಕಾರಿಗಳ ಮುಂದೆ ಹೇಳಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ತಿಳಿಸಿದ್ದಾರೆ.

ಶರಣಾದವರಲ್ಲಿ 9 ಮಂದಿ ಮಹಿಳೆಯರು ಸೇರಿದ್ದಾರೆ. ಸುಕ್ಮಾ ಮತ್ತು ಬಿಜಾಪುರ ಅಂತರ ಜಿಲ್ಲಾ ಗಡಿಯಲ್ಲಿ ಭದ್ರತಾ ಪಡೆಗಳು ನಡೆಸುತ್ತಿರುವ ತೀವ್ರ ನಕ್ಸಲ್ ವಿರೋಧಿ ಕಾರ್ಯಾಚರಣೆಯಿಂದ ಬೆದರಿ ನಕ್ಸಲೀಯರ ಶರಣಾಗತಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಚವಾಣ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT