ಭಾರತದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ 
ದೇಶ

ಭಾರತೀಯ ಕಾನೂನು ವ್ಯವಸ್ಥೆಯನ್ನು ಸರಿಪಡಿಸುವ ಅವಶ್ಯಕತೆಯಿದೆ: ಸಿಜೆಐ ಬಿ.ಆರ್ ಗವಾಯಿ; Video

ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಪಿಎಸ್ ನರಸಿಂಹ ಅವರು ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು.

ಹೈದರಾಬಾದ್: ಭಾರತೀಯ ಕಾನೂನು ವ್ಯವಸ್ಥೆಯು ವಿಶಿಷ್ಟ ಸವಾಲುಗಳನ್ನು ಎದುರಿಸುತ್ತಿದ್ದು, ಅದನ್ನು ಸರಿಪಡಿಸುವ ಅಗತ್ಯವಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಶನಿವಾರ ಹೇಳಿದರು.

ಹೈದರಾಬಾದ್‌ನ ಜಸ್ಟೀಸ್ ಸಿಟಿಯಲ್ಲಿರುವ ನಲ್ಸಾರ್ ಕಾನೂನು ವಿಶ್ವವಿದ್ಯಾಲಯದಲ್ಲಿನ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ವಿದ್ಯಾರ್ಥಿವೇತನ ಪಡೆಯುವ ಮೂಲಕ ಅಧ್ಯಯನಕ್ಕಾಗಿ ವಿದೇಶಕ್ಕೆ ಹೋಗಬೇಕು. ಕುಟುಂಬದ ಮೇಲೆ ಹಣಕಾಸಿನ ಹೊರೆಯನ್ನು ಹೇರಬಾರದು ಎಂದು ಸಲಹೆ ನೀಡಿದರು.

ಕಾನೂನು ವ್ಯವಸ್ಥೆಯಲ್ಲಿ ಗಂಭೀರ ಸಮಸ್ಯೆಗಳಿವೆ ಮತ್ತು ಪ್ರಮುಖ ಸುಧಾರಣೆಗಳ ಅಗತ್ಯವಿದೆ ಎಂದು ನಾನು ನಂಬಿದ್ದರೂ, ಈ ದೇಶದ ಜನರು ಮುಂದೆ ಬಂದು ಅಗತ್ಯ ಬದಲಾವಣೆಗಳನ್ನು ತರಲು ಸಹಾಯ ಮಾಡುತ್ತಾರೆ ಎಂಬ ವಿಶ್ವಾಸ ಇನ್ನೂ ನನ್ನಲ್ಲಿದೆ ಎಂದು ಸಿಜೆಐ ಗವಾಯಿ ಹೇಳಿದರು.

'ನಮ್ಮ ದೇಶ ಮತ್ತು ಕಾನೂನು ವ್ಯವಸ್ಥೆಯು ವಿಶಿಷ್ಟ ಸವಾಲುಗಳನ್ನು ಎದುರಿಸುತ್ತಿದೆ. ಪ್ರಕರಣಗಳ ವಿಚಾರಣೆಗಳಲ್ಲಿ ವಿಳಂಬ ಉಂಟಾಗಿ ಕೆಲವೊಮ್ಮೆ ದಶಕಗಳವರೆಗೆ ಹೋಗಬಹುದು. ವಿಚಾರಣಾಧೀನ ಕೈದಿಯಾಗಿ ಜೈಲಿನಲ್ಲಿ ವರ್ಷಗಳ ಕಾಲ ಕಳೆದ ನಂತರ ವ್ಯಕ್ತಿಯು ನಿರಪರಾಧಿ ಎಂದು ಕಂಡುಬಂದ ಪ್ರಕರಣಗಳನ್ನು ನಾವು ನೋಡಿದ್ದೇವೆ. ನಮ್ಮ ಅತ್ಯುತ್ತಮ ಪ್ರತಿಭೆಗಳು ನಾವು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸಹಾಯ ಮಾಡುತ್ತದೆ' ಎಂದು ಅವರು ಹೇಳಿದರು.

ಮಾರ್ಗದರ್ಶಕರನ್ನು ಹುಡುಕುವಾಗ, ಅವರು ಶ್ರೀಮಂತರು, ಪ್ರಸಿದ್ಧರು ಅಥವಾ ಶಕ್ತಿಶಾಲಿಗಳು ಎಂಬ ಕಾರಣಕ್ಕಾಗಿ ಯಾರನ್ನಾದರೂ ಆಯ್ಕೆ ಮಾಡಬಾರದು. ಬದಲಾಗಿ, ಅವರು ಪ್ರಾಮಾಣಿಕ, ದಯೆ ಮತ್ತು ಉತ್ತಮ ಮೌಲ್ಯಗಳನ್ನು ಹೊಂದಿರುವವರನ್ನು ಆಯ್ಕೆ ಮಾಡಬೇಕು ಎಂದು ಅವರು ಸಲಹೆ ನೀಡಿದರು.

ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಮತ್ತು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಪಿಎಸ್ ನರಸಿಂಹ ಅವರು ಘಟಿಕೋತ್ಸವದಲ್ಲಿ ಭಾಗವಹಿಸಿದ್ದರು. ತೆಲಂಗಾಣ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸುಜೋಯ್ ಪಾಲ್ ಅವರು ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

'ವೃದ್ಧ ಸಮಾಜದತ್ತ ಶ್ರೀಲಂಕಾ': ಅತ್ಯಂತ ವೇಗವಾಗಿ ಹೆಚ್ಚುತ್ತಿದೆ ಹಿರಿಯರ ಸಂಖ್ಯೆ; 40 ವರ್ಷಗಳಲ್ಲಿ ಮೂರು ಪಟ್ಟು ಜಾಸ್ತಿ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

SCROLL FOR NEXT