ಅಪಘಾತದ ನಂತರದ ದೃಶ್ಯ 
ದೇಶ

Ahmedabad Air India ದುರಂತದ ಪ್ರಾಥಮಿಕ ವರದಿ ಬಗ್ಗೆ ಆತುರದ ನಿರ್ಧಾರಕ್ಕೆ ಬರುವುದು ಬೇಡ: ನಾಗರಿಕ ವಿಮಾನಯಾನ ಸಚಿವ

ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ಸಹ, ಪ್ರಾಥಮಿಕ ವರದಿಯಿಂದ ದೃಢವಾದ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಸೂಕ್ತವಲ್ಲ. AAIB ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಅದರ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸುತ್ತಿದೆ ಎಂದರು.

ನವದೆಹಲಿ: ಜೂನ್ 12 ರಂದು ಅಹಮದಾಬಾದ್ ನಲ್ಲಿ ಸಂಭವಿಸಿದ ಏರ್ ಇಂಡಿಯಾ ಅಪಘಾತದ ಕಾರಣದ ಬಗ್ಗೆ ಆತುರದ ತೀರ್ಮಾನಗಳಿಗೆ ಸಾರ್ವಜನಿಕರು ಮತ್ತು ಮಾಧ್ಯಮಗಳು ಬರಬಾರದು ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಹೇಳಿದ್ದಾರೆ.

ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಇಂದು ಬಿಡುಗಡೆ ಮಾಡಿದ ಪ್ರಾಥಮಿಕ ಸಂಶೋಧನಾ ವರದಿಗಳು ಸಂಕೀರ್ಣ ತನಿಖೆಯ ಆರಂಭ ಮಾತ್ರ ಎಂದು ಅವರು ಹೇಳಿದ್ದಾರೆ.

ಇದು ಪ್ರಾಥಮಿಕ ವರದಿಯಾಗಿದೆ. ಸಚಿವಾಲಯದಲ್ಲಿ, ನಾವು ಅದನ್ನು ಕೂಲಂಕಷವಾಗಿ ವಿಶ್ಲೇಷಿಸುತ್ತಿದ್ದೇವೆ, ಅವರಿಗೆ ಅಗತ್ಯವಿರುವ ಯಾವುದೇ ಬೆಂಬಲವನ್ನು ನೀಡಲು AAIB ಯೊಂದಿಗೆ ಸಮನ್ವಯ ಸಾಧಿಸುತ್ತಿದ್ದೇವೆ. ಅಂತಿಮ ವರದಿ ಶೀಘ್ರದಲ್ಲೇ ಬಿಡುಗಡೆಯಾಗುವ ಸಾಧ್ಯತೆಯಿದ್ದು, ಇದರಿಂದ ನಾವು ಕೆಲವು ನಿರ್ದಿಷ್ಟ ತೀರ್ಮಾನಗಳಿಗೆ ಬರಬಹುದು, ಇದೊಂದು ಸವಾಲಿನ ವಿಷಯ ಎಂದು ರಾಮ್ ಮೋಹನ್ ನಾಯ್ಡು ಸುದ್ದಿಗಾರರಿಗೆ ತಿಳಿಸಿದರು.

ಆರಂಭಿಕ ಎಎಐಬಿ ವರದಿಯು ಘಟನೆಗಳ ಆಘಾತಕಾರಿ ಕ್ರಮವನ್ನು ಬಹಿರಂಗಪಡಿಸಿದೆ. ಅಹಮದಾಬಾದ್‌ನಿಂದ ಟೇಕ್ ಆಫ್ ಆದ ಕೇವಲ ಮೂರು ಸೆಕೆಂಡುಗಳಲ್ಲಿ, ಏರ್ ಇಂಡಿಯಾ ಫ್ಲೈಟ್ 171 ಆಗಿ ಕಾರ್ಯನಿರ್ವಹಿಸುತ್ತಿರುವ ಬೋಯಿಂಗ್ 787-8 ವಿಮಾನದ ಎರಡೂ ಎಂಜಿನ್‌ಗಳಿಗೆ ಇಂಧನ ಪೂರೈಕೆ ಕಡಿತಗೊಂಡು ವಿಮಾನದ ಇಂಧನ ನಿಯಂತ್ರಣ ಸ್ವಿಚ್‌ಗಳು ಪರಸ್ಪರ ಒಂದು ಸೆಕೆಂಡಿನೊಳಗೆ “RUN” ನಿಂದ “CUTOFF” ಆಯಿತು.

ಸ್ವಿಚ್ ಟಾಗಲ್‌ಗಳು ಅಜಾಗರೂಕತೆಯಿಂದ ಆಯಿತೋ ಅಥವಾ ಉದ್ದೇಶಪೂರ್ವಕವಾಗಿಯೇ ಆಗಿದೆಯೇ ಎಂಬುದು ಗೊತ್ತಾಗಿಲ್ಲ. ವಿಮಾನದ ಹಾರಾಟವನ್ನು 56 ವರ್ಷದ ಕ್ಯಾಪ್ಟನ್ ಸುಮೀತ್ ಸಭರ್ವಾಲ್ ಅವರು ನಡೆಸುತ್ತಿದ್ದರು, ಅವರು 15,000 ಗಂಟೆಗಳಿಗೂ ಹೆಚ್ಚು ಹಾರಾಟದ ಅನುಭವ ಹೊಂದಿರುವ ಅನುಭವಿ. ಸಹ-ಪೈಲಟ್ 32 ವರ್ಷದ ಕ್ಲೈವ್ ಕುಂದರ್, ಅವರು 3,403 ಹಾರಾಟದ ಗಂಟೆಗಳನ್ನು ಕಳೆದಿದ್ದರು.

ಇನ್ನು ನಾಗರಿಕ ವಿಮಾನಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರು ಸಹ, ಪ್ರಾಥಮಿಕ ವರದಿಯಿಂದ ದೃಢವಾದ ತೀರ್ಮಾನಗಳನ್ನು ತೆಗೆದುಕೊಳ್ಳುವುದು ಸೂಕ್ತವಲ್ಲ. AAIB ಒಂದು ಸ್ವಾಯತ್ತ ಸಂಸ್ಥೆಯಾಗಿದ್ದು, ಅದರ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸುತ್ತಿದೆ ಎಂದರು.

ಅಂತಿಮ ತನಿಖಾ ವರದಿ ಬರುವವರೆಗೆ ಕಾಯೋಣ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT