ಬೌದ್ಧ ಧಾರ್ಮಿಕ ಗುರು ದಲೈಲಾಮ 
ದೇಶ

Dalai Lama ಉತ್ತರಾಧಿಕಾರಿ ಆಯ್ಕೆ: 'India-China ಸಂಬಂಧಕ್ಕೆ ಮುಳ್ಳು'!

ಭಾರತದ ಕಾರ್ಯತಂತ್ರ ಮತ್ತು ಶೈಕ್ಷಣಿಕ ಸಮುದಾಯಗಳ ಕೆಲವರು ದಲೈ ಲಾಮಾ ಅವರ ಪುನರ್ಜನ್ಮದ ಬಗ್ಗೆ "ಅನುಚಿತ ಹೇಳಿಕೆಗಳನ್ನು" ನೀಡಿದ್ದಾರೆ.

ನವದೆಹಲಿ: ಖ್ಯಾತ ಬೌದ್ಧ ಧರ್ಮದ ಧಾರ್ಮಿಕ ಗುರು ದಲೈಲಾಮ ಅವರ ಉತ್ತರಾಧಿಕಾರಿ ಆಯ್ಕೆ ವಿಚಾರವಾಗಿ ಕೆಂಡಾಮಂಡಲವಾಗಿರುವ ಚೀನಾ ಈ ವಿಚಾರ ಭಾರತ-ಚೀನಾ ಸಂಬಂಧಕ್ಕೆ ಮುಳ್ಳಾಗಲಿದೆ ಎಂದು ಚೀನಾ ಎಚ್ಚರಿಕೆ ನೀಡಿದೆ.

2020ರಲ್ಲಿ ಗಾಲ್ವಾನ್‌ ಕಣಿವೆಯಲ್ಲಿ ಚೀನಾ ಪಡೆಗಳ ಜೊತೆ ಭಾರತದ ಸೇನೆಯು ಸಂಘರ್ಷ ನಡೆದ ಬಳಿಕ ಇದೇ ಮೊದಲ ಬಾರಿಗೆ ಚೀನಾಕ್ಕೆ ತೆರಳಲಿರುವ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಪ್ರವಾಸಕ್ಕೂ ಮುನ್ನ ಆಕ್ಷೇಪ ವ್ಯಕ್ತಪಡಿಸಿದ್ದು, ಟಿಬೆಟ್‌ನ ಬೌದ್ಧರ ಆಧ್ಯಾತ್ಮಿಕ ಗುರು ದಲೈ ಲಾಮಾ ಅವರ ಉತ್ತರಾಧಿಕಾರಿ ಆಯ್ಕೆ ವಿಚಾರವು ಭಾರತ ಹಾಗೂ ಚೀನಾ ಸಂಬಂಧಕ್ಕೆ ಮುಳ್ಳಾಗಲಿದೆ' ಎಂದು ಚೀನಾ ಎಚ್ಚರಿಸಿದೆ.

ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಚೀನಾ ರಾಯಭಾರ ಕಚೇರಿಯ ವಕ್ತಾರ ಯು ಜಿಂಗ್, 'ಭಾರತದ ಕಾರ್ಯತಂತ್ರ ಮತ್ತು ಶೈಕ್ಷಣಿಕ ಸಮುದಾಯಗಳ ಕೆಲವರು ದಲೈ ಲಾಮಾ ಅವರ ಪುನರ್ಜನ್ಮದ ಬಗ್ಗೆ "ಅನುಚಿತ ಹೇಳಿಕೆಗಳನ್ನು" ನೀಡಿದ್ದಾರೆ.

ವಿದೇಶಾಂಗ ನೀತಿಯ ವೃತ್ತಿಪರರಾಗಿ ಕ್ಸಿಜಾಂಗ್‌ ಸೂಕ್ಷ್ಮತೆಯ ವಿಚಾರದಲ್ಲಿ ಸಂಪೂರ್ಣ ಅರಿವು ಹೊಂದಿರಬೇಕು. ಲಾಮಾ ಅವರ ಪುನರ್ಜನ್ಮ ಹಾಗೂ ಉತ್ತರಾಧಿಕಾರಿ ಆಯ್ಕೆ ವಿಚಾರವು ಅಂತರ್ಗತವಾಗಿ ಚೀನಾದ ಆಂತರಿಕ ವಿಚಾರವಾಗಿದೆ ಎಂದು ಹೇಳಿದ್ದಾರೆ.

‘ದಲೈಲಾಮಾ ಉತ್ತರಾಧಿಕಾರಿ ಮೇಲೆ ತನ್ನ ಪಾತ್ರವಿಲ್ಲ, ಆದರೆ, ಆಯ್ಕೆಗೆ ತಮ್ಮ ದೇಶದ ನಾಯಕರ ಒಪ್ಪಿಗೆ ಅಗತ್ಯ’ ಎಂದು ಚೀನಾವು ಪುನಾರವರ್ತಿಸಿದೆ. ಟಿಬೆಟ್‌ ಪ್ರಾಂತ್ಯವನ್ನು ಚೀನಾವು ‘ಕ್ಸಿಜಾಂಗ್‌’ ಎಂದೇ ಕರೆಯುತ್ತದೆ. ಜಿಂಗ್ ಅವರು ಯಾರನ್ನೂ ಕೂಡ ಬೊಟ್ಟುಮಾಡಿ ಆರೋಪಿಸಿಲ್ಲ.

ದಲೈಲಾಮಾ ಅವರು ಇತ್ತೀಚಿಗೆ 90ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಭಾರತದ ಸಚಿವರು ಪಾಲ್ಗೊಂಡಿದ್ದರು. ಇದಕ್ಕೂ ಚೀನಾ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.

ಅಂದಹಾಗೆ ಜುಲೈ 15ರಂದು ಉತ್ತರ ಚೀನಾದ ತಿಯಾನ್‌ಜಿನ್‌ನಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ಪ್ರಾದೇಶಿಕ ಭದ್ರತಾ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಎಸ್‌.ಜೈಶಂಕರ್‌ ಅವರು ಭಾಗವಹಿಸಲಿದ್ದಾರೆ. ಈ ವೇಳೆ ಎರಡು ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇತಿಹಾಸ ತಿರುಚಲು' ಪ್ರಧಾನಿ ಮೋದಿ ಯತ್ನ; ನೆಹರೂ ಪರಂಪರೆ ಅಳಿಸಲು ಬಿಜೆಪಿಗೆ ಸಾಧ್ಯವಿಲ್ಲ: ಗೌರವ್ ಗೊಗೊಯ್

ಇಂದು 500 Indigo ವಿಮಾನ ಹಾರಾಟ ರದ್ದು: ನಾವು ಹಗುರವಾಗಿ ಪರಿಗಣಿಸಲ್ಲ... ಇಂಡಿಗೋ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಸಚಿವರ ಎಚ್ಚರಿಕೆ!

ಮಹಾರಾಷ್ಟ್ರ: ಫಡ್ನವೀಸ್ ಜೊತೆ ಆಪ್ತರಾಗಿರುವ ಮಹಾಯುತಿ ಮಿತ್ರಪಕ್ಷದ 22 ಶಾಸಕರು ಪಕ್ಷ ತೊರೆಯಲು ಸಜ್ಜು- ಆದಿತ್ಯ ಠಾಕ್ರೆ!

WB ಖರೀದಿಗೆ Netflix ಡೀಲ್ ಬಗ್ಗೆ ಟ್ರಂಪ್ ಅಪಸ್ವರ; ಸರ್ಕಾರದಿಂದ ಅನುಮೋದನೆಗೆ ಕೊಕ್ಕೆ ಸೂಚನೆ: ಏಕೆಂದರೆ...

ಬಾಬ್ರಿ ಮಾದರಿಯ ಬಂಗಾಳದ ಮಸೀದಿಗೆ ಎರಡೇ ದಿನದಲ್ಲಿ 1.3 ಕೋಟಿ ರೂ. ದೇಣಿಗೆ!

SCROLL FOR NEXT