ಪಾದಚಾರಿ ಮಾರ್ಗಕ್ಕೆ ನುಗ್ಗಿದ್ದ ಆಡಿ ಕಾರು. 
ದೇಶ

ದೆಹಲಿ: ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಹರಿದ Audi ಕಾರು; 8 ವರ್ಷದ ಮಗು ಸೇರಿ ಐವರಿಗೆ ಗಂಭೀರ ಗಾಯ

ದೆಹಲಿಯ ವಸಂತ ವಿಹಾರ್ ಪ್ರದೇಶದ ಶಿವ ಕ್ಯಾಂಪ್ ಬಳಿ ಕಾರು ಚಾಲಕನೋರ್ವ ಬುಧವಾರ ತಡರಾತ್ರಿ ಸುಮಾರು 1:45 ವೇಳೆಗೆ ವೇಗವಾಗಿ ಬಂದು ಫುಟ್‌ಪಾತ್‌ ನಲ್ಲಿ ಮಲಗಿದ್ದವರ ಮೇಲೆ ಹರಿಸಿದ್ದಾರೆ.

ನವದೆಹಲಿ: ಕುಡಿದ ಅಮಲಿನಲ್ಲಿ ಪಾದಚಾರಿ ಮಾರ್ಗದಲ್ಲಿ ಮಲಗಿದ್ದವರ ಮೇಲೆ ಆಡಿ ಕಾರು ಹರಿಸಿದ ಪರಿಣಾಮ 8 ವರ್ಷದ ಬಾಲಕಿ ಸೇರಿ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ದೆಹಲಿಯ ವಸಂತ್ ವಿಹಾರ್‌ನಲ್ಲಿ ನಡೆದಿದೆ.

ಗಾಯಾಗಳುಗಳನ್ನು ರಾಜಸ್ಥಾನ ಮೂಲದ ಲಾಧಿ (40), ಅವರ ಮಗಳು ಬಿಮ್ಲಾ (8), ಅವರ ಪತಿ ಸಬಾಮಿ ಅಲಿಯಾಸ್ ಚಿರ್ಮಾ (45) ಮತ್ತು ದಂಪತಿಗಳಾದ ರಾಮ್ ಚಂದರ್ (45) ಮತ್ತು ನಾರಾಯಣಿ (35) ಎಂದು ಗುರ್ತಿಸಲಾಗಿದೆ.

ದೆಹಲಿಯ ವಸಂತ ವಿಹಾರ್ ಪ್ರದೇಶದ ಶಿವ ಕ್ಯಾಂಪ್ ಬಳಿ ಕಾರು ಚಾಲಕನೋರ್ವ ಬುಧವಾರ ತಡರಾತ್ರಿ ಸುಮಾರು 1:45 ವೇಳೆಗೆ ವೇಗವಾಗಿ ಬಂದು ಫುಟ್‌ಪಾತ್‌ ನಲ್ಲಿ ಮಲಗಿದ್ದವರ ಮೇಲೆ ಹರಿಸಿದ್ದಾರೆ.

ಪರಿಣಾಮ ಎಂಟು ವರ್ಷದ ಬಾಲಕಿ ಸೇರಿ ಒಟ್ಟು ಐದು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ಸೇರಿ ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಕಾರು ಚಾಲಕನನ್ನು ಬಂಧಿಸಲಾಗಿದೆ ಅಲ್ಲದೆ, ಚಾಲನೆ ವೇಳೆ ಮದ್ಯಪಾನ ಮಾಡಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT