ಆಟೋ ರಿಕ್ಷಾ ಚಾಲಕನಿಗೆ ಥಳಿತದ ವಿಡಿಯೋ ವೈರಲ್ 
ದೇಶ

ಮರಾಠಿ ವಿರೋಧಿ ಹೇಳಿಕೆ: ಆಟೋ ರಿಕ್ಷಾ ಚಾಲಕನನ್ನು ಥಳಿಸಿದ ಶಿವಸೇನಾ-ಯುಬಿಟಿ ಕಾರ್ಯಕರ್ತರು!

ಆಟೋ-ರಿಕ್ಷಾ ಚಾಲಕನಿಗೆ ತಕ್ಕ ಪಾಠ ಕಲಿಸಿದ್ದಾರೆ. ಮರಾಠಿ ಭಾಷೆ ಮತ್ತು ರಾಜ್ಯವನ್ನು ಅವಮಾನಿಸುವವರಿಗೆ "ನಿಜವಾದ ಶಿವಸೇನೆ ಶೈಲಿಯಲ್ಲಿಯೇ ಉತ್ತರ ನೀಡಲಾಗುವುದು

ಪಾಲ್ಘರ್: ಮರಾಠಿ ವಿರೋಧಿ ಹೇಳಿಕೆ ಹಿನ್ನೆಲೆಯಲ್ಲಿ ಆಟೋ ರಿಕ್ಷಾ ಚಾಲಕನೊಬ್ಬನನ್ನು ಶಿವಸೇನೆ-ಯುಬಿಟಿ ಕಾರ್ಯಕರ್ತರು ಥಳಿಸಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದಿದೆ. ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಮಹಾರಾಷ್ಟ್ರದಲ್ಲಿ ಭಾಷಾ ವಿವಾದವನ್ನು ಮತ್ತಷ್ಟು ಹೆಚ್ಚಿಸಿದೆ. ಈ ವಿಡಿಯೋವನ್ನು ನೋಡಿದ್ದೇವೆ ಆದರೆ, ಇಲ್ಲಿಯವರೆಗೂ ಯಾವುದೇ ದೂರು ದಾಖಲಾಗಿಲ್ಲ. ಹೀಗಾಗಿ ಯಾವುದೇ ಪ್ರಕರಣ ದಾಖಲಿಸಲಾಗಿಲ್ಲ ಎಂದು ಪೊಲೀಸರು ಭಾನುವಾರ ಹೇಳಿದ್ದಾರೆ.

ಆಟೋ-ರಿಕ್ಷಾ ಚಾಲಕನಿಗೆ ತಕ್ಕ ಪಾಠ ಕಲಿಸಿದ್ದಾರೆ. ಮರಾಠಿ ಭಾಷೆ ಮತ್ತು ರಾಜ್ಯವನ್ನು ಅವಮಾನಿಸುವವರಿಗೆ "ನಿಜವಾದ ಶಿವಸೇನೆ ಶೈಲಿಯಲ್ಲಿಯೇ ಉತ್ತರ ನೀಡಲಾಗುವುದು ಎಂದು ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ- ಯುಬಿಟಿ ಬಣದ ಸ್ಥಳೀಯ ಪದಾಧಿಕಾರಿಯೊಬ್ಬರು ಹೇಳಿದ್ದಾರೆ.

ಪಾಲ್ಘರ್‌ನ ವಿರಾರ್ ಪ್ರದೇಶದಲ್ಲಿ ನೆಲೆಸಿರುವ ವಲಸಿಗ ಆಟೋ ರಿಕ್ಷಾ ಚಾಲಕ, ಮರಾಠಿ ಭಾಷೆ, ಮಹಾರಾಷ್ಟ್ರ ಮತ್ತು ಮರಾಠಿ ಗಣ್ಯರ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಇದರ ಕ್ಲಿಪ್ ಈ ಹಿಂದೆ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುವ ಮೂಲಕ ಸ್ಥಳೀಯ ರಾಜಕೀಯ ಪಕ್ಷಗಳಿಂದ ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಶನಿವಾರ ಈ ಘಟನೆ ನಡೆದಿದ್ದು, ವಿರಾರ್ ರೈಲು ನಿಲ್ದಾಣದ ಬಳಿಯ ಜನನಿಬಿಡ ರಸ್ತೆಯಲ್ಲಿ ಮಹಿಳೆಯರೂ ಸೇರಿದಂತೆ ಶಿವಸೇನೆ-ಯುಬಿಟಿ ಕಾರ್ಯಕರ್ತರ ಗುಂಪು ಆಟೋ-ರಿಕ್ಷಾ ಚಾಲಕನಿಗೆ ಕಪಾಳಮೋಕ್ಷ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ನಂತರ ಈ ಹಿಂದೆ ಅನುಚಿತವಾಗಿ ವರ್ತಿಸಿದ ವ್ಯಕ್ತಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾನೆ. ಜೊತೆಗೆ ರಾಜ್ಯ ಮತ್ತು ಅದರ ಭಾಷೆ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಅವಮಾನ ಪಡಿಸಿದ್ದಕ್ಕಾಗಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರು.

ಘಟನಾ ಸ್ಥಳದಲ್ಲಿದ್ದ ಶಿವಸೇನೆ-ಯುಬಿಟಿ ವಿರಾರ್ ನಗರ ಮುಖ್ಯಸ್ಥ ಉದಯ್ ಜಾಧವ್ ಆಟೋ ಚಾಲಕನ ಮೇಲಿನ ಹಲ್ಲೆ ಕ್ರಮವನ್ನು ಸಮರ್ಥಿಸಿಕೊಂಡರು. "ಯಾರಾದರೂ ಮರಾಠಿ ಭಾಷೆ, ಮಹಾರಾಷ್ಟ್ರ ಅಥವಾ ಮರಾಠಿ ಜನರನ್ನು ಅವಮಾನಿಸುವ ಧೈರ್ಯ ಮಾಡಿದರೆ, ನಿಜವಾದ ಶಿವಸೇನೆ ಶೈಲಿಯಲ್ಲಿ ಉತ್ತರ ನೀಡಲಾಗುವುದು, ಸುಮ್ಮನೆ ಕುಳಿತುಕೊಳ್ಳುವುದಿಲ್ಲ ಎಂದು ಜಾಧವ್ ಸುದ್ದಿಗಾರರಿಗೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT