ಸಿಜೆಐ ಬಿಆರ್ ಗವಾಯಿ 
ದೇಶ

ತೀವ್ರ ಸೋಂಕು: CJI BR Gavai ಆಸ್ಪತ್ರೆಗೆ ದಾಖಲು!

ಇತ್ತೀಚೆಗೆ ಹೈದರಾಬಾದ್‌ಗೆ ಭೇಟಿ ನೀಡಿದ್ದಾಗ ಬಿಆರ್ ಗವಾಯಿ ಅವರಿಗೆ ತೀವ್ರ ಸೋಂಕು ಇರುವುದು ಪತ್ತೆಯಾಗಿತ್ತು.

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ತೀವ್ರ ಸೋಂಕಿಗೆ ತುತ್ತಾಗಿ ಸೋಮವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಇತ್ತೀಚೆಗೆ ಹೈದರಾಬಾದ್‌ಗೆ ಭೇಟಿ ನೀಡಿದ್ದಾಗ ಬಿಆರ್ ಗವಾಯಿ ಅವರಿಗೆ ತೀವ್ರ ಸೋಂಕು ಇರುವುದು ಪತ್ತೆಯಾಗಿತ್ತು. ಇದೀಗ ಅವರು ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಸೋಮವಾರ ಅಧಿಕೃತ ಮೂಲವೊಂದು ತಿಳಿಸಿದೆ.

ಸಿಜೆಐ ಉತ್ತಮವಾಗಿ ಪ್ರತಿಕ್ರಿಯಿಸುತ್ತಿದ್ದಾರೆ ಮತ್ತು ಒಂದು ಅಥವಾ ಎರಡು ದಿನಗಳಲ್ಲಿ ಬಿಡುಗಡೆಯಾಗಿ ಕರ್ತವ್ಯಕ್ಕೆ ಮರಳುವ ನಿರೀಕ್ಷೆಯಿದೆ ಎಂದು ಅದು ತಿಳಿಸಿದೆ.

ಜುಲೈ 12 ರಂದು ನಲ್ಸರ್ ಕಾನೂನು ವಿಶ್ವವಿದ್ಯಾಲಯದಲ್ಲಿ ಘಟಿಕೋತ್ಸವ ಭಾಷಣ ಮಾಡಲು ಸಿಜೆಐ ಹೈದರಾಬಾದ್‌ ಗೆ ತೆರಳಿದ್ದರು.

ಅದೇ ದಿನ ಸಿಜೆಐ ಗವಾಯಿ ಅವರು "ಬಾಬಾಸಾಹೇಬ್ ಡಾ ಬಿ ಆರ್ ಅಂಬೇಡ್ಕರ್ ಸಂವಿಧಾನ ಸಭೆಯ ಸಂವಿಧಾನ" ಎಂಬ ಶೀರ್ಷಿಕೆಯ ವಿಶೇಷ ಅಂಚೆ ಕವರ್ ಮತ್ತು "ಭಾರತದ ಸಂವಿಧಾನದಲ್ಲಿ ಕಲೆ ಮತ್ತು ಕ್ಯಾಲಿಗ್ರಫಿ" ಕುರಿತು ಚಿತ್ರ ಪೋಸ್ಟ್‌ಕಾರ್ಡ್‌ಗಳ ಸೆಟ್ ಅನ್ನು ಹೈದರಾಬಾದ್‌ನಲ್ಲಿ ಬಿಡುಗಡೆ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

India-Pakistan ಯುದ್ಧವನ್ನು ನಾನು ತಡೆಯದೇ ಹೋಗಿದ್ದರೆ 35 ಮಿ. ಜನರು ಸಾಯುತ್ತಿದ್ದರು: ಡೊನಾಲ್ಡ್ ಟ್ರಂಪ್

ಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್‌ ಪ್ರವಾಸ ಆರಂಭ; ಸಂಸತ್ತು ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ-Video

'ಮತ್ತೆ ವೈಭವದತ್ತ ಮರಳಿದ್ದೇವೆ, ಹಿಂದೆಂದಿಗಿಂತ ಶ್ರೀಮಂತ ಮತ್ತು ಬಲಿಷ್ಠರಾಗಿದ್ದೇವೆ': ದೇಶವನ್ನುದ್ದೇಶಿಸಿ Donald Trump ಭಾಷಣ-Video

'ಸಂಪುಟಕ್ಕೆ ಹೊಸ ಪೀಳಿಗೆ, ಹೊಸ ಆಲೋಚನೆ ಇರುವವರು ಸೇರಬೇಕು, ನಾವು ಎಷ್ಟು ದಿನ ಗೂಟ ಹೊಡೆದುಕೊಂಡು ಕೂರಲು ಸಾಧ್ಯ'?: ಡಿ ಕೆ ಶಿವಕುಮಾರ್

ಕೇರಳ- ಕೇರಳಂ: ಯಾವುದೇ ಪ್ರಯೋಜನವಿಲ್ಲ, ಹೆಸರು ಬದಲಿಸುವ ಬದಲು ಹೆಚ್ಚಿನ ಅನುದಾನ ಘೋಷಿಸಿ; ಅಚ್ಚರಿ ಮೂಡಿಸಿದ ಶಶಿ ತರೂರ್ ವಿರೋಧ!

SCROLL FOR NEXT