ನರ್ಸ್ ನಿಮಿಷಾ ಪ್ರಿಯಾ  online desk
ದೇಶ

ಯೆಮೆನ್‌ನಲ್ಲಿ ಕೇರಳ ನರ್ಸ್‌ಗೆ ಗಲ್ಲು ಶಿಕ್ಷೆ: ನಿಮಿಷಾ ರಕ್ಷಣೆಗೆ ಪ್ರಭಾವಿ ಸುನ್ನಿ ಧರ್ಮಗುರು ಪ್ರಯತ್ನ

ಶೇಖ್ ಅಬುಬಕರ್ ಅಹ್ಮದ್ ಎಂದು ಅಧಿಕೃತವಾಗಿ ಕರೆಯಲ್ಪಡುವ ಮತ್ತು ಭಾರತದ ಗ್ರ್ಯಾಂಡ್ ಮುಫ್ತಿ ಎಂಬ ಬಿರುದನ್ನು ಹೊಂದಿರುವ 94 ವರ್ಷದ ಮುಸ್ಲಿಯಾರ್, ಯೆಮೆನ್‌ನ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ.

ಕೋಝಿಕೋಡ್: ಯೆಮೆನ್‌ನಲ್ಲಿ ಗಲ್ಲು ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನರ್ಸ್‌ಗೆ ರಕ್ಷಣೆಗೆ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರು ಧಾವಿಸಿದ್ದು, "ಸಾಧ್ಯವಾದ ಎಲ್ಲಾ ಪ್ರಯತ್ನಗಳನ್ನು" ಮಾಡುತ್ತಿದ್ದಾರೆ ಎಂದು ಸೋಮವಾರ ತಿಳಿಸಲಾಗಿದೆ.

ಶೇಖ್ ಅಬುಬಕರ್ ಅಹ್ಮದ್ ಎಂದು ಅಧಿಕೃತವಾಗಿ ಕರೆಯಲ್ಪಡುವ ಮತ್ತು ಭಾರತದ ಗ್ರ್ಯಾಂಡ್ ಮುಫ್ತಿ ಎಂಬ ಬಿರುದನ್ನು ಹೊಂದಿರುವ 94 ವರ್ಷದ ಮುಸ್ಲಿಯಾರ್, ಯೆಮೆನ್‌ನ ಧಾರ್ಮಿಕ ಮುಖಂಡರೊಂದಿಗೆ ಮಾತುಕತೆ ನಡೆಸಿದ್ದಾರೆ. ಅವರು 2017ರಲ್ಲಿ ಅವರು ಕೊಲೆಯಾದ ಯೆಮೆನ್ ಪ್ರಜೆ ತಲಾಲ್ ಅಬ್ದೋ ಮಹ್ದಿ ಅವರ ಕುಟುಂಬದೊಂದಿಗೆ ಸಂಧಾನ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.

ಇದೇ ಜುಲೈ 16ರಂದು ಕೊಲೆ ಪ್ರಕರಣದಲ್ಲಿ ನಿಮಿಷಾ ಪ್ರಿಯಾ ಅವರನ್ನು ಗಲ್ಲಿಗೇರಿಸಲಾಗುತ್ತಿದೆ.

ಬ್ಲಡ್ ಮನಿ(ಮೃತರ ಕುಟುಂಬಕ್ಕೆ ಅವರು ಕೇಳಿದಷ್ಟು ಆರ್ಥಿಕ ಸಹಾಯ ನೀಡುವುದು) ಕುರಿತು ಮಾತುಕತೆಗಳು ನಡೆದಿವೆ ಮತ್ತು ವಿವರಗಳನ್ನು ಕೇರಳದಲ್ಲಿ ಸಂಬಂಧಪಟ್ಟವರಿಗೆ ತಿಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಆದಾಗ್ಯೂ, ಮಾತುಕತೆ ಯಾವ ಹಂತದಲ್ಲಿದೆ ಎಂಬ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ.

ಯೆಮೆನ್‌ನಲ್ಲಿ ಶರಿಯಾ ಕಾನೂನಿನಡಿಯಲ್ಲಿ, ಬ್ಲಡ್ ಮನಿ ಹತ್ಯೆಯಾದ ವ್ಯಕ್ತಿಯ ಕುಟುಂಬಕ್ಕೆ ನೀಡಲಾಗುವ ಕಾನೂನುಬದ್ಧವಾದ ಆರ್ಥಿಕ ಪರಿಹಾರವಾಗಿದೆ.

ಏತನ್ಮಧ್ಯೆ, ಮಾತುಕತೆಗಳನ್ನು ಸುಗಮಗೊಳಿಸಲು ಇಲ್ಲಿನ ಮುಸ್ಲಿಯಾರ್ ಅವರ ಪ್ರಧಾನ ಕಚೇರಿಯಲ್ಲಿ, ಪ್ರತ್ಯೇಕ ಕಚೇರಿಯನ್ನು ತೆರೆಯಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾಲಕ್ಕಾಡ್ ಜಿಲ್ಲೆಯ ನಿಮಿಷಾ ಪ್ರಿಯಾ ಅವರಿಗೆ 2020 ರಲ್ಲಿ ಮರಣದಂಡನೆ ವಿಧಿಸಲಾಯಿತು ಮತ್ತು ಅವರ ಅಂತಿಮ ಮೇಲ್ಮನವಿಯನ್ನು 2023 ರಲ್ಲಿ ತಿರಸ್ಕರಿಸಲಾಯಿತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಮಸೂದೆ ವಿರುದ್ಧ ರಾಷ್ಟ್ರಪತಿಗೆ ನಿಯೋಗ; ರಾಜ್ಯ ಸರ್ಕಾರ

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ, ಪುನರ್ ಪರಿಶೀಲನೆಗೆ ಒತ್ತಾಯ

'ರಾಜಕೀಯ ದ್ವೇಷ, ಪೊಲೀಸರ ವೈಫಲ್ಯ' ಬಳ್ಳಾರಿ ಹಿಂಸಾಚಾರ ಘಟನೆಗೆ ಕಾರಣ: ಕಾಂಗ್ರೆಸ್ ಸಮಿತಿ

ಈ ಬಾರಿ ಫೆ.1ರ ಭಾನುವಾರ ಕೇಂದ್ರ ಬಜೆಟ್, ಜ. 29ಕ್ಕೆ ಆರ್ಥಿಕ ಸಮೀಕ್ಷೆ ಮಂಡನೆ!

'ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ವ್ಯಾಪಾರ ಒಪ್ಪಂದ ಹಳ್ಳ ಹಿಡಿದಿದೆ': ಲುಟ್ನಿಕ್ ಹೇಳಿಕೆ ತಳ್ಳಿಹಾಕಿದ MEA, ಹೇಳಿದ್ದೇನು?

SCROLL FOR NEXT